karnataka cm

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು […]

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ Read More »

ಕರ್ನಾಟಕ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕಲಾವಿದರ ಮಾಸಾಶನ ಹಣವನ್ನು 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ Read More »

ಕರ್ನಾಟಕ

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಎಂಟ್ರಿಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನಹರಿಸಿ ಎಂದು

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ Read More »

ಕರ್ನಾಟಕ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಮನವಿ ಮಾಡಲಾಗಿದೆ.   ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ದೂರಿನಲ್ಲಿ ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..! Read More »

ಕರ್ನಾಟಕ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ,  ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.   “ಸಿಎಂ ಸಿದ್ದರಾಮಯ್ಯ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರ್ನಾಟಕ

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ತೆರಿಗೆ ವಂಚನೆ, ಸೋರಿಕೆ ಹಾಗೂ ತೆರಿಗೆ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ‌ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತೆರಿಗೆ ಸಂಗ್ರಹದ ಪ್ರಗತಿ ಹೆಚ್ಚಿಸಿ ಎಂದು ಹೇಳಿದ್ದಾರೆ.

ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ Read More »

ಕರ್ನಾಟಕ

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರದಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನಿಂದಲೂ ರಾಜ್ಯ ರಫ್ತು ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದು, ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕೆಗಳ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top