karnataka

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಕೃಷ್ಣೆ, ಭೀಮಾ, ವರದಾ, ದೂದ್ ಗಂಗಾ, ತುಂಗಾ, ಮಲಪ್ರಭಾ, ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿನ ಹಲವು ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ […]

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ Read More »

ಕರ್ನಾಟಕ

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಡಾ. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ಅವರ ಸಾವಿನ ಬೆನ್ನಲ್ಲೇ ನೇತ್ರದಾನ ಮಾಡಿದ್ದರು. ಅಲ್ಲದೇ ನೇತ್ರದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ರಾಜ್ಯ ಸರಕಾರ ಆಹ್ವಾನಿಸಿದೆ. ಡಾ. ರಾಜ್​ಕುಮಾರ್ ಕುಟುಂಬವು ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬ ಗುರುತಿಸಿಕೊಂಡಿದೆ. ರಾಜ್​ಕುಮಾರ್

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು.

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. 545 ಪೊಲೀಸ್‌ ಸಬ್‌ ಇನ್ಸ್ ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ. ಈ ತನಿಖಾ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಪಿಎಸ್ಐ 545 ಖಾಲಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ Read More »

ಕರ್ನಾಟಕ

ಗೃಹಲಕ್ಷ್ಮೀ ನೋಂದಣಿ ಪರಿಶೀಲಿಸಲು ಕರ್ನಾಟಕ ಒನ್ ಕೇಂದ್ರಕ್ಕೆ ಡಿಕೆಶಿ ದಿಢೀರ್ ಭೇಟಿ..!

(ನ್ಯೂಸ್ ಕಡಬ)newskadaba.com ರಾಮನಗರ, ಜು.22. ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ. ಕನಕಪುರದ ಎಸ್ಎಲ್ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ, ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಡಿಸಿಎಂ ಅವರನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಇನ್ನು ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ತೊಡಕು ಬಗ್ಗೆ ಮಹಿಳೆಯೊಬ್ಬರು ನೀವೇದಿಸಿಕೊಂಡಾಗ ಅದಕ್ಕೆ ಪರಿಹಾರವನ್ನು ಡಿಕೆಶಿ

ಗೃಹಲಕ್ಷ್ಮೀ ನೋಂದಣಿ ಪರಿಶೀಲಿಸಲು ಕರ್ನಾಟಕ ಒನ್ ಕೇಂದ್ರಕ್ಕೆ ಡಿಕೆಶಿ ದಿಢೀರ್ ಭೇಟಿ..! Read More »

ಕರ್ನಾಟಕ

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಗೆ ಆರಂಭದಲ್ಲೇ ವಿಘ್ನ ಕಾಡಿದ್ದು, ದಿನವೊಂದಕ್ಕೆ ಒಂದು ಕೇಂದ್ರದಿಂದ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸುವಂತೆ ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಿರ್ಧಾರದಿಂದ ‘ಗೃಹಲಕ್ಷ್ಮಿಯರು’ ಸಹನೆ ಕಳೆದುಕೊಂಡಿದ್ದಾರೆ. 60 ಅರ್ಜಿ ಸ್ವೀಕರಿಸುವ ಕೇಂದ್ರದಲ್ಲಿ 200-300 ಮಹಿಳೆಯರು ನೋಂದಣಿಗೆ ತೆರಳಿರುವುದರಿಂದ ಕೇಂದ್ರದ ಸಿಬ್ಬಂದಿ ಹೈರಾಣಾಗಿದ್ದಾರೆ. ಈ ಸಮಸ್ಯೆ ಉಂಟಾಗಿದ್ದರಿಂದ ಒಂದು ದಿನದ ನಂತರ ಸರ್ಕಾರ ನಿಯಮ ಬದಲಾಯಿಸಿದ್ದು, ದಿನದ ನೋಂದಣಿ ಮಿತಿಯನ್ನು ತೆರವುಗೊಳಿಸಿದೆ. ಇನ್ನು ಗೃಹಲಕ್ಷ್ಮಿ ಯೋಜನೆಗಾಗಿ

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ Read More »

ಕರ್ನಾಟಕ

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ

(ನ್ಯೂಸ್ ಕಡಬ)newskadaba.com ಹುಣಸೂರು, ಜು.22. ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಭೇಟೆಯಾಡಿ, ಜೋಳದ ಹೊಲದಲ್ಲಿ ಬಚ್ಚಿಟ್ಟಿದ್ದ ಮಾಂಸ, ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪ್ರದೀಪ್ ಅಲಿಯಾಸ್ ಕುಂಡ, ಮಧು ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top