karnataka

ಹಾಲು ಉತ್ಪಾದಕರಿಗೆ ಶಾಕ್➤ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.31 ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹಾಲು ಖರೀದಿ ದರದಲ್ಲಿ ಲೀಟರ್ ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದ್ದು, ಜೂ. 1 ರಿಂದ ಪರಿಷ್ಕೃತ ಆದೇಶ ಜಾರಿಗೆ ಬರುತ್ತದೆ.      

ಹಾಲು ಉತ್ಪಾದಕರಿಗೆ ಶಾಕ್➤ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ.! Read More »

ಕರ್ನಾಟಕ

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ,ಮೇ.31 ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.    

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಮೃತ್ಯು.! Read More »

ಕರ್ನಾಟಕ

ಭಾರತೀಯ ನೌಕಾದಳಕ್ಕೆರಾಜ್ಯದಿಂದ ಆಯ್ಕೆಯಾದ ಯುವತಿ

(ನ್ಯೂಸ್ ಕಡಬ)newskadaba ದಾವಣಗೆರೆ, ಮೇ, 31. ದಾವಣಗೆರೆ ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಮನೆಗೆ ಆಧಾರಸ್ತಂಭವಾಗಿದ್ದ ತಂದೆ ಮೃತಪಟ್ಟಿದ್ದರು, ಹೀಗಿದ್ದರೂ ಕಠಿಣ ಪರಿಶ್ರಮದಿಂದ ಯುವತಿಯೊಬ್ಬರು ಇದೀಗ ಭಾರತೀಯ ನೌಕಾದಳಕ್ಕೆ ಆಯ್ಕೆಯಾಗಿದ್ದಾರೆ.ತಾಯಿ ಅಂಗನವಾಡಿಯಲ್ಲಿ ಆಯಾ ಕೆಲಸ ಮಾಡಿ ದುಡಿದು ಶಿಕ್ಷಣ ನೀಡಿದ್ದೇ ದಾವಣಗೆರೆ ಜಿಲ್ಲೆಯ ಹರಿಹರದ ಯುವತಿಯ ಈ ಸಾಧನೆಗೆ ಸಹಕಾರಿಯಾಗಿದೆ. ಹರಿಹರ ನಗರದ ನಿವಾಸಿ ಲತಾ ಎಂಬವರ ಪುತ್ರಿ ಭೂಮಿಕ ಇದೀಗ ನೌಕಾದಳಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ಯುವತಿ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ತಂದೆಯನ್ನು ಕಳೆದುಕೊಂಡ ಭೂಮಿಕಾರಿಗೆ

ಭಾರತೀಯ ನೌಕಾದಳಕ್ಕೆರಾಜ್ಯದಿಂದ ಆಯ್ಕೆಯಾದ ಯುವತಿ Read More »

ಕರ್ನಾಟಕ

ಅಕ್ರಮ ಸಂಬಂಧ ಬಯಲು➤ ಪ್ರೇಮಿಗಳು ಮನನೊಂದು ಆತ್ಮಹತ್ಯೆ.!

(ನ್ಯೂಸ್ ಕಡಬ)newskadaba.com ಕುಷ್ಟಗಿ ,ಮೇ.31  ಗಂಡನ ಅಕ್ರಮ ಸಂಬಂಧದ ಹಿನ್ನೆಲೆಯನ್ನು ಪ್ರಶ್ನೆ ಮಾಡಿದ್ದಕ್ಕೆ ಗಂಡ ಹಾಗೂ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕು ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಸಂಬಂಧದ ಗುಟ್ಟು ಪತ್ನಿಯಿಂದ ರಟ್ಟಾಗಿರುವ ಬಗ್ಗೆ ಮನನೊಂದ ಪಾಗಲ್ ಪ್ರೇಮಿಗಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಕ್ರಮ ಜೋಡಿಯ ದುರಂತ ಅಂತ್ಯದ ಬಗ್ಗೆ ಹನುಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸೈ ಸುನೀಲ್ ಎಚ್. ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದ್ದಾರೆ.      

ಅಕ್ರಮ ಸಂಬಂಧ ಬಯಲು➤ ಪ್ರೇಮಿಗಳು ಮನನೊಂದು ಆತ್ಮಹತ್ಯೆ.! Read More »

ಕರ್ನಾಟಕ

ರಾತ್ರೋರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆಶಿ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.31 ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಗಮಿಸಿ ಮಾತುಕತೆ ನಡೆಸಿದರು. ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ್ ಕೆಲಕಾಲ ಮಾತುಕತೆ ನಡೆಸಿದರು.  ಅವರ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.        

ರಾತ್ರೋರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ

‘ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೆ ತರುವುದಿಲ್ಲ’ ➤ ಸತೀಶ್ ಜಾರಕಿಹೊಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.31. ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಯಾವಾಗಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತೇವೆ. ಇದು ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾನಿಕಾರಕವಾಗಿದೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದರು.  

‘ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೆ ತರುವುದಿಲ್ಲ’ ➤ ಸತೀಶ್ ಜಾರಕಿಹೊಳಿ Read More »

ಕರ್ನಾಟಕ

ಬೇಸಿಗೆ ರಜೆ ಮುಕ್ತಾಯ➤ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದಿನಿಂದ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.31 ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ.2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆ ಆರಂಭಿಸಬೇಕೆಂದು ತಿಳಿಸಲಾಗಿದೆ. ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲಾಗದಿದ್ದರೆ ರಜೆ ಘೋಷಿಸಲು

ಬೇಸಿಗೆ ರಜೆ ಮುಕ್ತಾಯ➤ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದಿನಿಂದ ಆರಂಭ Read More »

ಕರ್ನಾಟಕ

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌‌ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ದಾಖಲೆಗಳನ್ನು ಪರಿಶೀಲಿಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಕಚೇರಿಗಳ

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ Read More »

ಕರಾವಳಿ

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಆರ್ ಪಿಪಿಎಸ್ ವಿದ್ಯುತ್ ಘಟಕಗಳಿಗೆ ಪೂರೈಕೆ ಮಾಡುವ ಕಲ್ಲಿದ್ದಲು ರೇಕ್ ಪೂರೈಕೆ ಮಾಡುವ ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ (28) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ಕಾರ್ಮಿಕ ಎಂದು ಗುರುತಿಸಲಾಗಿದೆ.ಕಲ್ಲಿದ್ದಲು ವಿಭಾಗದ ವ್ಯಾಗನ್ 7ರಲ್ಲಿ ಕಲ್ಲಿದ್ದಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಬಂದು ಕಲ್ಲಿದ್ದಲು ರೇರ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಶಕ್ತಿ ನಗರ ಪೊಲೀಸರು ತಿಳಿಸಿದ್ದಾರೆ.    

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ Read More »

ಕರ್ನಾಟಕ

ಮೈಸೂರಿನಲ್ಲಿ ನಡೆದ ಭೀಕರ ಅಪಘಾತ ➤ಸಂಗನಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

(ನ್ಯೂಸ್ ಕಡಬ)newskadaba.com, ಮೈಸೂರು ಮೇ,30ಮೈಸೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ 9 ಜನರ ಸಾಮೂಹಿಕ ಅಂತ್ಯಕ್ರಿಯೆಯನ್ನು  ಸಂಗನಕಲ್ಲು ಗ್ರಾಮದಲ್ಲಿ ನಡೆಸಲಾಯಿತು.ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ 9 ಜನರ ಮೃತದೇಹಗಳನ್ನು ಗ್ರಾಮದಲ್ಲಿ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳ ಪ್ರಕಾರ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು.  

ಮೈಸೂರಿನಲ್ಲಿ ನಡೆದ ಭೀಕರ ಅಪಘಾತ ➤ಸಂಗನಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ Read More »

ಕರ್ನಾಟಕ
Scroll to Top