karnataka

ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30  ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ‘ಅವರು ಬರೆದಿದ್ದೇ ಇತಿಹಾಸವಲ್ಲ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯ ಅಲ್ಲದ್ದನ್ನು ತೆಗೆದು ಹಾಕುತ್ತೇವೆ’ ಎಂದು ಪ್ರತಿಕ್ರಿಯಿಸಿದರು.    

ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ Read More »

ಕರ್ನಾಟಕ

ಮಹಿಳೆಯರಿಗೆ ಗುಡ್ ನ್ಯೂಸ್‌  ➤ ಉಚಿತ ಪ್ರಯಾಣಕ್ಕೆ ‘ಗ್ರೀನ್‌ ಸಿಗ್ನಲ್‌’ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ,30. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು.  

ಮಹಿಳೆಯರಿಗೆ ಗುಡ್ ನ್ಯೂಸ್‌  ➤ ಉಚಿತ ಪ್ರಯಾಣಕ್ಕೆ ‘ಗ್ರೀನ್‌ ಸಿಗ್ನಲ್‌’ ನೀಡಿದ ರಾಜ್ಯ ಸರ್ಕಾರ Read More »

ಕರ್ನಾಟಕ

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಪಿ. ವೆಂಕಟೇಶ್ (62) ಎಂಬುವವರು ಮೃತಪಟ್ಟಿದ್ದಾರೆ. ದೀಪಾಂಜಲಿನಗರ ಮೆಟ್ರೊ ನಿಲ್ದಾಣ ಬಳಿ ಇರುವ ಮೇಲ್ಸೇತುವೆಯಲ್ಲಿ ಎದುರಿಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ವೆಂಕಟೇಶ್ ಅವರ ವಾಹನ ಡಿಕ್ಕಿ ಹೊಡೆದಿತ್ತು. ವಾಹನ ಸಮೇತ ಉರುಳಿಬಿದ್ದಿದ್ದ ವೆಂಕಟೇಶ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.ಅಪಘಾತ ಸಂಬಂಧ ಪ್ರಕರಣ

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤7 ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಲಗ್ಗೆರೆಯ ಪ್ರೇಮನಗರದ ಮಂಜುನಾಥ್ (42), ನ್ಯೂ ರಿಂಗ್ ರಸ್ತೆಯ ನಾಗರಾಜ್(38), ಗೋಪಾಲ್ (35), ಕಿರಣ್ ಕುಮಾರ್ (29), ಚೌಡೇಶ್ವರಿ ನಗರದ ಮಣಿಕಂಠನ್(23), ಕಾರ್ತಿಕ್ (34) ಹಾಗೂ ಬಾಬು (35) ಎಂದು ಗುರ್ತಿಸಲಾಗಿದೆ.    

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤7 ಆರೋಪಿಗಳ ಅರೆಸ್ಟ್ Read More »

ಕರ್ನಾಟಕ

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.    

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ Read More »

ಕರ್ನಾಟಕ

ಪ್ರಿಯತಮನ ಮೇಲೆ ಬಿಸಿ ನೀರು ಎರಚಿದ ಮಹಿಳೆ.!➤ದೂರು ದಾಖಲು

(ನ್ಯೂಸ್ ಕಡಬ)newskadaba.com  ಕಲಬುರಗಿ,ಮೇ.30 ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆ ಬಿಸಿ ನೀರು ಎರಚಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಜಯ್‌ ಕುಮಾರ್‌ ಎಂದು ಗುರುತಿಸಲಾಗಿದೆ.  ವಿಜಯ್‌ ಕುಮಾರ್‌ ಬಟ್ಟೆ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ. ಆತನಿಗೆ ತನ್ನದೇ ಜಿಲ್ಲೆಯ ಮಹಿಳೆಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ನಡುವೆ ಉತ್ತಮ ಸ್ನೇಹವಿತ್ತು. ಆದರೆ, ಆಕೆಗೆ ವಿವಾಹವಾಗಿತ್ತು. ಆದರೂ ಅವಳು ಈತನನ್ನು ಪ್ರೀತಿಸುತ್ತಿದ್ದಳು ಮತ್ತು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಎಂದು ಮೂಲಗಳು ತಿಳಿಸಿವೆ. ವಿಜಯ್‌ ಕುಮಾರ್‌ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ,ವಿಷಯ ತಿಳಿದ

ಪ್ರಿಯತಮನ ಮೇಲೆ ಬಿಸಿ ನೀರು ಎರಚಿದ ಮಹಿಳೆ.!➤ದೂರು ದಾಖಲು Read More »

ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.!➤ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ದೊಡ್ಡ ತಲೆನೋವು 

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಮೇ.30  ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಇದು ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ ಅತ್ಯುತ್ತಮ ತರಬೇತಿ ಪಡೆದ, ಅನುಭವಿ ಶಿಕ್ಷಕರ ಪಡೆಯ ಅಗತ್ಯವಿದೆ. ಆದರೆ, ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವುದು ಒಂದೆಡೆಯಾದರೆ ಸರ್ಕಾರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ಎಲ್ಲಕ್ಕಿಂತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.    

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.!➤ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ದೊಡ್ಡ ತಲೆನೋವು  Read More »

ಕರ್ನಾಟಕ

ವಿಟಿಆರ್ ಬಿಎಫ್ ತರಬೇತಿ ವಿಮಾನ ಭೂ ಸ್ಪರ್ಶ.!➤ ತಪ್ಪಿದ ಭಾರಿ ಅನಾಹುತಾ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.30 ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂ ಸ್ಪರ್ಶವಾದ ಘಟನೆ ನಡೆದಿದೆ. ವಿಮಾನದಲ್ಲಿ ಇಬ್ಬರು ಇದ್ದರು ಎನ್ನಲಾಗುತ್ತಿದ್ದು, ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು ಎನ್ನಲಾಗಿದೆ. ಘಟನೆಗೆ ಆಕಾರಣ ತಾಂತ್ರಿಕ ತೊಂದರೆ ಎನ್ನಲಾಗುತ್ತಿದೆ. ಯಾರಿಗೂ ಕೂಡ ಯಾವುದೇ ತೊಂದ್ರೆಯಾಗಿಲ್ಲ ಎನ್ನಲಾಗಿದೆ. ಇನ್ನೂ ಘಟನ ಸ್ಥಳಕ್ಕೆ ಮಾರಿಹಾರಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.  

ವಿಟಿಆರ್ ಬಿಎಫ್ ತರಬೇತಿ ವಿಮಾನ ಭೂ ಸ್ಪರ್ಶ.!➤ ತಪ್ಪಿದ ಭಾರಿ ಅನಾಹುತಾ Read More »

ಕರ್ನಾಟಕ

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮೇ.30. ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದೆ ಎಂದು ವರದಿ ತಿಳಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ.ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.      

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ Read More »

ಕರ್ನಾಟಕ
Scroll to Top