karnataka

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.24. ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ಡಿವೈಎಸ್ಪಿ […]

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ Read More »

ಕರಾವಳಿ

‘ಪಠ್ಯ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ’  ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.24. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಕುರಿತಂತೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲಿ ಸಚಿವ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

‘ಪಠ್ಯ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ’  ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.24. 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇಶದ ಹಲವೆಡೆ ಮಳೆ ಅರ್ಭಟ ಹೆಚ್ಚಾಗಳಿದೆ.!➤ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಕಳೆದು ಮೂರು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಸುರಿಯುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅಂಡರ್‌ಪಾಸ್‌, ರಸ್ತೆಗಳಲ್ಲಿ ನೀರು ತುಂಬಿಕೊಳ್ಳುತ್ತಿರುವುದರಿಂದ ರಸ್ತೆ ಸಂಚಾರ ಸುಗಮವಾಗಿರದೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.    

ದೇಶದ ಹಲವೆಡೆ ಮಳೆ ಅರ್ಭಟ ಹೆಚ್ಚಾಗಳಿದೆ.!➤ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್​ ಕುಮಾರಸ್ವಾಮಿ ಇದೀಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ. ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ.  

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.! Read More »

ಕರ್ನಾಟಕ

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.    

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.! Read More »

ಕರ್ನಾಟಕ

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ  ಬಿಡುಗಡೆಯ ಭಾಗ್ಯ ಸಿಕ್ಕಿತು.ಸನ್ನಡತೆ ಆಧಾರದಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರವು ಆದೇಶಿಸಿತ್ತು.  ಪರಪ್ಪನ ಅಗ್ರಹಾರ ಜೈಲಿನಿಂದಲೂ ಕೈದಿಗಳು ಬಂಧಮುಕ್ತರಾದರು. ಪರಪ್ಪನ ಅಗ್ರಹಾರದಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು 79 ಮಂದಿಗೆ ಬಿಡುಗಡೆ ಮಾಡಲಾಯಿತು. ಅನಾರೋಗ್ಯದ ಚಿಕಿತ್ಸೆಗೆಂದು ಮೈಸೂರು ಹಾಗೂ ವಿಜಯಪುರದ ತಲಾ ಒಬ್ಬರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆ ತರಲಾಗಿತ್ತು.

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .! Read More »

ಕರ್ನಾಟಕ

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಆನಕ್ಕಾಗಿ ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..! Read More »

ಕರ್ನಾಟಕ

ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕೊಪ್ಪಳ,ಮೇ.24 ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು

ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ Read More »

ಕರ್ನಾಟಕ

ಇಂಗ್ಲಿಷ್‌ನಲ್ಲಿ ಗವಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ

(ನ್ಯೂಸ್ ಕಡಬ)newskadaba.com ಹೊಸಪೇಟೆ,ಮೇ.23 ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಚ್‌.ಆರ್‌. ಗವಿಯಪ್ಪ ಅವರು  ವಿಧಾನಸಭೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಹೊಸದಾಗಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ಸ್ವೀಕರಿಸಿದರು.ಅವರೊಂದಿಗೆ ಗವಿಯಪ್ಪ ಅವರು ಆಂಗ್ಲ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿವೆ.      

ಇಂಗ್ಲಿಷ್‌ನಲ್ಲಿ ಗವಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ Read More »

ಕರ್ನಾಟಕ
Scroll to Top