karnataka

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಶುಭ ಹಾರೈಸಿದರು.ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕರವರಿಗೆ ತಿಳಿಸಿದರು.      

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ Read More »

ಕರ್ನಾಟಕ

ಆಟೋಗೆ  ಡಿಕ್ಕಿಯಾದ ಬೈಕ್➤ಒಬ್ಬರು ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ)newskadaba.com ದಾವಣಗೆರೆ ,ಮೇ.23 ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ  ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಮೃತಪಟ್ಟಿದ್ದಾರೆ. ಹಾಲಸ್ವಾಮಿ ಹಿರೇಮಲ್ಲನಹೊಳೆ ಗ್ರಾಮದ ಗೊಲ್ಲರಹಟ್ಟಿ ನಿವಾಸಿಯಾಗಿದ್ದಾರೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಆಟೋಗೆ  ಡಿಕ್ಕಿಯಾದ ಬೈಕ್➤ಒಬ್ಬರು ಮೃತ್ಯು, ನಾಲ್ವರಿಗೆ ಗಾಯ Read More »

ಕರ್ನಾಟಕ

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ. ಸುನೀಲ್ ಮೃತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಸುನಿಲ್ ಮೃತದೇಹ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ Read More »

ಕರ್ನಾಟಕ

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಫೈನಲ್ ಮಾಡಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ.  

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ? Read More »

ಕರ್ನಾಟಕ

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.23. ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಮಕ್ಕಳು ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ನಾಪತ್ತೆಯಾಗಿರುವ ಎಲ್ಲ ಮಕ್ಕಳು 15-16 ವರ್ಷದ ವಯಸ್ಸಿನವರಾಗಿದ್ದಾರೆ. 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ.  

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ Read More »

ಕರ್ನಾಟಕ

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕರಿಸಿದರು.ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್‌ ಸೂದ್‌ ಅವರು ಆಲೋಕ್‌ ಮೋಹನ್‌ ಅವರಿಗೆ ಬ್ಯಾಟನ್‌ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಿಜಿ- ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಅವರಿಗೆ ಇಲಾಖೆಯಿಂದ ಬೀಳ್ಕೊಡುಗೆ ಪಥಸಂಚಲನ ಮೂಲಕ ಗೌರವಿಸಿ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಲೋಕ್‌ ಮೋಹನ್‌

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ  Read More »

ಕರ್ನಾಟಕ

ಸಂಸದೆ ಸುಮಲತಾ​ ವಿರುದ್ಧ ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಗಂಭೀರ ಆರೋಪ

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.23 ಸಂಸದೆ ಸುಮಲತಾ ಅಂಬರೀಷ್​ ಅವರ ಅನೈತಿಕ ಬೆಂಬಲದಿಂದ ಬಿಜೆಪಿಗೆ ಕಡಿಮೆ ಮತಗಳು ಬಂದಿವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಇಂದ್ರೇಶ್​ ಗಂಭೀರ ಆರೋಪ ಮಾಡಿದ್ದಾರೆ.ಇಂದ್ರೇಶ್​ ಅವರು ಮೇಲುಕೋಟೆ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ. ಸುಮಲತಾ ವಿರುದ್ಧ ಹರಿಹಾಯ್ದಿರುವ ಇಂದ್ರೇಶ್​, ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುತ್ತೇನೆಂದು ಹೇಳಿ, ದರ್ಶನ್​ ಪುಟ್ಟಣ್ಣಯ್ಯ ಪರ ಮಾತನಾಡಿದರು. ದರ್ಶನ್ ಗೆದ್ದರೆ ಖುಷಿ ಎಂದು ರೈತ ಸಂಘದ ಪರ ಮಾತನಾಡಿದ್ದೇ ಕೊನೆಯ ಕ್ಷಣದಲ್ಲಿ ಫಲಿತಾಂಶ ಮೇಲೇ ಪರಿಣಾಮ

ಸಂಸದೆ ಸುಮಲತಾ​ ವಿರುದ್ಧ ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಗಂಭೀರ ಆರೋಪ Read More »

ಕರ್ನಾಟಕ

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.    

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್ Read More »

ಕರ್ನಾಟಕ

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಆ ಬಳಿಕ, ಮಳೆ ಜೋರಾಗಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ Read More »

ಕರ್ನಾಟಕ

ನದಿ ನೀರಿಗೆ ವಿಷಪ್ರಾಶನ ಹಾಕಿದ ದುಷ್ಕರ್ಮಿಗಳು.!

(ನ್ಯೂಸ್ ಕಡಬ)newskadaba.com ಕಾರ್ಕಳ,ಮೇ.23 ಮಲೆಬೆಟ್ಟು ಮತ್ತು ಕೆರ್ವಾಶೆಯ ನಡುವೆ ಹರಿಯುವ ‘ಸ್ವರ್ಣ ನದಿಯ ಬಾಂಕ ಗುಂಡಿ’ಯಲ್ಲಿ ಯಾರೋ ದುಷ್ಕರ್ಮಿಗಳು ರಾತ್ರಿ ವೇಳೆ ನೀರಿಗೆ “ವಿಷಪ್ರಾಶನ” ಮಾಡಿ ನೀರನ್ನೂ ಕಲುಷಿತಗೊಳಿಸಿದ್ದಾರೆ. ದಿನನಿತ್ಯ ಕುಡಿಯಲು ಬಳಸುವ ನೀರಿಗೆ “ಗೇರುಬೀಜ ಎಣ್ಣೆ” ಇಲ್ಲವೇ ಯಾವುದೋ “ಕೀಟನಾಶಕ” ಹಾಕಿರುವ ಶಂಕೆ ಇದ್ದು ಇದರಿಂದ ಯಥೇಚ್ಛವಾಗಿ ಮೀನುಗಳ ಮಾರಣ ಹೋಮವಾಗಿದೆ.ಕುಡಿಯುವ ನೀರಿಗೆ ಬರ ಇರುವ ಈ ಸಮಯದಲ್ಲಿ ದಿನನಿತ್ಯದ ಬಳಕೆಗೆ ಆಧಾರವಾಗಿದ್ದ ನೀರಿನ ಮೂಲಕ್ಕೆ ವಿಷ ಪ್ರಾಶನ ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ.  

ನದಿ ನೀರಿಗೆ ವಿಷಪ್ರಾಶನ ಹಾಕಿದ ದುಷ್ಕರ್ಮಿಗಳು.! Read More »

ಕರ್ನಾಟಕ
Scroll to Top