karnataka

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.22. ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ. ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್‌ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಡುಗು, ಮಿಂಚಿನಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಾನಿ.!➤ರೈಲು ಸಂಚಾರ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ಗುಡುಗು ಮತ್ತು ಮಿಂಚಿನಿಂದಾಗಿ ಪುರಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ಗೆ ಹಾನಿಯಾಗಿದ್ದು ರೈಲು ಸಂಚಾರ ರದ್ದುಗೊಂಡಿದೆ. ಇದರಿಂದಾಗಿ ಹೌರಾ-ಪುರಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ರದ್ದುಗೊಳಿಸಲಾಗಿದೆ. ಗುಡುಗು ಮತ್ತು ಮಿಂಚಿನಿಂದಾಗಿ ಓವರ್ಹೆಡ್ ತಂತಿಗಳು ಹಾನಿಗೊಳಗಾಗಿದ್ದು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಭಾರೀ ಮಳೆ ಗಾಳಿಗೆ ಒಂದೇ ಭಾರತ ರೈಲಿಗೆ ಹಾನಿಯುಂಟಾಗಿದೆ. ರೈಲಿನ ಮೇಲೆ ಮರಗಳು ಬಿದ್ದಿವೆ. ತಂತಿ ತುಂಡಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದುವರೆಗೂ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ.  

ಗುಡುಗು, ಮಿಂಚಿನಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಾನಿ.!➤ರೈಲು ಸಂಚಾರ ರದ್ದು Read More »

ಕರ್ನಾಟಕ

ಒಂದೇ  ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ.!

(ನ್ಯೂಸ್ ಕಡಬ)newskadaba.com ತುಮಕೂರು,ಮೇ.22ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ  ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14) ಎಂಬ ಹೆಸರಿನ ಮಕ್ಕಳು ಕಣ್ಮರೆಯಾಗಿದ್ದಾರೆ. ಚಿಕ್ಕಬಾಣಗೆರೆ ಗ್ರಾಮದ ಮಲ್ಲಿಕಾರ್ಜುನ ಅವರ ಮಕ್ಕಳಾದ ಮಂಜುಳಾ ಹಾಗೂ ಮಧುಕುಮಾರ್, ಹಾಗೂ ಅದೇ ಗ್ರಾಮದ ಕೃಷ್ಣಪ್ಪನ ಮಕ್ಕಳಾದ ಮಹಾಲಕ್ಷ್ಮಿ ಹಾಗೂ ಭಾನು ಮನೆಯಿಂದ ಹೋದವರು ಕಣ್ಮರೆಯಾಗಿದ್ದಾರೆ.ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು ತಮ್ಮ ಮಕ್ಕಳನ್ನ ಹುಡುಕಿಕೊಂಡುವಂತೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ

ಒಂದೇ  ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ.! Read More »

ಕರ್ನಾಟಕ

ವರುಣಾರ್ಭಟಕ್ಕೆ ನಟ ಜಗ್ಗೇಶ್ ಕಾರು ಮುಳುಗಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22  ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.ಜಗ್ಗೇಶ್ ಅವರ ಬಿಎಂಡಬ್ಲ್ಯೂ ಕಾರು ನೀರಿನಲ್ಲಿ ಮುಳುಗಿದೆ. ರಿಪೇರಿ ಕಾರ್ಯ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಕಾರನ್ನು ನಿಲ್ಲಿಸಿದ್ದರು. ಸ್ನೇಹಿತ ಮುರುಳಿಯವರ ಮಲ್ಲೇಶ್ವರಂ ಮನೆಯ ಸೆಲ್ ನಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಕಾರು ಮುಳುಗಡೆಯಾಗಿದೆ.    

ವರುಣಾರ್ಭಟಕ್ಕೆ ನಟ ಜಗ್ಗೇಶ್ ಕಾರು ಮುಳುಗಡೆ.! Read More »

ಕರ್ನಾಟಕ

ಕೆ.ಆರ್.ಸರ್ಕಲ್‌ನ ಅಂಡರ್ ಪಾಸ್‌ ನೀರಿನಲ್ಲಿ ಸಿಲುಕಿ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಭಾರಿ ಮಳೆ ಸುರಿದಿದ್ದರಿಂದ ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿ ಕಾರಿನಲ್ಲಿದ್ದ ಯುವತಿಯೊಬ್ಬಳು ದಾರುಣವಾಗಿ ಸಾವ್ನಪ್ಪಿದ್ದಾಳೆ. ಆಂಧ್ರದ ವಿಜಯವಾಡದ ಮೂಲದ ಭಾನುರೇಖಾ(22)  ಮೃತಪಟ್ಟವರು. ಇವರು ಇನ್ಫೋಸಿಸ್ ಉದ್ಯೋಗಿಯಾಗಿದ್ದರು. ಕಾರಿನಲ್ಲಿ ಚಾಲಕ ಸೇರಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದು, ಅಂಡರ್ ಪಾಸ್ ನಲ್ಲಿ ಏಕಾಏಕಿ  ಭಾರಿ ಮಳೆಯ ಪ್ರಮಾಣದಲ್ಲಿ  ನೀರು ಸಂಗ್ರಹವಾಗಿತ್ತು. ಈ ವೇಳೆಯಲ್ಲಿ ಕಾರು ಮುಳುಗಡೆಯಾಗಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರು ಮುಳುಗಡೆಯಾಗಿದ್ದ ವೇಳೆಯಲ್ಲಿ  ಭಾನುರೇಖಾ ಹೆಚ್ಚಿನ ಪ್ರಮಾಣದಲ್ಲಿ ನೀರುಕುಡಿದರಿಂದ ಅಸ್ವಸ್ಥಗೊಂಡ

ಕೆ.ಆರ್.ಸರ್ಕಲ್‌ನ ಅಂಡರ್ ಪಾಸ್‌ ನೀರಿನಲ್ಲಿ ಸಿಲುಕಿ ಯುವತಿ ಮೃತ್ಯು Read More »

ಕರ್ನಾಟಕ

ಮೇ.22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ➤144 ಸೆಕ್ಷನ್ ಜಾರಿ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ದಿನಾಂಕ 22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಾಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಇಂದಿನಿಂದ ಮೇ.24ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಈ ಸಮಯದ್ಲಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧಕ್ಕೆ ಮುತ್ತಿಗೆ ಸೇರಿದಂತೆ ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ

ಮೇ.22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ➤144 ಸೆಕ್ಷನ್ ಜಾರಿ.! Read More »

ಕರ್ನಾಟಕ

ಖಾತೆ ಹಂಚಿಕೆಗೂ ಮುನ್ನವೇ ಪೊಲೀಸರಿಗೆ ಖಡಕ್ ನಿರ್ದೇಶನಗಳನ್ನು ನೀಡಿದ ಪ್ರಿಯಾಂಕ್ ಖರ್ಗೆ.!

(ನ್ಯೂಸ್ ಕಡಬ)newskadaba.com ಕಲಬುರಗಿ,ಮೇ.22 ಸಚಿವ ಪ್ರಿಯಾಂಕ ಖರ್ಗೆ ಕಲಬುರಗಿ ಪೊಲೀಸ್ ಕಮಿಷನರ್ ಹಾಗೂ ಎಸ್ಪಿಗೆ ಟಾಸ್ಕ್ ನೀಡಿದ್ದು ಖಾತೆ ಹಂಚಿಕೆಗೂ ಮುನ್ನವೇ ಕೆಲಸಕ್ಕಿಳಿದಿದ್ದಾರೆ.ಪೊಲೀಸ್ ಠಾಣೆಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಟಾಸ್ಕ್ ನೀಡಲಾಗಿದ್ದು ಅಕ್ರಮ ಜೂಜು ಮತ್ತು ಬೆಟ್ಟಿಂಗ್ ದಂಧೆಗೆ ಬ್ರೇಕ್ ಹಾಕಲು ಸೂಚನೆ ನೀಡಿದ್ದಾರೆ. ಪ್ರಿಯಾಂಕ್​ ಖರ್ಗೆ ಜಿಲ್ಲೆಯಲ್ಲಿನ ಅಕ್ರಮ ಮರಳು ದಂಧೆ ಮತ್ತು ಅಕ್ರಮ ಗಣಿಗಾರಿಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದು ಕಲಬುರಗಿ ಜಿಲ್ಲೆಯಲ್ಲಿನ ಮಾದಕ ದಂಧೆಗಳಾದ ಡ್ರಗ್, ಗಾಂಜಾ, ಅಫೀಮ್ ದಂಧೆ ನಿಲ್ಲಿಸುವಂತೆ ಖಡಕ್ ಆಗಿ

ಖಾತೆ ಹಂಚಿಕೆಗೂ ಮುನ್ನವೇ ಪೊಲೀಸರಿಗೆ ಖಡಕ್ ನಿರ್ದೇಶನಗಳನ್ನು ನೀಡಿದ ಪ್ರಿಯಾಂಕ್ ಖರ್ಗೆ.! Read More »

ಕರ್ನಾಟಕ

ಮತದಾರರಿಗೆ ಹಣ ಹಂಚದೆ ಮೋಸ ಮಾಡಿದ ಆಪ್ತರು.!➤ ಸತ್ಯ ಬಾಯ್ಬಿಟ್ಟ ಕೆ.ಆರ್.ಪೇಟೆ ಅಭ್ಯರ್ಥಿ

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.22 ಚುನಾವಣೆಯಲ್ಲಿ ಬೆಂಬಲಿಗರಿಗೆ ಹಣ ಕೊಟ್ಟು ಮಾಜಿ‌ ಸಚಿವರೊಬ್ಬರು ಮೋಸ ಹೋಗಿದ್ದಾರಾ ಎಂಬ ವಿಚಾರ ಅವರ ಮಾತಿನಿಂದಲೇ ಹೊರಬಿದ್ದಿದೆ. ಈ ಮಾಜಿ ಸಚಿವರಿಂದ ಮತದಾರರಿಗೆ ಹಂಚಲು ಪಡೆದಿದ್ದ ಹಣವನ್ನು ಹಂಚದ ಆಪ್ತರೇ ಮೋಸ ಮಾಡಿದ್ದಾರೆ! ಕೃತಜ್ಞತಾ ಸಭೆಯಲ್ಲಿ ಕೆ.ಆರ್.ಪೇಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಸತ್ಯ ಬಾಯ್ಬಿಟ್ಟಿದ್ದಾರೆ. ಸೋಲಿನ ಬಳಿಕ ಹಣ ವಾಪಾಸ್ ನೀಡುವಂತೆ ನಾರಾಯಣಗೌಡ ಮನವಿ ಮಾಡಿದ್ದು ‘ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಟ್ಟುಬಿಡಿ ಎಂದು ಸಭೆಯಲ್ಲಿ ಅಂಗಲಾಚಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಮತದಾರರಿಗೆ ಹಣ ಹಂಚದೆ ಮೋಸ ಮಾಡಿದ ಆಪ್ತರು.!➤ ಸತ್ಯ ಬಾಯ್ಬಿಟ್ಟ ಕೆ.ಆರ್.ಪೇಟೆ ಅಭ್ಯರ್ಥಿ Read More »

ಕರ್ನಾಟಕ

4 ರಾಜ್ಯಗಳ ಚುನಾವಣೆ; ಕಾಂಗ್ರೆಸ್‌ ಮಹತ್ವದ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕವನ್ನು ಗೆದ್ದ ಜೋಶ್‌ ನಲ್ಲಿರುವ ಕಾಂಗ್ರೆಸ್‌ ಇದೀಗ ಮಧ್ಯಪ್ರವೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ಪ್ರಾಬಲ್ಯ ಮೆರೆದರೆ ಆ ಬಳಿಕ ಎದುರಾಗುವ ಲೋಕಸಭಾ ಚುನಾವಣೆಗೆ ಪ್ರಬಲ ವೇದಿಕೆ ಈ ಮೂಲಕ ಸಜ್ಜಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ರಾಜ್ಯಗಳ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೇ 24ರಂದು ಈ ರಾಜ್ಯದ ನಾಯಕರ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ

4 ರಾಜ್ಯಗಳ ಚುನಾವಣೆ; ಕಾಂಗ್ರೆಸ್‌ ಮಹತ್ವದ ಸಭೆ Read More »

ಕರ್ನಾಟಕ

ಜೀರೋ ಟ್ರಾಫಿಕ್ ಸೌಲಭ್ಯ ಬೇಡ.! ➤ ಸಿಎಂ ಸಿದ್ಧರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ ಅವರು ಸಾರ್ವಜನಿಕರಿಗೆ ಇಷ್ಟವಾಗುವಂತ ತೀರ್ಮಾನವನ್ನು ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗುವಂತ ಜೀರೋ ಟ್ರಾಫಿಕ್ ಸೌಲಭ್ಯ ಬೇಡ.ಅದನ್ನು ವಾಪಾಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು

ಜೀರೋ ಟ್ರಾಫಿಕ್ ಸೌಲಭ್ಯ ಬೇಡ.! ➤ ಸಿಎಂ ಸಿದ್ಧರಾಮಯ್ಯ Read More »

ಕರ್ನಾಟಕ
Scroll to Top