karnataka

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜಾಗುತ್ತಿದೆ. ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಪ್ರಮಾಣ ಸ್ವೀಕರಿಸುತ್ತಿದ್ದು, ವಿಧಾನಸೌಧದ ಸಂಪುಟ ಸಭೆ ಸಭಾಂಗಣ, ಮುಖ್ಯಮಂತ್ರಿ ಕಚೇರಿ, ಸಮ್ಮೇಳನ ಸಭಾಂಗಣ ಸ್ವತ್ಛಗೊಳಿಸಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ನಂತರ ಸಂಪುಟ ಸಭಾಂಗಣ, ಮುಖ್ಯಮಂತ್ರಿ ಹಾಗೂ ಸಚಿವರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಇದೀಗ ಬೀಗ ತೆರೆದು ಸ್ವತ್ಛಗೊಳಿಸಲಾಗಿದೆ.    

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.! Read More »

ಕರ್ನಾಟಕ

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20.ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು  ಪ್ರಮಾಣವಚನ ಸ್ವೀಕರಿಸಿದರು. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಾ. ಜಿ. ಪರಮೇಶ್ವರ್, ಎಂ. ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿಈ ಎಂಟು ಜನ ಶಾಸಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಉಪಮುಖ್ಯ ಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್‌ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ಸಮಾರಂಭ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.! Read More »

ಕರ್ನಾಟಕ

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಸಾಹಿತಿಗಳು, ಚಿಂತಕರು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ Read More »

ಕರ್ನಾಟಕ

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ 1,800 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆ ಕಟ್ಟದೆ ₹2.65 ಕೋಟಿ ದುರ್ಬಳಕೆ.!

(ನ್ಯೂಸ್ ಕಡಬ)newskadaba.com ಕಲಬುರಗಿ,ಮೇ.20 ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ (ಪಿಎಂವೈ-ಯು) ಮಂಜೂರಾದ ಮನೆಗಳನ್ನು ನಿರ್ಮಿಸಿಕೊಳ್ಳದೇ ₹ 2.65 ಕೋಟಿ ಅನುದಾನ ದುರ್ಬಳಕೆಯಾದ ಬಗ್ಗೆ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಸತಿ ಇಲಾಖೆ ಅಧಿಕಾರಿಗಳ ತಂಡ ತನಿಖೆ ನಡೆಸಲು ಅಫಜಲಪುರಕ್ಕೆ ಭೇಟಿ ನೀಡಿದೆ. ‘2019-20 ಅವಧಿಯಲ್ಲಿ ಅಫಜಲಪುರದ 266 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಅವರಲ್ಲಿ 200 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಒಂದೂವರೆ ವರ್ಷದ ಅವಧಿಯಲ್ಲಿ ₹2.65 ಕೋಟಿ ಅನುದಾನ ಪಾವತಿ ಆಗಿತ್ತು. ಭುವನ್ ಆಯಪ್‌ನಲ್ಲಿ ನಮೂದಿಸಿದ್ದ ವಸತಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆ ಕಟ್ಟದೆ ₹2.65 ಕೋಟಿ ದುರ್ಬಳಕೆ.! Read More »

ಕರ್ನಾಟಕ

ಪ್ರಮಾಣ ವಚನ ಸಮಾರಂಭ..! ➤ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು ಇವರೆಲ್ಲಾ ಹೊಟೇಲ್ ಶಂಗ್ರಿಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕೆಲವೇ ಕ್ಷಣದಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭ..! ➤ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರ ಆಗಮನ Read More »

ಕರ್ನಾಟಕ

ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ನೂತನ ಸಿಎಂ ಆಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರವೇ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ

ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read More »

ಕರ್ನಾಟಕ

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕಾಂಗ್ರೆಸ್‌ ನಿಂದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಆಗುತ್ತಿದ್ದಂತೆ, ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಟೊಯೋಟೊ ವೆಲ್ಫೇರ್‌ ಕಾರನ್ನು ಸಿಎಂಗಾಗಿ ಖರೀದಿ ಮಾಡಲಾಗಿದೆ.  

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ Read More »

ಕರ್ನಾಟಕ

‘ತಾಜ್ ಮಹಲ್’ ಬಳಿ 50ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ ದಂಪತಿ

(ನ್ಯೂಸ್ ಕಡಬ)newskadaba.com ವಿಜಯಪುರ,ಮೇ.20 ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ 74 ವರ್ಷದ ಮರೆಪ್ಪ ಹಾಗೂ 67 ವರ್ಷದ ಅವರ ಪತ್ನಿ ಶಾಂತಾ ತಳವಾರ ತಮ್ಮ ಐವತ್ತನೇ ವಿವಾಹ ವಾರ್ಷಿಕೋತ್ಸವವನ್ನು ಆಗ್ರಾದ ತಾಜ್ ಮಹಲ್ ಬಳಿ ಆಚರಿಸಿಕೊಂಡಿದ್ದಾರೆ. ಪ್ರೇಮಸೌಧ ತಾಜ್ ಮಹಲ್ ಬಳಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ಈ ದಂಪತಿ ಬಯಸಿದ್ದು, ಮಕ್ಕಳಾದ ಪರಶುರಾಮ, ಬಸವರಾಜ ಆಗ್ರಾಕ್ಕೆ ಕರೆದೊಯ್ಯುವ ಮೂಲಕ ಇದನ್ನು ನೆರವೇರಿಸಿದ್ದಾರೆ.ಅಲ್ಲದೆ ಆಗ್ರಾದ ಪಂಚತಾರಾ ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ ದಂಪತಿ ಸಂಭ್ರಮಿಸಿದ್ದಾರೆ.  

‘ತಾಜ್ ಮಹಲ್’ ಬಳಿ 50ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ ದಂಪತಿ Read More »

ಕರ್ನಾಟಕ
Scroll to Top