karnataka

ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ 2016ರ ಅಧಿಸೂಚನೆಗೆ ಕೆಲ ತಿದ್ದುಪಡಿಯನ್ನು ಮಾಡಿ ಆದೇಶವನ್ನು ಹೊರಡಿಸಿದೆ. ಯಾವುದೇ ವ್ಯಕ್ತಿ, ನೈಲಾನ್​ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಚೀನಿ ದಾರ ಅಥವಾ ಮಾಂಜಾ ದಾರ ತಯಾರು, ದಾಸ್ತಾನು ಮಾಡುವುದವುದನ್ನೂ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದ್ದು, ತಯಾರು […]

ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ‘ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಸುತ್ತೋಲೆ ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಲು ನಿರಾಕರಿಸಿರುವ ಹೈಕೋರ್ಟ್, ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ. ಈ ಸಂಬಂಧ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್,

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »

ಕರ್ನಾಟಕ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.23. ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಮೃತಪಟ್ಟಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಎಂದು ಗುರುತಿಸಲಾಗಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಮೃತಪಟ್ಟಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿಯಲ್ಲಿ ಅ.26ರಂದು ಆಯೋಜಿಸಲು ಉದ್ದೇಶಿಸಿದ್ದ ಕಂಬಳಕ್ಕೆ ಅನುಮತಿ ನೀಡಿದಂತೆ ಪೇಟಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ(23ಕ್ಕೆ) ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಪ್ರದಾಯಿಕವಾಗಿ ಆಚರಣೆ ಮಾಡುವ ಪದ್ಧತಿ ಶತಮಾನಗಳಿಂದ ನಡೆದು ಬಂದಿದೆ. 2023ರಲ್ಲಿ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಆಯೋಜನೆ ಮಾಡಲಾಯಿತು. ಈ ಬಾರಿ ಅ.26ಕ್ಕೆ ಕಂಬಳ ಆಯೋಜನೆಗೆ

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ
Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ Read More »

ಕರ್ನಾಟಕ
Scroll to Top