karnataka

ಈರುಳ್ಳಿ ಬೆಲೆ ಏಕಾಏಕಿ ಕುಸಿತ..!➤ಕಂಗಾಲಾದ ರೈತರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.17 ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗಿದ್ದು ಈರುಳ್ಳಿ ಬೆಳಗಾರರು ಕಂಗಾಲಾಗಿದ್ದಾರೆ.ಕಳೆದ ವಾರ ಮಳೆಯಾಗಿದ್ದು ವಿಜಯಪುರ ಜಿಲ್ಲೆಯಿಂದ ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ದಾಸ್ತಾನು ಬಂದಿದೆ. ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ಬರುತ್ತಿದೆ.ಹೀಗಾಗೀ ಈರುಳ್ಳಿ ಬೆಲೆ ಇಳಿಕೆಯಾಗಿದೆ. ಏಕಾಏಕಿ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದ್ದು ಕಡಿಮೆ ಗುಣಮಟ್ಟದ ಹೆಚ್ಚು ಈರುಳ್ಳಿ ಬಂದಿರುವ ಕಾರಣಕ್ಕೆ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ.ಎಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 8-10 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿ […]

ಈರುಳ್ಳಿ ಬೆಲೆ ಏಕಾಏಕಿ ಕುಸಿತ..!➤ಕಂಗಾಲಾದ ರೈತರು Read More »

ಕರ್ನಾಟಕ

 ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ..!➤ಮುನಿರಾಜು

(ನ್ಯೂಸ್ ಕಡಬ) newskadaba.com ಮಂಡ್ಯ,ಮೇ.17 ಚುನಾವಣೆ ಮುಗಿದ ಬಳಿಕ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ಹೊರ ಹಾಕಿ ಮಾತನಾಡಿದ ಪರಾಜಿತ ಅಭ್ಯರ್ಥಿ11 ಮುನಿರಾಜು ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವಂತೆ ದೇವರ ಮೊರೆ ಹೋಗಿದ್ದಾರೆ.ಈ ಸಂದರ್ಭ ಅವರು ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ.ಇಲ್ಲ ತನ್ನ ವಿರುದ್ದ ಅಪಪ್ರಚಾರ ಮಾಡಿದವರ ವಂಶ ನಿರ್ನಾಮವಾಗಲ’ ಎಂದು ಅಪಪ್ರಚಾರ ಮಾಡಿದವರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಲ್ಲಿ ಬೇಡಿಕೊಂಡಿದ್ದಾರೆ. ದೇವರ ಮುಂದೆ ಕರ್ಫೂರ ಹಚ್ಚಿ ಶಫಥಗೈದಿದ್ದಾರೆ. ಬಿಜೆಪಿ ಅಭ್ಯರ್ಥಿ

 ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ..!➤ಮುನಿರಾಜು Read More »

ಕರ್ನಾಟಕ

ಶಿವಮೊಗ್ಗ: ಹಣಕ್ಕಾಗಿ ಯುವತಿ ಅಪಹರಣ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.16. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ರಂಜಿತಾ (22) ಎಂಬ ಯುವತಿ ಹಣಕ್ಕಾಗಿ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ಇನ್ನು ಯುವತಿಯು ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್

ಶಿವಮೊಗ್ಗ: ಹಣಕ್ಕಾಗಿ ಯುವತಿ ಅಪಹರಣ Read More »

ಕರ್ನಾಟಕ

ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆಗೈದ ಸಹೋದರ

(ನ್ಯೂಸ್ ಕಡಬ)newskadaba.com ದಾವಣಗೆರೆ, ಮೇ.15. ಮನೆ ಹಾಗೂ‌ ಆಸ್ತಿ ವಿಚಾರ ಹಿನ್ನೆಲೆಯಲ್ಲಿ ತಮ್ಮನೋರ್ವ ತನ್ನ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭಯಾನಕ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರದ ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು, ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮನ ಕೊನೆಯ ಮಗನಾದ ಕುಮಾರ್ ಕೆ.ಜಿ ಅವರೊಂದಿಗೆ ಆಸ್ತಿ ವಿಚಾರದಲ್ಲಿ

ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆಗೈದ ಸಹೋದರ Read More »

ಕರ್ನಾಟಕ

ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ ದುಷ್ಟರ್ಮಿಗಳು.!

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಮೇ.15 ಸೋಮಿನಕೊಪ್ಪದಲ್ಲಿ  ದುಷ್ಟರ್ಮಿಗಳು ಹರೀಶ್‌ರಾವ್ ಎಂಬ ಆಟೋ ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಆತನ ಸ್ನೇಹಿತ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರದುಕೊಂಡು ಬಂದು ದೂರು ನೀಡಿದ್ದಾರೆ.ಆಟೋ ಚಾಲಕ ಹರೀಶ್ ರಾವ್‌ ನನ್ನು ಮತದಾನಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ಡಬ್ಬ ಅಲಿಯಾಸ್ ನಜರು, ಇಡ್ಲಿ ಅಲಿಯಾಸ್ ಅಬ್ರಾರ್ ಹಾಗೂ ಇನ್ನೋರ್ವ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಹರೀಶ್ ರಾವ್ ಆರೋಪಿಸಿದ್ದಾರೆ. ದೂರು ನೀಡಲು ಬಂದಾಗ ಸ್ಥಳದಲ್ಲಿ ಮಾಜಿ ಉಪಮುಖ್ಯಮಂತ್ರಿ

ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ ದುಷ್ಟರ್ಮಿಗಳು.! Read More »

ಕರ್ನಾಟಕ

ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ,ಮೇ.15 ಸಕ್ಕರೆನಾಡು ಮಂಡ್ಯದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಗಂಗಾ(38) ಕೊಲೆಯಾದ ದುರ್ದೈವಿ. ಈಕೆ ತಮಿಳುನಾಡು ಮೂಲದ ನಿವಾಸಿಯಾಗಿದ್ದಳು.ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೃತ್ಯ ಮಾಡಲಾಗಿದೆ. ನಿಮಿಷಾಂಭ ದೇವಾಲಯ ಬಳಿಯ ಕಾವೇರಿ ನದಿಯಲ್ಲಿ ಕಾಸು ಹೆಕ್ಕುವ ಕಾಯಕ ಮಾಡುತ್ತಿದ್ದಳು. ಸ್ಥಳದಲ್ಲಿ ಕೊಲೆಯಾದ ಮಹಿಳೆ ಸಂಬಂಧಕರ ಆಕ್ರಂದನ ಮುಗಿಲು ಮುಟ್ಟಿದೆ.ಕೊಲೆಯಾದ ಮಹಿಳೆಯ ಗುಂಪಿನ‌ ಸದಸ್ಯರು ಎಲ್ಲರು ನಿರಾಶ್ರಿತರು. ಮೈಸೂರು- ಬೆಂಗಳೂರು ಮೇಲ್ಸೇತುವೆ ಕೆಳಗೆ ತಮ್ಮ

ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ,ಮೇ.15 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾರ ವೆಂಕಟೇಶ್ ಎಂಬ ಅಂಧ ಅಭಿಮಾನಿ ಸಚಿವ ಸುಧಾಕರ್ ಸೋತಿರುವ ಕಾರಣಕ್ಕೆ ಬೇಸರಗೊಂಡು ವಡ್ರೆಪಾಳ್ಯದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೋಟೆ ನಿವಾಸಿಯಾಗಿರುವ ವೆಂಕಟೇಶ್, ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಸುಧಾಕರ್ ಸೋಲಿನ ಹಿನ್ನೆಲೆಯಲ್ಲಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.      

ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.! Read More »

ಕರ್ನಾಟಕ

ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ.!   ಪ್ರಕರಣ ದಾಖಲು  

(ನ್ಯೂಸ್ ಕಡಬ) newskadaba.com ಬಳ್ಳಾರಿ,ಮೇ.15 ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ ಸಿಕ್ಕಿದೆ.ಕಾರ್ ನಲ್ಲಿ ತೆರಳುತ್ತಿದ್ದ ನಾಗೇಂದ್ರ ಅವರನ್ನ ಶುಭಾಶಯ ಕೊರಲು ನಾಲ್ವರು ನಿಲ್ಲಿಸಿದ್ದಾರೆ. ಕಾರಿನಿಂದ ಇಳಿದ ನಾಗೇಂದ್ರ, ಯುವಕರ ಬಳಿ ಹೊದಾಗ ಬೆದರಿಕೆ ಹಾಕಲು ನಾಲ್ವರು ಪುಂಡರು ಯತ್ನಿಸಿದ್ದಾರೆ. ಈ ಸಂದರ್ಭ ಈ ನಾಲ್ವರ ಗುಂಪಿನ ಕೆಲವರ ಕೈಯಲ್ಲಿ ಮಾರಕಾಸ್ತ್ರ ಇರುವುದನ್ನ ಗಮನಿಸಿದ ನಾಗೇಂದ್ರ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಈ ನಾಲ್ವರನ್ನು ತಡೆದಿದ್ದಾರೆ. ಸ್ಥಳದಲ್ಲೇ ಇಬ್ಬರನ್ನು ಹಿಡಿದ ನಾಗೇಂದ್ರ ಭದ್ರತಾ ಸಿಬ್ಬಂದಿ ಹಿಗ್ಗಾಮುಗ್ಗಾ

ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ.!   ಪ್ರಕರಣ ದಾಖಲು   Read More »

ಕರ್ನಾಟಕ

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮುಂದುವರೆದ ಪೈಪೋಟಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಲ್ಲದೇ ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿಬರುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆಗಾಗಿ ಪೈಪೋಟಿ ಶುರುವಾಗಿದ್ದು, ಇಬ್ಬರೂ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇಬ್ಬರೂ ನಾಯಕರು ಪಟ್ಟು ಸಡಿಲಿಸಿದಿದ್ದರೆ ಮೂರನೇ ಆಯ್ಕೆಯಾಗಿ ಲಿಂಗಾಯಿತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಸಿಎಂ ಸ್ಥಾನ ನೀಡುವ ಚರ್ಚೆ ನಡೆದಿದೆ

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮುಂದುವರೆದ ಪೈಪೋಟಿ..! Read More »

ಕರ್ನಾಟಕ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಈ ಕುರಿತು ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ. ನನಗೆ  ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.’ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್ Read More »

ಕರ್ನಾಟಕ
Scroll to Top