karnataka

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದ್ದು, ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ. 4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿ ಮೇಲೆ […]

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು  Read More »

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆಯ ಮುಂಭಾಗದ ತಡೆಗೋಡೆ ಕುಸಿತ➤

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಮೇ.12 ಚಾಮರಾಜನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸೈಡ್. ಇನ್ನೂ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಗೆ ಹಾನಿಯಾಗಿದೆ. ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ. ಪ್ರತಿಮೆ ಸ್ಥಳದಲ್ಲಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಕ್ತರ ಪ್ರವೇಶ ನಿಷೇಧ

ಮಲೆಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆಯ ಮುಂಭಾಗದ ತಡೆಗೋಡೆ ಕುಸಿತ➤ Read More »

ಕರ್ನಾಟಕ

ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಪೊಲೀಸರು ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಕೂಡಲೇ ಪ್ರಮುಖ ಆರೋಪಿ ಗೌತಮ್ ಶರ್ಮಾ (26) ಮತ್ತು ಅಪರಾಧ ಮಾಡಿದ ವಾಹನದ ಚಾಲಕ ಮತ್ತು ಸಹ ಆರೋಪಿ ಸುದೀಪ್ ಚೆಟ್ರಿ (31), ಪ್ತಾಡೆನ್‌ಜಿತ್ ಪಾಲ್ (26) ಎಂಬುವರನ್ನು ಬಂಧಿಸಲಾಯಿತು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.      

ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಮಗು ಕಿಡ್ನ್ಯಾಪ್ ಆಗಿದೆ ಎಂದು ದೂರು ನೀಡಿದ ಪೋಷಕರು➤ಹುಡುಕಾಟ ನಡೆಸಿದ ಪೊಲೀಸರಿಗೆ ಶಾಕ್ !*

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿಯ ನಿವಾಸಿಗಳಾದ ಮೀನಾ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಆರು ವರ್ಷದ ಮಗಳ ಅಪಹರಣ ಆಗಿದೆ ಎಂದು ದೂರು ದಾಖಲಿಸಿದ್ದರು.ಮನೆ ಮುಂದೆ ಆಟವಾಡುತ್ತಿದ್ದ ಮಗಳು ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ಮೀನಾ ದಂಪತಿ ಉಲ್ಲೇಖಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಮಗುವಿನ ಹುಡುಕಾಟಕ್ಕೆ ಮುಂದಾಗಿದ್ದರು. ಸಬ್ ಇನ್​​ಸ್ಪೆಕ್ಟರ್ ರಮ್ಯಾ ಹಾಗೂ ಸಿಬ್ಬಂದಿ ಮಗುವಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ನಂತರ ಮಗು ಕಾಣೆಯಾಗಿದೆ ಎನ್ನಲಾದ

ಮಗು ಕಿಡ್ನ್ಯಾಪ್ ಆಗಿದೆ ಎಂದು ದೂರು ನೀಡಿದ ಪೋಷಕರು➤ಹುಡುಕಾಟ ನಡೆಸಿದ ಪೊಲೀಸರಿಗೆ ಶಾಕ್ !* Read More »

ಕರ್ನಾಟಕ

ಸೌಹಾರ್ದ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ.!➤ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಒಂಬತ್ತು ವರ್ಷ ಮಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.ಮಗಳನ್ನು ತಂದೆ ಮತ್ತು ತಾಯಿಯೊಂದಿಗೆ ಸಮಾನವಾಗಿ ನೆಲೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ತಂದೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಪತಿಯ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಪೀಠ, 9 ವರ್ಷದ ಹೆಣ್ಣು ಮಗುವಿಗೆ ಸೌರ್ಹಾದಯುತ ವಾತಾವರಣ ನಿರ್ಮಸಲು ಸಾಧ್ಯವಾಗದ ತಂದೆ ಮಗುವನ್ನು

ಸೌಹಾರ್ದ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ.!➤ಹೈಕೋರ್ಟ್ ಆದೇಶ Read More »

ಕರ್ನಾಟಕ

ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣ.!➤ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.’ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದ ಡಿ.ಎಂ. ವಾಗೀಶ್, ಪತ್ರ ಪಡೆಯಲು ಸಹಕರಿಸಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ

ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣ.!➤ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR ದಾಖಲು Read More »

ಕರ್ನಾಟಕ

ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಮೇ.12. ಬೈಕ್‌ ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ.

ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ರಾಜ್ಯದ 224 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮತ ಎಣಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ Read More »

ಕರ್ನಾಟಕ

ಅಪ್ರಾಪ್ತೆ ಪ್ರೇಯಸಿಯ ಮೇಲೆ ಮಚ್ಚು ಬೀಸಿದ ಯುವಕ.! ➤ತಾನೂ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)Newskadaba.com ತುಮಕೂರು,ಮೇ.12 ಪ್ರೀತಿಯಲ್ಲಿ ಬಿರುಕು ಮೂಡಿದ ಕಾರಣ ಪ್ರೇಯಸಿಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಯುವಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ಹುಳಿಯಾರು ಪ್ರದೇಶ ಯಳನಾಡು ಗ್ರಾಮದಲ್ಲಿ ನಡೆದಿದೆ.26 ವರ್ಷದ ಬಿಎಸ್ ವಿನಯಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ವಿನಯಕುಮಾರ್ ಅದೇ ಗ್ರಾಮದ ಕಲ್ಲೇಗೌಡರ ಪುತ್ರಿ 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದನು. ಅಪ್ರಾಪ್ತೆ ದೊಡ್ಡಬಿದರೆ ಗ್ರಾಮದ ನಿವಾಸಿಯಾಗಿದ್ದು, ತಾಯಿ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದಳು. ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದ ಅಪ್ರಾಪ್ತೆಗೆ ವಿನಯಕುಮಾರ್ ಮೇಲೆ

ಅಪ್ರಾಪ್ತೆ ಪ್ರೇಯಸಿಯ ಮೇಲೆ ಮಚ್ಚು ಬೀಸಿದ ಯುವಕ.! ➤ತಾನೂ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

‘ಮೈತ್ರಿಗೆ ನಾವು ಸಿದ್ಧ’, ಎರಡು ಪಕ್ಷಗಳೂ ನಮ್ಮ ಸಂಪರ್ಕದಲ್ಲಿವೆ ➤ ಹೆಚ್​ಡಿ. ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇಲ್ಲ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ, ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ.

‘ಮೈತ್ರಿಗೆ ನಾವು ಸಿದ್ಧ’, ಎರಡು ಪಕ್ಷಗಳೂ ನಮ್ಮ ಸಂಪರ್ಕದಲ್ಲಿವೆ ➤ ಹೆಚ್​ಡಿ. ಕುಮಾರಸ್ವಾಮಿ Read More »

ಕರ್ನಾಟಕ
Scroll to Top