karnataka

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.29. ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.29. ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಬೇಲ್ ಮೇಲೆ ಇದ್ದಾರೆ. ರಾಜ್ಯಾಧ್ಯಕ್ಷರು ಬೇಲ್ ಮೇಲೆ ಇದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ನಾಯಕರು ಯಾರೂ ಚುನಾವಣೆಗೇ ನಿಲ್ಲುವ ಹಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

‘ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ’ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹಾಸನ ಜಿಲ್ಲೆಯ ಬೇಲೂರು, ರಾಮನಗರ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..! Read More »

ಕರ್ನಾಟಕ

ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ)newskadaba.com ಕೊರಟಗೆರೆ, ಏ.29. ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟಿನಿಂದಾಗಿ ಪರಮೇಶ್ವರ್‌ ಅವರ ತಲೆಗೆ ಗಾಯವಾಗಿದ್ದು ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯಲಾಗಿದೆ. ಇನ್ನು ಪ್ರಚಾರದ ಸಮಯದಲ್ಲಿ ಕಾರ್ಯಕರ್ತರು ಡಾ.ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಹೂ ಮಳೆ ಸುರಿಸಿದ್ದಾರೆ, ಈ ವೇಳೆ ಅವುಗಳ ನಡುವೆ ತೂರಿಬಂದ ಕಲ್ಲೊಂದು ಪರಮೇಶ್ವರ್

ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ Read More »

ಕರ್ನಾಟಕ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..! Read More »

ಕರ್ನಾಟಕ

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೇ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ನೀಡಿತ್ತು. ಹೈಕೋರ್ಟ್ ಅಪ್ರಾಪ್ತ ಮಗುವನ್ನು ಪತಿ ಸುಪರ್ದಿಗೆ ನೀಡುವಂತೆ ಆದೇಶಿಸಿದ್ದಂತ ಆದೇಶವನ್ನು ಪತ್ನಿ ನಿರಾಕರಿಸಿದ್ದಳು. ಅರ್ಜಿಯ

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! Read More »

ಕರ್ನಾಟಕ

ಇಂದಿನಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಇಂದಿನಿಂದ ಮನೆಯಿಂದಲೇ ಮತದಾನ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟ ವೃದ್ದರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್ ಮಾಡುತ್ತಾರೆ.

ಇಂದಿನಿಂದ ಮನೆಯಿಂದಲೇ ಮತದಾನ Read More »

ಕರ್ನಾಟಕ

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ರಂದು ದಿನ ನಿಗದಿಪಡಿಸಿದೆ.ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.! Read More »

ಕರ್ನಾಟಕ

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕರ್ನಾಟಕ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಮೇ 10ರಂದು ನಡೆಯುವ ಚುನಾವಣೆಗೆ ವಿವಿಧ ಪಕ್ಷಗಳ ಪ್ರಚಾರ ಬಿಸಿಲಿನ ಕಾವಿಗಿಂತ ಹೆಚ್ಚಾಗಿದೆ. ಸಿನಿಮಾ ತಾರೆಯರು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ನೆಚ್ಚಿನ ನಟ-ನಟಿಯರನ್ನು ನೋಡಲು ಜನಸಾಗರ ಸೇರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  ಬೆಂಬಲ ನೀಡಿದ ಅವರು ಪ್ರೀತಿಯ ಮಾಮನ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ರಾಜ್ಯದ ವಿವಿಧ ಕಡೆ ಪ್ರಚಾರ ಮಾಡುತ್ತಿದ್ದಾರೆ. ಮುನಿರತ್ನ,

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..! Read More »

ಕರ್ನಾಟಕ

ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಮೃತ್ಯು.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.28 ಕೆಎಸ್‌ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಬೇಲೂರಿನಿಂದ ಚಿಕ್ಕಮಗಳೂರಿನ ತಾಯಿ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕೋಟೆ ಸಮೀಪ ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದುಕೊಂಡಿದೆ.ಈ ವೇಳೆ ಬಾಗಿಲ ಪಕ್ಕದಲ್ಲಿಯೇ ಇದ್ದ ಹೇಮಾವತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳುಹಿಸುವ ವೇಳೆ

ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಮೃತ್ಯು.! Read More »

ಕರ್ನಾಟಕ
Scroll to Top