karnataka

ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಭೇಟೆ   ➤ನಿವೃತ್ತ ಡಿಸಿಎಫ್‌ ನಾಗರಾಜು ಮನೆಯಲ್ಲಿ ಆನೆ ದಂತ ಪತ್ತೆ..!

(ನ್ಯೂಸ್ ಕಡಬ)Newskadaba.comದಾವಣಗೆರೆ,ಏ.24 ರಾಜ್ಯದೆಲ್ಲೆಡೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆ ನಡೆಸಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವೃತ್ತ ಡಿಸಿಎಫ್‌ ನಾಗರಾಜು ಮನೆಯಲ್ಲಿ ಆನೆ ದಂತ ಪತ್ತೆಯಾಗಿದೆ.ಚುನಾವಣೆ ಹೊತ್ತಿನಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ರಾಜ್ಯದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವೃತ್ತ ಡಿಸಿಎಫ್‌ ನಾಗರಾಜು ಮನೆಗೂ ದಾಳಿ ನಡೆಸಿ ಭರ್ಜರಿ ಭೇಟೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವಾಗ ಆನೆ ದಂತ ಪತ್ತೆಯಾದ ಬೆನ್ನಲ್ಲೆ ಪರವಾನಗಿ ಪಡೆದ ಬಗ್ಗೆ ಅಧಿಕಾರಿಗಳು […]

ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಭೇಟೆ   ➤ನಿವೃತ್ತ ಡಿಸಿಎಫ್‌ ನಾಗರಾಜು ಮನೆಯಲ್ಲಿ ಆನೆ ದಂತ ಪತ್ತೆ..! Read More »

ಕರ್ನಾಟಕ

ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು.!

(ನ್ಯೂಸ್ ಕಡಬ)Newskadaba.com ಉಡುಪಿ,ಏ.24 ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಮೃತಪಟ್ಟ ಘಟನೆ ಬ್ರಹ್ಮಾವರ ಸಮೇಪದ ಹೂಡೆಯ ಕಿಣಿಯಾರ ಕುದ್ರುವಿನಲ್ಲಿ ನಡೆದಿದೆ.ಹೂಡೆಯ ಇಬಾಸ್, ಫೈಜಾನ್, ಶೃಂಗೇರಿಯ ಫರ್ಹಾನ್ ಮತ್ತು ಸುಫಾನ್ ಮೃತಪಟ್ಟವರು ಎಂದು ಹೇಳಲಾಗಿದೆ. ರಂಜಾನ್ ಅಂಗವಾಗಿ ಶೃಂಗೇರಿಯಿಂದ ಬ್ರಹ್ಮಾವರದ ಹೂಡೆಯಲ್ಲಿರುವ ಸಂಬಂಧಿಕರ ಮನೆಗೆ ಯುವಕರು ಬಂದಿದ್ದು, ಸ್ಥಳೀಯರೊಂದಿಗೆ ಕಪ್ಪೆಚಿಪ್ಪು ಸಂಗ್ರಹಿಸಲು ದೋಣಿಯಲ್ಲಿ ತೆರಳಿದ್ದರು.7 ಜನ ಕಪ್ಪೆ ಚಿಪ್ಪು ತೆಗೆಯುವ ವೇಳೆ ಆಕಸ್ಮಿಕವಾಗಿ ಗುಂಡಿಗೆ ಇಳಿದಿದ್ದಾರೆ. ಆಳವಾದ ಗುಂಡಿಗೆ ಇಳಿದ ಮೂವರು ಈಜಿಕೊಂಡು ಪಾರಾಗಿದ್ದು,

ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು.! Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿಎರಡು ಬಸ್​ಗಳು ಮುಖಾಮುಖಿ ಡಿಕ್ಕಿ.!   ➤16 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.24 ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳು ಮುಖಾಮುಖಿ ಡಿಕ್ಕಿ. ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ. ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿಎರಡು ಬಸ್​ಗಳು ಮುಖಾಮುಖಿ ಡಿಕ್ಕಿ.!   ➤16 ಜನರಿಗೆ ಗಂಭೀರ ಗಾಯ Read More »

ಕರ್ನಾಟಕ

ಏ.26ರಂದು ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.!  

(ನ್ಯೂಸ್ ಕಡಬ)Newskadaba.comಮಂಡ್ಯ,ಏ.24 ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ. 26ರಂದು ಮಂಡ್ಯಕ್ಕೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿಪಿ ಉಮೇಶ್ ತಿಳಿಸಿದರು. ಅಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಯೋಗಿ ಆದಿತ್ಯನಾಥ್ ಅವರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜೇಂದ್ರ ಪ್ರಸಾದ್ ರಸ್ತೆ,ಅಂಬೇಡ್ಕರ್ ವೃತ್ತ,ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ ಸೇರಿದಂತೆ

ಏ.26ರಂದು ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.!   Read More »

ಕರ್ನಾಟಕ

ಟಿಕೆಟ್ ‘ಕೈ’ ತಪ್ಪಿದ ಬೇಸರವಿದೆ.!  ➤ ಆದರೆ ಪಕ್ಷಕ್ಕೆ ಯಾವತ್ತಿಗೂ ದ್ರೋಹ ಬಗೆಯಲ್ಲ

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.24 ಮಾರ್ಚ್ 29ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷ ಮೊದಲ ಪಟ್ಟಿಯನ್ನು ಮಾರ್ಚ್ 25ಕ್ಕೆ ಬಿಡುಗಡೆ ಮಾಡಿ 124 ಅಭ್ಯರ್ಥಿಗಳನ್ನು ಹೆಸರಿಸಿತ್ತು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸಿತ್ತು.ಆದರೆ ದಾವಣಗೆರೆ ಜಿಲ್ಲೆಯ ಹರಿಹರದ ಲೆಕ್ಕಾಚಾರವೇ ಬದಲಾಗಿತ್ತು. ಹರಿಹರ ಕ್ಷೇತ್ರದಲ್ಲಿ ಹಾಲಿ ಕಾಂಗ್ರೇಸ್ಕಕರು ಇದ್ದರೂ ಅಭ್ಯರ್ಥಿ ಘೋಷಣೆಯಾಗಿದ್ದು ಕೊನೆಯ ಪಟ್ಟಿಯಲ್ಲಿ. ಎಸ್. ರಾಮಪ್ಪ ಕ್ಷೇತ್ರದ ಹಾಲಿ ಶಾಸಕರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಶ್ರೀನಿವಾಸ್ ನಂದಿಗಾವಿ ಅಭ್ಯರ್ಥಿ ಎಂದು ಘೋಷಣೆ

ಟಿಕೆಟ್ ‘ಕೈ’ ತಪ್ಪಿದ ಬೇಸರವಿದೆ.!  ➤ ಆದರೆ ಪಕ್ಷಕ್ಕೆ ಯಾವತ್ತಿಗೂ ದ್ರೋಹ ಬಗೆಯಲ್ಲ Read More »

ಕರ್ನಾಟಕ

ಸಿಎಂಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿ.! ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ಜನ!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.24 ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಲ್ಲಾ ರಾಜಕಾರಣಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ರೋಡ್‌ ಶೋಗಳ ಮೂಲಕ ಅಬ್ಬರದ ಪ್ರಚಾರಕ್ಕೂ ಇಳಿದಿದ್ದಾರೆ. ಇದೇ ರೀತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ರೋಡ್‌ ಶೋ ಮಾಡುವ ವೇಳೆ ಅವರಿಗೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ ನಡೆದಿದೆ. ನಂತರ ರೊಚ್ಚಿಗೆದ್ದ ಜನ ಸಿಎಂ ಗೆ ಬೈದಿದ್ದ ವ್ಯಕ್ತಿಗೆ ಕ್ಲಾಸ್‌ ತೆಗೆದುಕೊಂಡ ಘಟನೆಯೂ ನಡೆದಿದೆ. ಬಳಿಕ ಆತನನನ್ನು ಪೊಲೀಸರೇ ಜೀಪಿನಲ್ಲಿ

ಸಿಎಂಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿ.! ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ಜನ! Read More »

ಕರ್ನಾಟಕ

SSLC ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಎ.24ರಿಂದ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಮೇ

SSLC ಮೌಲ್ಯಮಾಪನ ಆರಂಭ Read More »

ಕರ್ನಾಟಕ

ಮಂಗಳೂರು: ವಾಹನಗಳ ಪ್ರಖರ ಬೆಳಕಿನ ವಿರುದ್ಧ ಕಾರ್ಯಾಚರಣೆ   ➤ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.24. ಸಂಚಾರಿ ನಿಯಮಗಳನ್ನು ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ. ವಾಹನಗಳಲ್ಲಿ ಅತ್ಯಾಕರ್ಷಣೆಯ ಉದ್ದೇಶದಿಂದ ಅನಗತ್ಯವಾಗಿ ಅಳವಡಿಸುವ ಇಂತಹ ಬೆಳಕುಗಳಿಂದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಹೀಗಾಗಿ ಪ್ರಖರ ಬೆಳಕಿನ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಮಂಗಳೂರು: ವಾಹನಗಳ ಪ್ರಖರ ಬೆಳಕಿನ ವಿರುದ್ಧ ಕಾರ್ಯಾಚರಣೆ   ➤ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ Read More »

ಕರಾವಳಿ

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು.ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ.      

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!   Read More »

ಕರ್ನಾಟಕ

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಏ.24. ದ್ವಿಚಕ್ರ ವಾಹನ ಅಪಘಾತದಲ್ಲಿ ಬಾಲಕ ಮೃತಪಟ್ಟ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮೊಹಮ್ಮದ್ ಸೈಪ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top