karnataka

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..!

ಸ್ ಕಡಬ)Newskadaba.com ಬೆಂಗಳೂರು,ಏ.23 ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚುನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.  

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.23. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು ಎಂದು ವರದಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದಿದ್ದಾಗಲೂ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು ಎನ್ನಲಾಗಿದೆ.

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊರ್ವ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.    

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.!

(ನ್ಯೂಸ್ ಕಡಬ)Newskadaba.com ಹರಿಯಾಣ ,ಏ.21 ಇಲ್ಲಿನ ರಸ್ತೆ ಬದಿಯ ಮ್ಯಾನ್‌ಹೋಲ್‌ನಿಂದ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ವಾಟಿಕಾ ಚೌಕ್‌ನ ಬಳಿ ಬಾದಶಹಪುರದ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಮ್ಯಾನ್‌ಹೋಲ್ ತೆರೆದಿದೆ. ಅದರಿಂದ ದುರ್ವಾಸನೆ ಬರುತ್ತಿದೆ ಎಂಬ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.ಈ ಸಂದರ್ಭ ಪೊಲೀಸರಿಗೆ ಒಳಗಡೆ ಮೃತ ದೇಹವಿರುವುದು ತಿಳಿದುಬಂದಿದೆ. ಬಳಿಕ ಅಗ್ನಿಶಾಮಕ ದಳ ಹಾಗೂ ಜೆಸಿಬಿ ಯಂತ್ರದ ನೆರವಿನಿಂದ 10 ಅಡಿ ಆಳಕ್ಕೆ ಬಿದ್ದ

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.! Read More »

ಕರ್ನಾಟಕ

ಅಭ್ಯರ್ಥಿಗಳಿಂದ ಹಣ ಪಡೆದು ಜನರಿಗೆ ನೀಡದ ಮುಖಂಡ..!   ➤ ಮುಖಂಡನಿಗೆ ಹಿಗ್ಗಾಮುಗ್ಗಾ ತಳಿಸಿದ ಮಹಿಳೆ..!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.21 ಅಭ್ಯರ್ಥಿಗಳಿಂದ ಹಣ ಪಡೆದು ಗ್ರಾಮದ ಜನರಿಗೆ ನೀಡದೇ ತಾನೇ ಇಟ್ಟುಕೊಂಡಿದ್ದಾನೆ ಎನ್ನಲಾದ ಗ್ರಾಮದ ಮುಖಂಡನಿಗೆ ಮಹಿಳೆಯೊಬ್ಬರು ಹಿಗ್ಗಾಮುಗ್ಗಾ ಬಾರಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ  ನಡೆದಿದೆ. ಹಣ ನೀಡುತ್ತೇನೆ ಎಂದು ವಂಚಿಸಿದ ಮಂಜು ಎಂಬಾತನಿಗೆ ಕ್ಲಾಸ್‌ ತೆಗೆದುಕೊಂಡು ಮನಸ್ಸಿಗೆ ಬಂದಂತೆ ಕೋಲಿನಿಂದ ಮಹಿಳೆ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಶ್ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಹಮ್ಮಿಕೊಂಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿದರೆ ದುಡ್ಡು ಕೊಡೋದಾಗಿ ಮಂಜು ಗ್ರಾಮಸ್ಥರಿಗೆ ಹೇಳಿ ಕರೆದೊಯ್ದಿದ್ದ.ಆದರೆ ಕಾರ್ಯಕ್ರಮ ಮುಗಿದರೂ ಗ್ರಾಮದ

ಅಭ್ಯರ್ಥಿಗಳಿಂದ ಹಣ ಪಡೆದು ಜನರಿಗೆ ನೀಡದ ಮುಖಂಡ..!   ➤ ಮುಖಂಡನಿಗೆ ಹಿಗ್ಗಾಮುಗ್ಗಾ ತಳಿಸಿದ ಮಹಿಳೆ..! Read More »

ಕರ್ನಾಟಕ

ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಕೂಲಿ ಕಾರ್ಮಿಕರ ಮಗ..!

(ನ್ಯೂಸ್ ಕಡಬ)Newskadaba.com ತಾಳಿಕೋಟೆ,ಏ.21 ಜಿಲ್ಲೆಯ ತಾಳಿಕೋಟೆ ಪಟ್ಟಣದ ಎಸ್.ಕೆ. ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ರಾಹುಲ್ ರಾಠೋಡ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಸ್ಥಾನದಲ್ಲಿ ಉತ್ತೀರ್ಣನಾಗಿದ್ದಾನೆ. ವಿದ್ಯಾರ್ಥಿ ರಾಹುಲ್ ರಾಠೋಡ ಪಿಯು ಪರೀಕ್ಷೆಯಲ್ಲಿ 592 ಅಂಕ ಪಡೆದು ಸಾಧನೆ ಮಾಡಿದ್ದಾನೆ. ವಿದ್ಯಾರ್ಥಿ ರಾಹುಲ್ ರಾಠೋಡ ಕುಟುಂಬ ಕಡು ಬಡತನದಾಗಿದ್ದು, ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದು, ಕೂಲಿ ಕಾರ್ಮಿಕರಾಗಿದ್ದಾರೆ.ರಾಹುಲ್ ರಾಠೋಡನ ಸಾಧನೆ ಕಂಡು ವಿದ್ಯಾರ್ಥಿಯ ತಂದೆ- ತಾಯಿ ಮೋತಿಲಾಲ್ ಹಾಗೂ ಸವಿತಾ ಸಂತಸಪಟ್ಟಿದ್ದು, ವಿದ್ಯಾರ್ಥಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಕೂಲಿ ಕಾರ್ಮಿಕರ ಮಗ..! Read More »

ಕರ್ನಾಟಕ

ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ನೀತಿ ಸಂಹಿತೆ ಉಲ್ಲಂಘನೆ..!   ➤ ಪ್ರಕರಣ ದಾಖಲು..!  

(ನ್ಯೂಸ್ ಕಡಬ)Newskadaba.com ತುಮಕೂರು,ಏ.21 ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.ನಾಗೇಶ್ ರವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯೊಳಗೆ ನಾಲ್ಕು ಖಾಸಗಿ ಕಾರ್, ಒಂದು ಬೆಂಗಾವಲು ವಾಹನ ತಂದಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಬರುವ ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ ಮೂರು ವಾಹನ ತರಲು ಮಾತ್ರ

ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ನೀತಿ ಸಂಹಿತೆ ಉಲ್ಲಂಘನೆ..!   ➤ ಪ್ರಕರಣ ದಾಖಲು..!   Read More »

ಕರ್ನಾಟಕ

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ನ್ಯಾಯಾಂಗದ ಆದೇಶಗಳನ್ನು ಸಾಮಾನ್ಯ ಜನ ಮತ್ತು ದಾವೆದಾರರಿಗೆ ಅರ್ಥೈಸುವುದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ ನ ಒಟ್ಟು 197 ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಹೈಕೋರ್ಟ್‌ಗಳು ಈಗಾಗಲೇ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಪ್ರಕಟಿಸಲು ಆರಂಭಿಸಿವೆ. ಆದರೆ, ಅತಿ ಹೆಚ್ಚು ತೀರ್ಪುಗಳನ್ನು ಕನ್ನಡದಲ್ಲಿ ಪ್ರಕಟಿಸಿರುವುದು ಕರ್ನಾಟಕ ಹೈಕೋರ್ಟ್ ಮಾತ್ರ ಎಂದು ತಿಳಿದು ಬಂದಿದೆ.

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ Read More »

ಕರ್ನಾಟಕ

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಪರ ವಹಿಸುವಂತೆ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿಗೆ ಒತ್ತಡ ಹೇರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದಲ್ಲಿ ಆರೋಪಿತರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್​ ರದ್ದುಪಡಿಸಿದೆ. ಈ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು Read More »

ಕರ್ನಾಟಕ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಚುನಾವಣಾ ದಿನಾಂಕ ಘೋಷಣೆಯಾಗಿದ್ದರೂ ಸಹ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ.ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯಬೇಕಿದೆ.          

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…! Read More »

ಕರ್ನಾಟಕ
Scroll to Top