karnataka

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಅತಿವೇಗದ ಎರಡು ರೈಲುಗಳ ವಿನ್ಯಾಸ ಹಾಗೂ ತಯಾರಿಕೆಗೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ಅಧೀನಕ್ಕೆ ಸೇರಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ (ಐಸಿಎಫ್‌) 866.87 ಕೋಟಿ ರು. ಮೌಲ್ಯದ ಗುತ್ತಿಗೆ ಲಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಇಎಂಎಲ್‌ ಮಂಗಳವಾರ ತಿಳಿಸಿದೆ. ಪ್ರತಿ ರೈಲು ಎಂಟು ಬೋಗಿಗಳನ್ನು ಒಳಗೊಂಡಿದ್ದು, ಗಂಟೆಗೆ 280 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಮುಂಬೈ ಹಾಗೂ ಅಹಮದಾಬಾದ್ ನಡುವೆ ನಿರ್ಮಿಸಲಾಗುತ್ತಿರುವ ಅತಿವೇಗದ ರೈಲ್ವೆ […]

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌ Read More »

ಕರ್ನಾಟಕ

ಹಿರಿಯ ನಟ ಅತುಲ್ ಪರ್ಚುರೆ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ. 15. ಹಿರಿಯ ನಟ ಅತುಲ್ ಪರ್ಚುರೆ ಅವರು ತಮ್ಮ 57 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರು ಕಪಿಲ್ ಶರ್ಮಾ ಅವರ ಹಾಸ್ಯ ಕಾರ್ಯಕ್ರಮದ ಸ್ಮರಣೀಯ ಅವಧಿಯನ್ನು ಒಳಗೊಂಡಂತೆ ಹಲವಾರು ಹಿಂದಿ ದೂರದರ್ಶನ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಮರಾಠಿ ಪ್ರಸಿದ್ಧ ನಟರಾಗಿದ್ದರು. ಒಂದು ಟಾಕ್ ಶೋ ಪ್ರದರ್ಶನದಲ್ಲಿ, ಅವರು ತಮ್ಮ ಕ್ಯಾನ್ಸರ್ ರೋಗನಿರ್ಣಯವನ್ನು ಬಹಿರಂಗಪಡಿಸಿದರು, ವೈದ್ಯರು ಅವರ ಯಕೃತ್ತಿನಲ್ಲಿ

ಹಿರಿಯ ನಟ ಅತುಲ್ ಪರ್ಚುರೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ Read More »

ಕರ್ನಾಟಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಶಬಾನಾ (44) ಎಂದು ಗುರುತಿಸಲಾಗಿದೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಈ ಘಟನೆ ಬಳಿಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ‘ಕುಸುಮ್‌– ಸಿ’ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಸೋಮವಾರ ಸೂಚನೆ ನೀಡಿದ್ದಾರೆ. ಕುಸುಮ್‌ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜೊತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್‌ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು ಎಂದು ತಾಕೀತು ಮಾಡಿದರು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸಲಾಗುತ್ತದೆ ಎಂಬ

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ Read More »

ಕರ್ನಾಟಕ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ

(ನ್ಯೂಸ್ ಕಡಬ) news kadaba.com ಅ. 14. ಹಂಪಿಯ ಆನೆಗೊಂದಿಯಲ್ಲಿ ಕಳೆದೊಂದು ವಾರದಿಂದ ಫೋಟೋ ಕ್ಲಿಕ್ಕಿಸಲು ಹಾಗೂ ವಿಡಿಯೋ ತೆಗೆದುಕೊಳ್ಳಲು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ)ಯ ಕೆಲ ಅಧಿಕಾರಿಗಳು ನಿರ್ಬಂಧ ಹೇರುತ್ತಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ Read More »

ಕರ್ನಾಟಕ

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಅ. 12. ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು, “ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ” ಎಂದರು. ʼರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Crime

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 12.   ಹಳೆ ದ್ವೇಷಕ್ಕೆ ಯುವಕನ‌ನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಗೋಪನಕೊಪ್ಪದ ಸಂತೋಷನಗರದ ಬಳಿ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವು ಚಂದ್ರಶೇಖರ್ ಕಮ್ಮಾರ (23) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸುದೀಪ್ ರಾಯಾಪುರ ಎಂದು ಗುರುತಿಸಲಾಗಿದೆ. ಆಯುಧ ಪೂಜೆ ದಿನವೇ ಚಾಕುವಿನಿಂದ ಇರಿದು ಯುವಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸುಮಾರು ರಾತ್ರಿ 11.15 ಗಂಟೆಗೆ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿವು ಕಮ್ಮಾರನನ್ನ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು,ಅ. 12.   ಒಂದು ಮೆಸೇಜ್‌ನಿಂದ ಯುವಕನೊಬ್ಬ ತನ್ನ ಕೆಲಸವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತ ತನ್ನ ಸಹೋದ್ಯೋಗಿ ಮಹಿಳೆಯ ಬಟ್ಟೆ ಧರಿಸುವಿಕೆಯ ಬಗ್ಗೆ ಕಮೆಂಟ್‌ ಮಾಡಿದ್ದು, ಈ ಕುರಿತು ದೂರು ದಾಖಲಿಸಲಾಗಿತ್ತು. ಮಹಿಳೆಗೆ ಆಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡುವ ಮೂಲಕ ದೂರು ನೀಡಿದ್ದರು. ಯುವಕ ನಿಖಿತ್ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top