karnataka

Death, deadbody, Waterfall

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ. ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

43 ಅಭ್ಯರ್ಥಿಗಳ ಕಾಂಗ್ರೆಸ್‌ ನ ಮೂರನೇ ಪಟ್ಟಿ ರಿಲೀಸ್‌    ➤ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್‌ ಇಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ವರದಿ ತಿಳಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ ಎಂದು ವರದಿಯಾಗಿದೆ.  

43 ಅಭ್ಯರ್ಥಿಗಳ ಕಾಂಗ್ರೆಸ್‌ ನ ಮೂರನೇ ಪಟ್ಟಿ ರಿಲೀಸ್‌    ➤ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್‌ ಇಲ್ಲ Read More »

ಕರ್ನಾಟಕ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಹಿಂದುಗಳನ್ನು ಕೆರಳಿಸುವಂಥ ಹೇಳಿಕೆಗಳನ್ನು ನೀಡುವ ಮೂಲಕವೇ ಸುದ್ದಿಯಾಗುತ್ತಿದ್ದ ನಟ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಸಾಗರೋತ್ತರ ಭಾರತೀಯ ನಾಗರೀಕ ವೀಸಾ ಹೊಂದಿದ್ದ ಚೇತನ್‌, ಹೋರಾಟದ ಮೂಲಕವೇ ಇಲ್ಲಿ ಸುದ್ದಿಯಾಗಿದ್ದರು. ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಸರ್ಕಾರ Read More »

ಕರ್ನಾಟಕ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣದ ಸದ್ದು‌ ಜೋರಾಗಿದೆ. ತಡರಾತ್ರಿ ಬಸವನಗುಡಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣವನ್ನ ಜಪ್ತಿ ಮಾಡಿದ್ದಾರೆ‌. ರಿಷಭ್ ಎಂಬಾತನಿಂದ ಹಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹ್ಯುಂಡೈ ಕ್ರೆಟಾ ಕಾರಿನಲ್ಲಿ ಹೋಗುತ್ತಿದ್ದ ರಿಷಭ್ ಎಂಬಾತನನ್ನ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ 2 ಸಾವಿರ, 500 ಹಾಗೂ‌ 200 ರೂ. ಮುಖಬೆಲೆಯ ಒಟ್ಟು 18 ಲಕ್ಷ ರೂ‌ ನಗದು ಪತ್ತೆಯಾಗಿದೆ. ಸದ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ಜಪ್ತಿ Read More »

ಕರ್ನಾಟಕ

ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಏ.15. ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಆಕೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು, ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು ಎನ್ನಲಾಗಿದೆ.

ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »

ಕರ್ನಾಟಕ

ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಹಾವೇರಿ, ಏ.15. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.15. ವ್ಯಕ್ತಿಯೋರ್ವ ತನ್ನ ಹೊಲದಲ್ಲಿ ಬೆಳೆಸಿದ್ದ ಗಾಂಜಾ ಗಿಡವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಲಗಲದಿನ್ನಿ ಗ್ರಾಮ ವ್ಯಾಪ್ತಿಯ ಬಸವರಾಜ ಮಲ್ಲೇಶಪ್ಪ ಬಿರಾದಾರ ಎಂಬಾತನ ಹೊಲದಲ್ಲಿ ಬೆಳೆಗಳ ಮಧ್ಯೆ ಕಾನೂನು ಬಾಹಿರವಾಗಿ ಬೆಳೆಸಿದ್ದ ಸುಮಾರು 1.80 ಲಕ್ಷ ಮೌಲ್ಯದ 36.820 ಕೆಜಿಯಷ್ಟು ಹಸಿ ಗಾಂಜಾ ಬೆಳೆಯನ್ನು ಮುದ್ದೇಬಿಹಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಗಿಡ ಬೆಳೆದಿರುವ ಬಗ್ಗೆ ಒದಗಿದ ಖಚಿತ ಮಾಹಿತಿ ಮೇರೆಗೆ ಮುದ್ದೇಬಿಹಾಳ ಸಿಪಿಐ

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಆಸ್ಪತ್ರೆಗಳಲ್ಲಿ `ಮರಣ ಕಾರಣ’ ವೈದ್ಯಕೀಯ ಪ್ರಮಾಣಪತ್ರ ನೋಂದಣಿ ಕಡ್ಡಾಯ ➤ ರಾಜ್ಯ ಸರ್ಕಾರ ಸುತ್ತೋಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ರಾಜ್ಯದ ಎಲ್ಲಾ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಪತ್ರದಲ್ಲಿ `ಮರಣ ಕಾರಣ’ ಭರ್ತಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ವೈದ್ಯರು/ವೈದ್ಯ ವೃತ್ತಿಪರರು ಉಪಚರಿಸಿದ ವ್ಯಕ್ತಿಯು ಮೃತನಾದಲ್ಲಿ ಮೃತ ವ್ಯಕ್ತಿಯ ಮರಣ ಕಾರಣವನ್ನು ಮರಣ ಕಾರಣ ವೈದ್ಯಕೀಯ ಪಮಾಣ ಪತ್ರ (ನಮೂನೆ-4/4ಎ) ರಲ್ಲಿ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಜನನ, ಮರಣ ಮುಖ್ಯ ನೋಂದಣಾಧಿಕಾರಿಗಳ ಕಛೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  

ಆಸ್ಪತ್ರೆಗಳಲ್ಲಿ `ಮರಣ ಕಾರಣ’ ವೈದ್ಯಕೀಯ ಪ್ರಮಾಣಪತ್ರ ನೋಂದಣಿ ಕಡ್ಡಾಯ ➤ ರಾಜ್ಯ ಸರ್ಕಾರ ಸುತ್ತೋಲೆ Read More »

ಕರ್ನಾಟಕ

ಕೆಟ್ಟು‌ ನಿಂತಿದ್ದ ಆಟೋದಲ್ಲಿ ಬರೊಬ್ಬರಿ 1 ಕೋಟಿ ರೂ.ಹಣ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಕೆಟ್ಟು ನಿಂತ ಆಟೋದಲ್ಲಿ ಬರೊಬ್ಬರಿ ಒಂದು ಕೋಟಿ ರೂ.‌ಹಣ ಪತ್ತೆಯಾದ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ನಡೆದಿದೆ. ಠಾಣೆ ಬಳಿಯ ಚೆಕ್ ಪೋಸ್ಟ್ ಪಕ್ಕ ಆಟೋ ಕೆಟ್ಟು ನಿಂತ ಸಂದರ್ಭದಲ್ಲಿ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಕೆಟ್ಟು‌ ನಿಂತಿದ್ದ ಆಟೋದಲ್ಲಿ ಬರೊಬ್ಬರಿ 1 ಕೋಟಿ ರೂ.ಹಣ ಪತ್ತೆ Read More »

ಕರ್ನಾಟಕ

PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. PFI ನಿಷೇಧದ ವೇಳೆ ಬಂಧಿತ 8 ಮಂದಿ ಆರೋಪಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಜಾಮೀನು ನೀಡಿದೆ. ದೇಶಾದ್ಯಂತ ಪಿಎಫ್’ಐ ಕಚೇರಿ, ನಾಯಕರ ಮನೆ ಮೇಲೆ ದಾಳಿ ನಡೆಸಿದ ಎನ್ ಐಎ ಮತ್ತು ಸ್ಥಳೀಯ ಪೊಲೀಸರು ಹಲವರನ್ನು ಬಂಧಿಸಿದ್ದರು. ಕರ್ನಾಟಕದಲ್ಲಿ ಒಟ್ಟು 19 ಮಂದಿಯ ವಿರುದ್ಧ ಯುಎಪಿಎ ಮತ್ತು ಐಪಿಸಿ 153ಎ, 120ಬಿ ಸೆಕ್ಷನ್’ ಗಳಡಿ ಎಫ್’ಐಆರ್ ದಾಖಲಿಸಲಾಗಿತ್ತು. ಈ ಪೈಕಿ 15 ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಇತ್ತೀಚೆಗೆ

PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ Read More »

ಕರ್ನಾಟಕ
Scroll to Top