karnataka

‘ನನಗೆ ಟಿಕೆಟ್ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ’ ➤ ಜಗದೀಶ ಶೆಟ್ಟರ್

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.14. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ […]

‘ನನಗೆ ಟಿಕೆಟ್ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ’ ➤ ಜಗದೀಶ ಶೆಟ್ಟರ್ Read More »

ಕರ್ನಾಟಕ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಚುನಾವಣೆಗೆ ಅಧಿಸೂಚನೆಯೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ ರಾಜ್ಯಾದ್ಯಾಂತ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್​ನ 26, ಎಎಪಿ 10, ಜೆಡಿಎಸ್​ 12, 45 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ನೋಂದಾಯಿಯ ಮಾನ್ಯತೆ ಹೊಂದಿರದ ಪಕ್ಷಗಳು 100 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ ಸಲ್ಲಿಕೆಗೆ ಏಪ್ರಿಲ್​

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಪೂರ್ಣ ಆದೇಶ ಸಿದ್ಧಪಡಿಸದೆ ಅಥವಾ ಬರೆಸದೆ ಕೇವಲ ತೀರ್ಪಿನ ಕೊನೆಯ ಸಾಲನ್ನಷ್ಟೇ ಪ್ರಕಟಿಸುತ್ತಿದ್ದ ಕರ್ನಾಟಕದ ಜಾರಿ ನ್ಯಾಯಾಲಯದ ನ್ಯಾಯಾಧೀಶ ಒಬ್ಬರನ್ನು ಸುಪ್ರೀಂಕೋರ್ಟ್‌ ಸೇವೆಯಿಂದ ವಜಾಗೊಳಿಸಿದೆ. ಈ ಜಡ್ಜ್‌ ಸಂಪೂರ್ಣ ಆದೇಶ ಸಿದ್ಧಪಡಿಸದೆ ಕೇವಲ ತೀರ್ಪಿನ ಕೊನೆಯ ಭಾಗವನ್ನು ಮಾತ್ರ ತೆರೆದ ನ್ಯಾಯಾಲಯದಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಪೀಠ ಆದೇಶಿಸಿದೆ. ಹೈಕೋರ್ಟ್‌ನ ಪೂರ್ಣ ಪೀಠ ವಜಾಗೊಳಿಸಿದ್ದರೂ ವಿಭಾಗೀಯ ಪೀಠವು ಅವರನ್ನು ಮರುನೇಮಕಗೊಳಿಸಲು ನೀಡಿದ್ದ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ ಕೂಡ ವ್ಯಕ್ತಪಡಿಸಿದೆ.  

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ Read More »

ಕರ್ನಾಟಕ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್ ಗೆ ಕಳುಹಿಸಲಾಗಿದೆ. ಬಾಲಕನ ತೋಳು ದೇಹದಿಂದ ಬೇರ್ಪಟ್ಟಿದ್ದರೂ, ನಾರಾಯಣದ ವೈದ್ಯರು ಕೈಯನ್ನು ಮತ್ತೆ ದೇಹಕ್ಕೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆಸಿದರು. ತುಂಡಾಗಿದ್ದ ತೋಳಿಗೆ ರಕ್ತದ ಸಂಚಲನೆಯನ್ನು ಮರು-ಸ್ಥಾಪಿಸಲು ಶಸ್ತ್ರಚಿಕಿತ್ಸೆಯು ಕೈಯನ

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು Read More »

ಕರ್ನಾಟಕ

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಬೀದಿ ದೀಪದ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ಮೊಬೈಲ್‌ ವ್ಯಾಪಾರಿಯೊಬ್ಬರು ಪ್ರಾಣ ತೆತ್ತಿರುವ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ಅಕ್ಬರ್‌ ಅಲಿ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಡಿವಾಳದ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪದ ಅಲಿ ನಡೆದುಕೊಂಡು ಹೋಗುವಾಗ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು Read More »

ಕರ್ನಾಟಕ

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಅರೆಕಾಲಿಕ ಉದ್ಯೋಗ ಕೊಡಿಸುವುದಾಗಿ ಹೇಳಿ ತಮ್ಮ ಆ್ಯಪ್‌ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೆ ವಂಚಿಸಿದ ಪ್ರಕರಣ ಸಂಬಂಧ ಇಂಡಿಯನ್‌ ಮಿನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್‌.ಸುಧೀರ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ಅವರು, ವಂಚನೆ ಪ್ರಕರಣದಲ್ಲಿ ಫ್ರೀಡಂ ಕಂಪನಿಯ ಸಿಇಒ ಸುಧೀರ್‌ನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇತರರ ಪಾತ್ರದ ಬಗ್ಗೆ ಸಹ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ Read More »

ಕರ್ನಾಟಕ

ರಾಜಕೀಯ ನಿವೃತ್ತಿ ಘೋಷಿಸಿದ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್

(ನ್ಯೂಸ್ ಕಡಬ) newskadaba.com. ಮೈಸೂರು, ಏ.13.  ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿದ್ದು, ಇದೀಗ ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2024 ರಲ್ಲಿ ಸಂಸದರ ಅವಧಿ ಕೊನೆಗೊಂಡ ನಂತರ ಸಕ್ರಿಯ ರಾಜಕೀಯದಿಂದ ಹೊರನಡೆಯುವುದಾಗಿ ಹೇಳಿದ್ದಾರೆ. ಇನ್ನು 2013ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಶ್ರೀನಿವಾಸ್‌ ಪ್ರಸಾದ್ ಈ ಹಿಂದೆಯೇ ಘೋಷಿಸಿದ್ದರು. ಆದರೆ 2016 ರಲ್ಲಿ ಅಂದಿನ

ರಾಜಕೀಯ ನಿವೃತ್ತಿ ಘೋಷಿಸಿದ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ Read More »

ಕರ್ನಾಟಕ

ಮಂಗಳೂರು: ನಂಬರ್ ಪ್ಲೇಟ್ ನಿಯಮ ಉಲ್ಲಂಘನೆ ವಿರುದ್ದ ಕಾರ್ಯಾಚರಣೆ ➤ 87 ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.13. ನಂಬರ್ ಪ್ಲೇಟ್ ಅಳವಡಿಸದ, ನಂಬರ್ ಪ್ಲೇಟ್ ನಿಯಮ ಮೀರಿದ ವಾಹನಗಳ ವಿರುದ್ದ ನಗರದಾದ್ಯಂತ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ಯಾನ್ಸಿ ನಮ್ಬರ್ ಪ್ಲೇಟ್, ಅಸಮರ್ಪಕ ನಂಬರ್ ಪ್ಲೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 87 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ.  

ಮಂಗಳೂರು: ನಂಬರ್ ಪ್ಲೇಟ್ ನಿಯಮ ಉಲ್ಲಂಘನೆ ವಿರುದ್ದ ಕಾರ್ಯಾಚರಣೆ ➤ 87 ಪ್ರಕರಣ ದಾಖಲು Read More »

ಕರಾವಳಿ

ಶಾಲಾ ಬಾಲಕ ನಾಪತ್ತೆ ! ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಕೊಲ್ಲೂರು, ಏ.13. ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. 4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ.

ಶಾಲಾ ಬಾಲಕ ನಾಪತ್ತೆ ! ➤ ದೂರು ದಾಖಲು Read More »

ಕರ್ನಾಟಕ
Scroll to Top