karnataka

PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ […]

PSI ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಕೇಳಿದ ಹೈಕೋರ್ಟ್ Read More »

ಕರ್ನಾಟಕ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.11. ಕರ್ನಾಟಕ ದಿಂದ ಉಪ್ಪಳಕ್ಕೆ ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಮಂಜೇಶ್ವರ ಪೊಲೀಸರು ವಶಡಿಸಿಕೊಂಡಿದ್ದು, ಬಂಟ್ವಾಳ ನಿವಾಸಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಮ್ತಿಯಾಜ್(38) ಮತ್ತು ಮುಹಮ್ಮದ್ ಜುನೈದ್(29) ಬಂಧಿತರು ಎಂದು ಗುರುತಿಸಲಾಗಿದೆ. ಇವರಿಂದ ಎರಡೂ ವರೆ ಕಿಲೋ ಗಾಂಜಾ ವನ್ನು ವಶ ಪಡಿಸಿಕೊಂಡಿದ್ದು, ಮಂಜೇಶ್ವರ ಕೆದಂಬಾಡಿ ಕಡೆಯಿಂದ ಕುಂಜತ್ತೂರಿಗೆ ಒಳದಾರಿಯಾಗಿ ಬರುತ್ತಿದ್ದ ಆಟೋ ರಿಕ್ಷಾ ವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಉಪ್ಪಳ ಕಡೆಗೆ ಸಾಗಾಟ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ.! ➤ ಬಂಟ್ವಾಳ ನಿವಾಸಿಗಳಿಬ್ಬರು ಅರೆಸ್ಟ್ Read More »

ಕರಾವಳಿ

ಮಂಗಳೂರು: ಬಸ್ ಸೀಟಿನಿಂದ ಬಿದ್ದು ಮಹಿಳೆ ಗಂಭೀರ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.11. ಹಂಪ್ಸ್ ನಲ್ಲಿ ಬಸ್ ದಿಡೀರ್ ಬ್ರೇಕ್ ಹಾಕಿದ ಕಾರಣ ಬಸ್‌ ‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ. ಪಾರ್ವತಮ್ಮ ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಮಂಗಳೂರಿನ ಆಸ್ಪತ್ರೆಗೆಂದು ಬಂದು ಬಸ್ ವೊಂದರಲ್ಲಿ ವಾಪಸ್ ಉಡುಪಿಗೆ ಹೋಗುತ್ತಿದ್ದರು. ಈ ವೇಳೆ ಬಸ್ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ತಲುಪಿದಾಗ ಬಸ್ ಚಾಲಕ

ಮಂಗಳೂರು: ಬಸ್ ಸೀಟಿನಿಂದ ಬಿದ್ದು ಮಹಿಳೆ ಗಂಭೀರ..! Read More »

ಕರಾವಳಿ

ಸಚಿವ ಮುನಿರತ್ನ ವಿರುದ್ಧ ಮತ್ತೊಂದು FIR

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.10. ಮತದಾರರಿಗೆ ಬೆಂಬಲಿಗರು ಸೀರೆ ಹಂಚುತ್ತಿದ್ದ ಹಿನ್ನೆಲೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್’ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವಾಗ ಸಿಕ್ಕಿಬಿದ್ದಿದ್ದರು. ಕೋಮುದ್ವೇಷ ಭಾಷಣ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಆರ್.ಆರ್. ನಗರ ಪೊಲೀಸರು ಎಫ್’ಐಆರ್ ದಾಖಲಿಸಿಕೊಂಡಿದ್ದರು.  

ಸಚಿವ ಮುನಿರತ್ನ ವಿರುದ್ಧ ಮತ್ತೊಂದು FIR Read More »

ಕರ್ನಾಟಕ

RCB ತಂಡಕ್ಕೆ ಕನ್ನಡಿಗ ಸೇರ್ಪಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಏ.10. RCB ತಂಡಕ್ಕೆ ಕನ್ನಡಿಗ ಸೇರ್ಪಡೆಯಾಗಿದೆ. ರಜತ್ ಪಾಟಿದಾರ್ ಬದಲಾಗಿ ವೇಗಿ ವೈಶಾಕ್ ವಿಜಯ್ ಕುಮಾರ್ ಅವರು, ಮೂಲಬೆಲೆ ೨೦ ಲಕ್ಷಕ್ಕೆ ಬೆಂಗಳೂರು ತಂಡ ಸೇರ್ಪಡೆಯಾಗಿದ್ದಾರೆ. ದೇಶಿಯ ಕ್ರಿಕೆಟ್ ನಲ್ಲಿ ಕರ್ನಾಟಕ ಪ್ರತಿನಿಧಿಸುವ ವೈಶಾಕ್, ಇದುವರೆಗೆ 14ಟಿ20 ಪಂದ್ಯಗಳನ್ನಾಡಿದ್ದು , 22 ವಿಕೆಟ್ ಕಬಳಿಸಿದ್ದಾರೆ. ಹಿಮ್ಮಡಿ ಗಾಯಕ್ಕೆ ಒಳಗಾಗಿರುವ ಪಾಟಿದಾರ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ ಐಪಿಎಲ್ ಸರಣಿಯಿಂದಲೇ ಹೊರಗುಳಿದಿದ್ದಾರೆ. ಪಾಟಿದಾರ್ ಹಿಮ್ಮಡಿ ನೋವಿನಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ

RCB ತಂಡಕ್ಕೆ ಕನ್ನಡಿಗ ಸೇರ್ಪಡೆ Read More »

ಕರ್ನಾಟಕ

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು. ಇನ್ನು ಮೊದಲ ಪಟ್ಟಿಯಲ್ಲಿ 170 ರಿಂದ 180

‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ Read More »

ಕರ್ನಾಟಕ
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.10. ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಹೊಂದಿದ್ದರು. ಪ್ರವೀಣ್ 10 ವರ್ಷಗಳಿಂದ

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಒಳ ಉಡುಪುವಿನಲ್ಲಿ 2.28 ಕೆ.ಜಿ ಚಿನ್ನ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದುಬೈಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಒಳಉಡುಪಿನಲ್ಲಿ 2.28 ಕೆಜಿ ಚಿನ್ನ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ಚಿನ್ನಸಾಗಾಟಕ್ಕೆಂದು ಒಳ ಉಡುಪು ತಯಾರಿ ಮಾಡಿದ್ದರು. ಒಬ್ಬಾತ 3 ಚಿನ್ನದ ಬಿಸ್ಕೆತ್ ಮತ್ತು ಇಬ್ಬರು ಚಿನ್ನದ ಪೇಸ್ಟ್ ನ್ನು ಬಚ್ಚಿಟ್ಟುಕೊಂಡು ದುಬೈಯಿಂದ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ಧಾಣಕ್ಕೆ ಬಂದಿಳಿದ್ದರು ಎನ್ನಲಾಗಿದೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಒಳ ಉಡುಪುವಿನಲ್ಲಿ 2.28 ಕೆ.ಜಿ ಚಿನ್ನ ಪತ್ತೆ Read More »

ಕರ್ನಾಟಕ
Scroll to Top