karnataka

ದಲಿತರ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಡ್ಯ, ಏ.07. ಶ್ರೀರಂಗಪಟ್ಟಣ ತಾಲೂಕಿನ ನಂದಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಆರೋಪದ ಮೇರೆಗೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ ಎಂದು ವರದಿಯಾಗಿದೆ. ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೆರೆಗೆ ಬಂಧನ ಮಾಡಲಾಗಿದೆ. ಆರೋಪಿಗಳಾದ ಇಕ್ವಾಲ್‌ ಪಾಷಾ , ನಾಸಿರ್‌ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಶ್ರೀರಂಗಪಟ್ಟಣದಲ್ಲಿ ಇಂದು ವಿಹೆಚ್‌ಪಿ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ. ಆರೋಪಿಗಳ ಬಂಧನ ಬೆನ್ನಲ್ಲೆ ವ್ಯಾಪಾರ ವಹಿವಾಟು ಪುನಾರಂಭಿಸಿದ್ದಾರೆ.  

ದಲಿತರ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಏ.8ರ ನಂತರ BJP ಪಟ್ಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ. 07. ಬಿಜೆಪಿ ಕೋರ್‌ ಕಮೀಟಿ ಸಭೆ ಬುಧವಾರವಷ್ಟೇ ಮುಗಿದಿದ್ದು, ಏ.8ರಂದು ಮತ್ತೂಮ್ಮೆ ಸಭೆ ನಡೆಸಿ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ನಾವು ಶ್ರದ್ಧೆ-ನಿಷ್ಠೆಯಿಂದ ನೊಂದ ದೀನದಲಿತ, ಹಿಂದುಳಿದ ವರ್ಗದ ಸಮುದಾಯಕ್ಕೆ ಶಾಶ್ವತವಾಗಿ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ನಾವು ಮಾಡಲಾಗದ್ದನ್ನು ಇವರು ಮಾಡಿದರಲ್ಲ ಎಂಬ ಅಪರಾಧ ಮನೋಭಾವ ಕಾಂಗ್ರೆಸ್‌ನವರನ್ನು ಕಾಡುತ್ತಿದೆ. ಮೀಸಲಾತಿ

ಏ.8ರ ನಂತರ BJP ಪಟ್ಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.07. ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ. ರಸ್ತೆಯ ಎರಡೂ ಭಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

SSLC ಪರೀಕ್ಷಾ ಕೇಂದ್ರದಿಂದ ಅಪ್ಪನ ಅಂತ್ಯಸಂಸ್ಕಾರ ನೋಡಿದ ಮಗಳು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.07. SSLC ಎಕ್ಸಾಂ ಸಮಯದಲ್ಲಿ ರಾಜ್ಯದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದ್ದು, ಪರೀಕ್ಷಾ ಕೇಂದ್ರದಲ್ಲೇ ವಿಡಿಯೋ ಕಾಲ್ ಮೂಲಕ ಮಗಳು ತಂದೆಯ ಅಂತ್ಯ ಸಂಸ್ಕಾರವನ್ನು ನೋಡಿದ್ದಾಳೆ ಎಂದು ವರದಿಯಾಗಿದೆ. ಮನಿಯಾರ್ ಕೊಪ್ಪಳದ ನಿವಾಸಿ ಆರ್ಶೀಯಾ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ SSLC  ಓದುತ್ತಿದ್ದಾರೆ ಎನ್ನಲಾಗಿದೆ.

SSLC ಪರೀಕ್ಷಾ ಕೇಂದ್ರದಿಂದ ಅಪ್ಪನ ಅಂತ್ಯಸಂಸ್ಕಾರ ನೋಡಿದ ಮಗಳು Read More »

ಕರ್ನಾಟಕ
Death, deadbody, Waterfall

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.07. ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಏ.07. ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.  

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 95 ಲಕ್ಷ ಜಪ್ತಿ

(ನ್ಯೂಸ್ ಕಡಬ)newskadaba.com ಗದಗ, ಏ.06. ಚೆಕ್ ಪೋಸ್ಟ್ ಒಂದರಲ್ಲಿ ತಪಾಸಣೆ ನಡೆಸುತ್ತಿದ್ದಂತ ವೇಳೆಯಲ್ಲಿ ಕಾರೊಂದರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ಜಪ್ತಿ ಮಾಡಿರೋದಾಗಿ ತಿಳಿದು ಬಂದಿದೆ. ಹೊರವಲಯದ ದಂಡಿನ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಪೊಲೀಸರು, ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆಯಲ್ಲಿ ಕಾರಿನಲ್ಲಿ 95 ಲಕ್ಷ ನಗದು ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 95 ಲಕ್ಷ ಜಪ್ತಿ Read More »

ಕರ್ನಾಟಕ

`SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ➤ 16 ಶಿಕ್ಷಕರ ಅಮಾನತು

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.06. ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

`SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ➤ 16 ಶಿಕ್ಷಕರ ಅಮಾನತು Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 69.36 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿವೆ. ರಾಜ್ಯದ ನಾನಾ ಭಾಗಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯ ಮತ್ತಿತರ ಸಾಮಗ್ರಿಗಳನ್ನು ಚುನಾವಣಾ ಜಾಗೃತ ದಳಗಳು ಜಪ್ತಿ ಮಾಡಿದ್ದು, ಈವರೆಗೆ 22.75 ಕೋಟಿ ರೂ. ನಗದು ಸೇರಿ 69.36 ಕೋಟಿ ರೂ. ಮೌಲ್ಯದ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಬಂಡೀಪುರದ ಹುಲಿ ಸಫಾರಿಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ.  

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ? Read More »

ಕರ್ನಾಟಕ
Scroll to Top