karnataka

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!

(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್​ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ […]

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »

ಕರ್ನಾಟಕ

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..!

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚೆಗೆ ಕಿರುತೆರೆ ಕಲಾವಿದರು ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಕಿರುತೆರೆ ನಟಿ ‘ಗಟ್ಟಿಮೇಳ’ ಖ್ಯಾತಿಯ ನಿಶಾ ರವಿಕೃಷ್ಣನ್​ ಸ್ಮಾಲ್​ ಸ್ಕ್ರೀನ್​ನಿಂದ ಸಿಲ್ವರ್​ ಸ್ಕ್ರೀನ್​ಗೆ ಎಂಟ್ರಿ ಕೊಟ್ಟಿದ್ದು, ಸದ್ಯ ಎಂ.ಸಿ ಚನ್ನಕೇಶವ ನಿರ್ದೇಶನದ ‘ಅಂಶು’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಮಹಿಳಾ ಪ್ರಧಾನ ಸೈಕೆಡೆಲಿಕ್​ ಥ್ರಿಲ್ಲರ್​ ಜಾನರ್​ ಚಿತ್ರವಾಗಿದೆ. ಅಂದಹಾಗೆ ಸೈಕೆಡೆಲಿಕ್​ ಎಂದರೆ ಭ್ರಮೆ ಉಂಟು ಮಾಡುವ ಅಥವಾ ಮನೋವಿಕೃತ ಎಂದರ್ಥ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳೇ ಚಿತ್ರಕ್ಕೆ ಸ್ಪೂರ್ತಿಯಾಗಿದ್ದು,

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..! Read More »

ಕರ್ನಾಟಕ, ಸಿನಿಮಾ

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ

(ನ್ಯೂಸ್ ಕಡಬ)newskadaba.com, ಅ. 11 ಬೆಳಾಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕವು ಯಾವುದೇ ವಿಳಂಬವಿಲ್ಲದೆ ಯೋಜನೆಗೆ ಅಗತ್ಯ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ. ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಯಿತು. ಕಾಳಿ ಮತ್ತು

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ Read More »

ಕರ್ನಾಟಕ

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

(ನ್ಯೂಸ್ ಕಡಬ) newskadaba.com ಅ. 11. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಜಂಬೂಸವಾರಿ ಮೆರವಣಿಗೆಗೆ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅಕ್ಟೋಬರ್ 12ರ ಶನಿವಾರ ಸಂಜೆ 4 ರಿಂದ 4:30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಧ್ಯಾಹ್ನ 1.41ರಿಂದ 2.10ರೊಳಗೆ ಸಲ್ಲುವ ಶುಭ ಮಕರ

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಅ. 11. ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರದಂದು ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಅ. 11. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ Read More »

ಕರ್ನಾಟಕ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ

(ನ್ಯೂಸ್ ಕಡಬ) newskadaba.com ಅ. 11. ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೇ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿರುವುದಾಗಿ ವರದಿಯಾಗಿದೆ. ಗುರುವಾರದಂದು ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗವು, ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ Read More »

ಕರ್ನಾಟಕ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ

(ನ್ಯೂಸ್ ಕಡಬ)newskadaba.com ಮೈಸೂರು, ಅ. 11.  ದಸರಾ ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ವಿಜಯದಶಮಿ ಸಡಗರದಲ್ಲಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ Read More »

ಕರ್ನಾಟಕ

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು,

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ Read More »

ಕರ್ನಾಟಕ
Scroll to Top