karnataka

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ತುಮಕೂರು, ಏ.04.  ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್‌ನಲ್ಲಿರುವ ಚೆಕ್‌ಪೋಸ್ಟ್ ನಲ್ಲಿ  1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಆಭರಣ ವ್ಯಾಪಾರಿಗೆ ಪಾವತಿಸಲು ಹಣವನ್ನು ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್ ನಲ್ಲಿ ಅವರನ್ನು ತಡೆದ ಅಧಿಕಾರಿಗಳ ಹಣದ ಬಗ್ಗೆ ತಿಳಿಸುವಂತೆ ಹೇಳಿದ್ದಾರೆ.  

ಹಣ ಕೊಂಡೊಯ್ಯುತ್ತಿದ್ದ ವರನ ಬಂಧಿಸಿದ ಪೊಲೀಸರು Read More »

ಕರ್ನಾಟಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

(ನ್ಯೂಸ್ ಕಡಬ)newskadaba.com  ಹಾಸನ, ಏ.04. ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಘಾಟ್ ನಲ್ಲಿ ವಾಹನ ಸಂಚಾರ ಎ.15 ವರೆಗೆ ನಿಷೇಧ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.04. ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿ ಹಿನ್ನಲೆಯಲ್ಲಿ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ಹೆಚ್ಚುವರಿಯಾಗಿ ಮುಂದುವರೆಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಮೊದಲು ಎ. 05 ರ ವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು, ಇದೀಗ ಕಾಮಗಾರಿ ವಿಳಂವಾಗಿರುವ ಕಾರಣ ಈ ವಾಹನ ಸಂಚಾರದ ನಿಷೇಧವನ್ನು ಎಪ್ರಿಲ್ 15 ರವರೆಗೆ ಮುಂದುವರೆಸಲಾಗಿದ್ದು,

ಉಡುಪಿ: ಘಾಟ್ ನಲ್ಲಿ ವಾಹನ ಸಂಚಾರ ಎ.15 ವರೆಗೆ ನಿಷೇಧ ವಿಸ್ತರಣೆ Read More »

ಕರಾವಳಿ

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಹೊಸಪೇಟೆ ತಾಲೂಕಿನ ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು. ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..! Read More »

ಕರ್ನಾಟಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ..! ➤ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕೊಣಾಜೆ, ಏ.04. ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಣಾಜೆ ಎಂಬಲ್ಲಿ ಸಂಭವಿಸಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ

ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ..! ➤ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಏ.03. ಬೆಂಗಳೂರಿನ‌ ಮೂವರು ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.03. ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿ ಮೃತಪಟ್ಟ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಳೆದ 10 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಂದ್ರಜಿತ್​ ಮೋಹನ್ ಡಮ್ಮಣಗಿ(27) ಹಾಗೂ ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ(24) ಮೃತರು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಮೂಲದ ದಂಪತಿ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top