karnataka

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.29. ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಚಿಂತಾಮಣಿ ಮತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದು, ಇವರಿಂದ 3.180 ಕೆಜಿ ಗಾಂಜಾವನ್ನು ವಶಕ್ಕೆ ಪಡೆಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತರು ಇಲ್ಲಿನ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜು ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ ನೇತೃತ್ವದ […]

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮಾ.29. ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಮಲ್ಯ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ದೀರ್ಘ ಕಾಲದಿಂದಲೂ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದ ಅವರನ್ನು ಸಾಲಿಗ್ರಾಮದಿಂದ ಇತ್ತೀಚಿಗಷ್ಟೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ‌ ಮಾಡುತ್ತಿದ್ದರು.  

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ Read More »

ಕರಾವಳಿ

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಪಾಪಿ ಗಂಡ..!  ➤ ಪತ್ನಿ ಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಮಾ.29. ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು, ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೆನ್ನಕ್ಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡ ಚೆನ್ನಕ್ಕನಿಗೆ ಹಲ್ಲೆ ನಡೆಸಿ ಕತ್ತಿಯಿಂದ ಕಡಿದು ಗಾಯಗೊಳಿಸಿದ್ದಾರೆ. ತತ್ ಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಪಾಪಿ ಗಂಡ..!  ➤ ಪತ್ನಿ ಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಮೃತ್ಯು Read More »

ಕರಾವಳಿ

ಆಟೋದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ)newskadaba.com ಉಡುಪಿ, ಮಾ.29.  ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್‌ ಆಫ್‌ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್‌ ಕೆ. ಪ್ರಭು (44) ಏಕಾಎಕಿ ನಾಪತ್ತೆಯಾಗಿದ್ದಾರೆ. ಬೆಳಗ್ಗಿನಿಂದ ನಾಪತ್ತೆಯಾಗಿದ್ದು ಈ ಸಂಬಂಧ ದೂರು ದಾಖಲಾಗಿದೆ. ಕುತ್ಯಾರಿನಲ್ಲಿ ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಚಾಲಕನಾಗಿ ಕೂಡ ಶೈಲೇಶ್ ದುಡಿಯುತ್ತಿದ್ದು, ಮಾ. 27ರಂದು ಬೆಳಗ್ಗೆ 9.30ರ ವೇಳೆಗೆ ಬಾಡಿಗೆಗೆ ಹೋದವರು ಮಧ್ಯಾಹ್ನ ಊಟಕ್ಕೆ ಬಾರದೆ ಇದ್ದಾಗ ಪತ್ನಿ ಕರೆ ಮಾಡಿದ್ದಾರೆ.

ಆಟೋದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತೆ ಅಂತ ಹೇಳುವುದು ಕಷ್ಟ. ಏಕೆಂದರೆ ಪುಂಡ‌ರು ಎಲ್ಲಿ ಬೇಕಿದ್ದರೂ ಮೋಜು ಮಸ್ತಿ ಮಾಡುತ್ತಾರೆ. ಸರ್ಕಾರಿ ಶಾಲೆ  ಆದರೂ ಆಗಬಹುದು, ಆಟದ ಮೈದಾನ ಆದರೂ ಸರಿಯೇ. ಆದರೆ ಇದೀಗ ಜನ ಓಡಾಡುವ ಸ್ಕೈವಾಕ್​ ಕೂಡ ಪುಂಡರ ತಾಣ ಆಗಿದೆ. ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಣಣೆಯಲ್ಲಿ ರಸ್ತೆದಾಟುವುದು ಅಷ್ಟು ಸುಲಭದ ಮಾತಲ್ಲ. ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಬೇಕು ಎಂದರೆ ಮೇಲ್ಸೇತುವೆಗಳು ಅನಿವಾರ್ಯ.

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ !    ➤ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಸಿಎಂ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.  

ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ !    ➤ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು Read More »

ಕರ್ನಾಟಕ

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ➤ ಮೇ 13ಕ್ಕೆ ಫಲಿತಾಂಶ !!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯಾವಾಗ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ರಾಜ್ಯದ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಸುದ್ದಿಗೋಷ್ಠಿ ನಡೆಸಿ ಚುನಾವಣೆ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಏಕ ಹಂತದಲ್ಲಿ ಮೇ 10 2023 ರಂದು ಬುಧವಾರ ಮತದಾನ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದೊಂದಿಗೆ ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ➤ ಮೇ 13ಕ್ಕೆ ಫಲಿತಾಂಶ !! Read More »

ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. 14 ವರ್ಷದ ಬಾಲಕಿ ಕುರಿ ಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.  

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.29. ಎಂಟು ವರ್ಷದ ಮಗನನ್ನು ಪಾಪಿ ತಂದೆಯೊಬ್ಬ ಚೂರಿಯಿಂದ ಇರಿದು ಕೊಲೆ ಮಾಡಿರುವ ಹೃದಯವಿದ್ರಾಹಕ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ ಭುವನ್‌ ತೇಜ್‌ ಅಪ್ಪನ ಕೈಯಿಂದ ಕೊಲೆಯಾದ ಮಗ.ಸುಬ್ರಮಣಿ ನಂಗಲಿ ಎಂಬಾತ ಮಗನಿಗೆ ಕೊಲೆ ಮಾಡಿದ್ದಾನೆ‌. ಆರೋಪಿ ಸುಬ್ರಮಣಿ ಈ‌ ಮೊದಲು ತನ್ನ ಪತ್ನಿಯನ್ನು ಕೊಂದು ಜೈಲು ಪಾಲಾಗಿದ್ದ ಎನ್ನಲಾಗಿದ್ದು, ಭುವನ್‌ತೇಜ್‌ ಕೋಲಾರದ ನಂಗಲಿ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಜ್ಜಿ ಜೊತೆ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಮಾ.29. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ದ.ಕ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಟೆ IPS, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ Read More »

ಕರಾವಳಿ
Scroll to Top