karnataka

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು. ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.    

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್‌ ಇನ್‌ಸ್ಪೆಕ್ಟರ್‌ ಕಿರುಕುಳ, ವಸೂಲಿ ➤ ಸಿಬ್ಬಂದಿಯಿಂದ ರಾಷ್ಟ್ರಪತಿ, ಪ್ರಧಾನಿಗೆ ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಪೊಲೀಸ್ ಇನ್‌ ಸ್ಪೆಕ್ಟರ್ ಒಬ್ಬರ ವಸೂಲಿ ಕರ್ಮಕಾಂಡ, ಒತ್ತಡ, ಕಿರುಕುಳಗಳ ಬಗ್ಗೆ ರಾಷ್ಟ್ರಪತಿ ಹಾಗೂ ಪ್ರಧಾನಿಗಳಿಗೆ ದೂರು ಠಾಣೆ ಸಿಬ್ಬಂದಿಯೇ ದೂರು ನೀಡಿದ್ದಾರೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣೆಗಳು ವಸೂಲಿ ಕೇಂದ್ರಗಳಾಗಿವೆಯಾ ಎಂಬ ಅನುಮಾನವನ್ನು ಈ ಪತ್ರದ ಅಂಶಗಳು ಬಿಚ್ಚಿಟ್ಟಿದೆ. ಸುಬ್ರಮಣ್ಯ ನಗರ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ನೀಡಿರುವ ಅನೇಕ ದೂರುಗಳನ್ನು ಹೊಂದಿರುವ ಈ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಾಷ್ಟ್ರಪತಿ ಕಾರ್ಯಾಲಯ, ಪ್ರಧಾನಿ ಕಾರ್ಯಾಲಯ, ಗೃಹ ಸಚಿವರು,

ಪೊಲೀಸ್‌ ಇನ್‌ಸ್ಪೆಕ್ಟರ್‌ ಕಿರುಕುಳ, ವಸೂಲಿ ➤ ಸಿಬ್ಬಂದಿಯಿಂದ ರಾಷ್ಟ್ರಪತಿ, ಪ್ರಧಾನಿಗೆ ದೂರು Read More »

ಕರ್ನಾಟಕ

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ  ಸುಳ್ಯ ಪಿಎಫ್ ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್  ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA Read More »

ಕರಾವಳಿ

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.27. ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯ ಭಾವಚಿತ್ರವುಳ್ಳ ಕ್ಯಾಲೆಂಡರ್, ತಲವಾರು ಮತ್ತು ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ನಡೆದಿದೆ. ಕಾರುವೊಂದರ ಬ್ರೇಕ್ ಡೌನ್‌ ಆಗಿದೆ. ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಮದ್ಯದ ಪ್ಯಾಕೇಟ್ ಗಳು, ಮಾರಕಾಸ್ತ್ರ ಮತ್ತು ಸಿ.ಟಿ.ರವಿಯ ಫೋಟೋ ಇರುವ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ)newskadaba.com  ಮೈಸೂರು, ಮಾ.27. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮ್ಮ ಮೇಲೆ ಪತಿ ಚಂದ್ರು ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು (Complaint) ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್ Read More »

ಕರ್ನಾಟಕ

ಪೂರ್ವ ಮುಂಗಾರು ಆರಂಭ ➤ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು,ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

ಪೂರ್ವ ಮುಂಗಾರು ಆರಂಭ ➤ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ Read More »

ಕರ್ನಾಟಕ

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮಾ.27. ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳು ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಎಂಬುವರಿಗೆ ಸೇರಿದ್ದು ಎನ್ನಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು Read More »

ಕರ್ನಾಟಕ

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top