ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು
(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.23. ಮತದಾರರನ್ನು ಸೆಳೆಯಲು ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು, ಸೀರೆಯನ್ನು ಸ್ವೀಕರಿಸಿದೆ ಶಾಸಕರ ಬೆಂಬಲಿಗರನ್ನು ವಾಪಸ್ ಕಳಿಸಿದ ಪ್ರಸಂಗ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಬೆಂಬಲಿಗರು ಮುದ್ದೇಬಿಹಾಳದ ಮೆಹಬೂಬ್ ನಗರದಲ್ಲಿ ಸೀರೆ ಹಂಚಲು ಹೋಗಿದ್ದು, ನೀವು ನಮ್ಮ ಕೆಲಸ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿರುವ ಸ್ಥಳೀಯ ಮನೆಯೊಂದರ ಮಂದಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು Read More »
ಕರ್ನಾಟಕ
