karnataka

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 23. ಸ್ಕೂಟಿಯಲ್ಲಿ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆಯೊಬ್ಬರನ್ನು ಕಾರಿನಿಂದ ಡಿಕ್ಕಿ ಹೊಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತ ಸಾಮಾಜಿಕ ಕಾರ್ಯಕರ್ತೆಯನ್ನು ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿ ಮುಜತ್ ಸುಲ್ತಾನ್(35) ಎಂದು ಗುರುತಿಸಲಾಗಿದೆ. ಮುಜತ್ ಸುಲ್ತಾನ್ ರನ್ನು ವಸೀಂ ಶೇಖ್, ನದೀಮ್, ಅಜೀಮ್ ಶೇಖ್ ಮತ್ತು ನದೀಮ್ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 23. ಕ್ಯಾಂಡಲ್ ಫ್ಯಾಕ್ಟರಿಯೊಂದು ಅಗ್ನಿ ಆಹುತಿಗೊಳಗಾಗಿ ಸಂಪೂರ್ಣವಾಗಿ ಭಸ್ಮಗೊಂಡಘಟನೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚಚ್೯ ಪರಿಸರದಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮ ಪಂಚಾಯತ್ ನ ಅತ್ತೂರು ಚರ್ಚ್ ಬಳಿ ಕ್ಯಾಂಡಲ್ ತಯಾರಿಕಾ ಕೇಂದ್ರ ದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ     ➤ ಆರೋಪಿಗೆ 62 ವರ್ಷ ಸಜೆ ಮತ್ತು 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.23. ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗೆ 62 ವರ್ಷ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಪಾಸ್ಟ್ ಟ್ರಾಕ್ ವಿಶೇಷ (ಪೋಕ್ಸೋ) ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕುಂಬಳೆ ಬಂಬ್ರಾಣ ದ ಕೆ. ಚಂದ್ರ ಶೇಖರ (56) ಶಿಕ್ಷೆ ಗೊಳಗಾದವನು ಎನ್ನಲಾಗಿದೆ. ಕಾಸರಗೋಡು ಮತ್ತು ಕುಂಬಳೆ ಠಾಣಾ ಪೊಲೀಸರು ದಾಖಲಿಸಿದ ಎರಡು ಪ್ರತ್ಯೇಕ ಫೋಕ್ಸೋ ಪ್ರಕರಣ ಗಳಿಗೆ ಸಂಬಂಧ ಪಟ್ಟಂತೆ ಶಿಕ್ಷೆ

ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ     ➤ ಆರೋಪಿಗೆ 62 ವರ್ಷ ಸಜೆ ಮತ್ತು 1 ಲಕ್ಷ ರೂ. ದಂಡ Read More »

ಕರ್ನಾಟಕ

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ)newskadaba.com ಚನ್ನರಾಯಪಟ್ಟಣ, ಮಾ.23. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು ಎನ್ನಲಾಗಿತ್ತು. ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದು ತಕ್ಷಣ ಅವರನ್ನು ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ Read More »

ಕರ್ನಾಟಕ

ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.22. ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರು ಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ 5,69,500 ರೂ. ದಂಡ ವಿಧಿಸಿ ಆದೇಶ ನೀಡಿದೆ. ಪಂಜಿಕಲ್ಲು ನಿವಾಸಿ ಪದ್ಮನಾಭ ಮಡಿವಾಳ ಆರೋಪಿಯಾಗಿದ್ದು, ಬಂಟ್ವಾಳ ಪಿಎಲ್‌ಡಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್‌ ಕೂಡ ಅಮಾನ್ಯಗೊಂಡಿದ್ದು, ಹೀಗಾಗಿ ಬ್ಯಾಂಕ್‌ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.  

ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ Read More »

ಕರಾವಳಿ

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ➤ ಸಿಎಂ ಬೊಮ್ಮಾಯಿ ಘೋಷಣೆ..!

(ನ್ಯೂಸ್ ಕಡಬ)newskadaba.com ಬಾಗಲಕೋಟೆ, ಮಾ.22. ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ . 4 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಹೇಳಿದರು. ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ➤ ಸಿಎಂ ಬೊಮ್ಮಾಯಿ ಘೋಷಣೆ..! Read More »

ಕರ್ನಾಟಕ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.22. ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ ಅಶ್ರಫ್ ಹಾಗೂ ಫಾಮಿನಿಯಾ ದಂಪತಿಯ ಪುತ್ರ  ಮೃತಪಟ್ಟ ವಿದ್ಯಾರ್ಥಿ. ಹಲವು ದಿನಗಳಿಂದ ತೀವ್ರ ಅಸ್ವಸ್ಥನಾಗಿದ್ದ ಉಮರ್ ಅಫ್ರಾಬುದ್ದೀನ್ ಸೀಮೆಎಣ್ಣೆ ಸೇವಿಸಿದ್ದಾಗಿ ಪತ್ತೆಯಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಕಷ್ಟ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್‌ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಕ್ಕೆ ಚಂದ್ರಶೇಖರ್ ವಿರೋಧ ವ್ಯಕ್ತಪಡಿಸಿದ್ದರು.

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ Read More »

ಕರ್ನಾಟಕ

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.22. 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು ಎನ್ನಲಾಗಿದ್ದು, ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ

(ನ್ಯೂಸ್ ಕಡಬ)newskadaba.com  ಕೋಲಾರ, ಮಾ.22. ಯುವತಿಗೆ ಹೋಳಿ ಹಾಕಿದ್ದಕ್ಕೆ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಧು ಬಿ.ಸಿ ಹಲ್ಲೆಗೊಳ್ಳಗಾದ ಕಾನೂನು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮಧು ಡಿ.ಎನ್.ಡಿ ಮತ್ತು ಆತನ ಸ್ನೇಹಿತರಾದ ಶಿವರಾಜ್, ಅಭಿಲಾಷ್, ರಾಹುಲ್ ಹಾಗೂ ಪ್ರಮೋದ್ ವಿರುದ್ಧ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.    

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top