karnataka

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು   

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21.ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್ ಗೆ ಹೋಗಿದ್ದು, ಈ ವೇಳೆ ಸ್ಥಳಕ್ಕೆ ಬಂದ 10 ಮಂದಿ ಆಟೋ ಚಾಲಕರ ತಂಡ “ನೀನು ಇಲ್ಲಿ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು” […]

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು    Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21.  ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ,

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಎನ್ನಲಾಗಿದೆ.

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

ಕರ್ನಾಟಕ

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.18. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ  ನಡೆದಿದೆ. ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ತಗ್ಗಿದ ಧೂಮಪಾನ ➤ ಮೊದಲ ಬಾರಿಗೆ ಜಾಗತಿಕ ಆರೋಗ್ಯಕರ ನಗರ ಪ್ರಶಸ್ತಿ ಗರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ನೀಡುವ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿ 2023 ಕ್ಕೆ ಭಾಜನವಾಗಿದೆ. ಧೂಮಪಾನ-ಮುಕ್ತ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತಗ್ಗಿದ ಧೂಮಪಾನ ➤ ಮೊದಲ ಬಾರಿಗೆ ಜಾಗತಿಕ ಆರೋಗ್ಯಕರ ನಗರ ಪ್ರಶಸ್ತಿ ಗರಿ Read More »

ಕರ್ನಾಟಕ

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾಧ್ಯಕ್ಷರನ್ನು ಬಂಧಿಸಿ ಅವಮಾನ ➤ ಪೊಲೀಸ್ ಅಧಿಕಾರಿ ವಿರುದ್ಧ SDPI ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 18. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರನ್ನು ಬಂಧಿಸಿ ಅವಮಾನಿಸಿರುವ ಚಿಕ್ಕಮಗಳೂರು ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀನಿವಾಸ್ ವಿರುದ್ಧ ಚಿಕ್ಕಮಗಳೂರಿನ ಆಝಾದ್ ಪಾರ್ಕ್ ವೃತ್ತದಲ್ಲಿ SDPI ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಝ್ಮತ್ ಪಾಷ, ಚಿಕ್ಕಮಗಳೂರು ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀನಿವಾಸ್ ಮತ್ತು ತಂಡ ಮಂಗಳವಾರ ಮಧ್ಯರಾತ್ರಿ 12.45 ರ ಸಮಯದಲ್ಲಿ SDPI ಚಿಕ್ಕಮಗಳೂರು ಜಿಲ್ಲಾ

ಜಿಲ್ಲಾಧ್ಯಕ್ಷರನ್ನು ಬಂಧಿಸಿ ಅವಮಾನ ➤ ಪೊಲೀಸ್ ಅಧಿಕಾರಿ ವಿರುದ್ಧ SDPI ಪ್ರತಿಭಟನೆ Read More »

ಕರ್ನಾಟಕ

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ವರದರಾಜು ನೀಡಿದ ದೂರಿನಂತೆ 36 ಮಂದಿ ಕಾಂಗ್ರೆಸ್

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು Read More »

ಕರ್ನಾಟಕ

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು        

(ನ್ಯೂಸ್ ಕಡಬ)newskadaba.com  ಕಡಬ, ಮಾ.18. ಇಲ್ಲಿನ ಕೆರೆಯ ಸಮಿಪ ಕಡಬ ಗೃಹರಕ್ಷಕ ಕಛೇರಿ ನಿರ್ಮಿಸಲು 5 ಸೆಂಟ್ಸ್ ಜಾಗ ಮೀಸಲು ಇರಿಸಲಾಗಿದ್ದು, ಈ ಜಾಗವನ್ನು ಸ್ಥಳೀಯ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಿಸಿ ಎರಡು ಅಂತಸ್ಥಿನ ಮನೆ ಕಟ್ಟಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಕಡಬ ಗೃಹರಕ್ಷಕದಳದ ಘಟಕಾಧಿಕಾರಿ ಕಡಬ ತಹಸೀಲ್ದಾರ್ ಹಾಗೂ ಕಡಬ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.  ಕಡಬ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರು ನೀಡಿದ ದೂರಿನಲ್ಲಿ ತಿಳಿಸಿರುವಂತೆ, 2004ನೇ ಇಸವಿಯಲ್ಲಿ ಆಗಿನ ಪುತ್ತೂರು ಸಹಾಯಕ

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು         Read More »

ಕರಾವಳಿ
Scroll to Top