karnataka

crime, arrest, suspected

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮಾಲೀಕನ ಮನೆಯಿಂದ 1.09 ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಹಾಗೂ ಆತನ ಇಬ್ಬರು ಸಹಚರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಪ್ರಮುಖ ಆರೋಪಿ ಸನ್ಯಾಸಿ ಮಠ ನಂದೀಶ್, ಹೆಚ್.ಎಂ.ನಂದೀಶ್ ಹಾಗೂ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಹನುಮೇಗೌಡ ಪತ್ತೆಗೆ ಹುಡುಕಾಟ ಮುಂದುವರೆದಿದೆ.  

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

’ರಾಷ್ಟ್ರಪಿತ ಗಾಂಧೀಜಿಯವರ 155ನೇ ಜನ್ಮದಿನ’- ಪಾದಯಾತ್ರೆಗೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ಗಾಂಧಿ ಭವನದಿಂದ ವಿಧಾನಸೌಧದ ವರೆಗಿನ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ವಿಧಾನಸೌಧದ ‘ಗಾಂಧೀಜಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಹಾಗೂ ‘ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತಿ ಅವರ 120ನೇ ಜನ್ಮದಿನ’ದ ಅಂಗವಾಗಿ ಅವರ ‘ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ’

’ರಾಷ್ಟ್ರಪಿತ ಗಾಂಧೀಜಿಯವರ 155ನೇ ಜನ್ಮದಿನ’- ಪಾದಯಾತ್ರೆಗೆ ಚಾಲನೆ ನೀಡಿದ ಸಿಎಂ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ಎ-16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ.    

ರೇಣುಕಾಸ್ವಾಮಿ ಕೊಲೆ ಪ್ರಕರಣ: 3 ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ Read More »

ಕರ್ನಾಟಕ

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಸ್ಯಾಂಡಲ್‌ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ತೆರೆ ಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ಕಪ್ ಗೆದ್ದಿದ್ದು, ಸೃಜನ್ ನಾಯಕತ್ವದ ಅಪ್ಪು ಪ್ಯಾಂಥರ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಸ್ಯಾಂಡಲ್‌ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕೇವಲ ಮನರಂಜನೆ ಉದ್ದೇಶದಿಂದ ಶುರು ಮಾಡಿರುವುದಲ್ಲ. ಬದಲಾಗಿ ಒಂದೊಳ್ಳೆ ಕಾರ್ಯ ಇಟ್ಟುಕೊಂಡು ಈ ಕಪ್ ಪ್ರಾರಂಭಿಸಲಾಗಿದೆ. ಕಷ್ಟದಲ್ಲಿರುವ ಕನ್ನಡ

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ದಿನಾಂಕ ನಿಗದಿ ಮಾಡಿದೆ. ಶೀಘ್ರ ದಿನಾಂಕ ಘೋಷಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರಿಂದ, ಡಿ.29ಕ್ಕೆ ಕೆಎಎಸ್‌ ಪ್ರಿಲಿಮ್ಸ್‌ ಮರು ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ. ಈ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿದೆ. ಆದರೆ ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ Read More »

ಉದ್ಯೋಗ, ಕರ್ನಾಟಕ

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸಾಗರ, ಅ. 01. ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ನ ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರವುದು ವರದಿಯಾಗಿದೆ. ಮೃತರನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎಂದು ಗುರುತಿಸಲಾಗಿದೆ. ರೈಲು ಬಡಿದು ಮೃತಪಟ್ಟಿದ್ದರೆ ದೇಹ ಜರ್ಜರಿತವಾಗಿರುತ್ತಿತ್ತು. ಆದರೆ ಮೇಲ್ನೋಟಕ್ಕೆ ಬಸವರಾಜ್ ತಲೆಗೆ ಮಾತ್ರ ಗಾಯಗೊಂಡಂತೆ ಕಾಣಿಸುತ್ತಿದ್ದು, ರೈಲು ಢಿಕ್ಕಿಯಾದ ಕುರುಹು ಗೋಚರಿಸುತ್ತಿಲ್ಲ. ಬೇರೆಲ್ಲೊ ಕೊಲೆ ಮಾಡಿ ಮೃತದೇಹ ಇಲ್ಲಿ ತಂದು ಹಾಕಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು,

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.30. ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬಂದ ಗೂಡ್ಸ್ ಟೆಂಪೋಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ

ಕೆಎಸ್ಸಾರ್ಟಿಸಿ ಬಸ್ಸ್ ಪಲ್ಟಿ: 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಹೆಚ್ಚಾಗುತ್ತಿರುವ ನಗರೀಕರಣದಿಂದಾಗಿ ವನ್ಯಜೀವಿ ಆವಾಸಸ್ಥಾನ ನಾಶವಾಗುತ್ತಿದ್ದು, ಇದರಿಂದ ಆನೆಗಳ ಸಂತತಿ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸ್ (NCBS) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸಂಶೋಧಕರು ಹಂಚಿಕೊಂಡ ಅಧ್ಯಯನ ವರದಿಯ ಅನ್ವಯ, ವನ್ಯಜೀವಿ ಆವಾಸಸ್ಥಾನ ಕಡಿತ ಮತ್ತು ಹೆಚ್ಚಿದ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಏಷ್ಯಾಟಿಕ್ ಆನೆಗಳ ನೈಸರ್ಗಿಕ ಜೀನ್ ಪೂಲ್ ಮೇಲೆ (ಅನುವಂಶಿಕತೆ) ಪರಿಣಾಮ ಬೀರಿದೆ ಎಂದು ಗಮನಿಸಿದೆ.

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ Read More »

ಕರ್ನಾಟಕ

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಭವಿಷ್ಯದ ಕ್ರಿಕೆಟಿಗರಿಗಾಗಿ ಮತ್ತು ಹಾಲಿ ಕ್ರಿಕೆಟಿಗರಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ಭಾನುವಾರ ದಿಢೀರ್ ಉದ್ಘಾಟನೆ ಮಾಡಿದೆ. ಕ್ರಿಕೆಟ್ ಆಟಗಾರರಿಗೆ ತರಬೇತಿ ನೀಡಲಾಗುತ್ತಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸ್ವಂತ ಕಟ್ಟಡ ಬೇಕು ಎಂಬ ಬಿಸಿಸಿಐನ ಪರಿಕಲ್ಪನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗಹಳ್ಳಿಯಲ್ಲಿ ನಿರ್ಮಾಣಗೊಂಡಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಉದ್ಘಾಟನೆ ಮಾಡಲಾಗಿದೆ.  

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್
Scroll to Top