karnataka

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಎಂದರೆ ಮಾರ್ಚ್‌ 9ರಿಂದ ಆರಂಭವಾಗಲಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ ಎಂದು ವರದಿ ತಿಳಿಸಿದೆ.  ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ […]

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ Read More »

ಕರ್ನಾಟಕ

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.  

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾ.8ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿ       ➤  ಆರೋಗ್ಯ ಇಲಾಖೆ NHM ನೌಕರರ ಖಾಯಂಗೆ ಸಿಎಂ ಬೊಮ್ಮಾಯಿ ನಿರ್ಧಾರ ?

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.07. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 8 ರಂದು ರಾಜ್ಯ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಅಂದು ಕಳೆದ ಕೆಲ ದಿನಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವಂತ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರನ್ನು ಖಾಯಂ ಗೊಳಿಸೋ ನಿರ್ಧಾರದ ಬಗ್ಗೆ ಪ್ರಸ್ತಾಪಸಿಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕಳೆದ 21 ದಿನಗಳಿಂದ ರಾಜ್ಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವಂತ ಒಳಗುತ್ತಿಗೆ ನೌಕರರು ನಗರದ

ಮಾ.8ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿ       ➤  ಆರೋಗ್ಯ ಇಲಾಖೆ NHM ನೌಕರರ ಖಾಯಂಗೆ ಸಿಎಂ ಬೊಮ್ಮಾಯಿ ನಿರ್ಧಾರ ? Read More »

ಕರ್ನಾಟಕ

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.07. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿ ನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು, ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.07. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯವ ಎನ್ಐಟಿಕೆ ಟೊಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳಿತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ !

(ನ್ಯೂಸ್ ಕಡಬ)newskadaba.com ತುಮಕೂರು, ಮಾ.07. ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು.

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಪತ್ತೆ…!      ➤  ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಮಾ.07. 3 ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಜಗದೀಶ್ ಆಚಾರ್ ಅವರ ಪತ್ನಿ ನೇತ್ರಾ ಅವರ ಶವ ಸೋಮವಾರ ಕಾಫಿ ತೋಟವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಜಗದೀಶ್ ಆಚಾರ್ ಚಿಕಿತ್ಸೆ ಫಲಕಾರಿಯಾಗದೇ ಮಾ.3ರಂದು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಗೋಣಿಬೀಡು ಠಾಣೆಗೆ ದೂರು ನೀಡಿದ್ದ ಜಗದೀಶ್ ಆಚಾರ್ ತಾಯಿ ಯಶೋಧಮ್ಮ, ನನ್ನ ಮಗನ ಸಾವಿಗೆ ಆತನ ಹೆಂಡತಿ ನೇತ್ರಾ ಮತ್ತು ಆಕೆಯ ಪ್ರಿಯಕರ ಧನಂಜಯ ಅವರ ನಡುವಿನ

ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಪತ್ತೆ…!      ➤  ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.07. ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.  

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 15, ಕೊನೆಯ ದಿನವಾಗಿರುತ್ತದೆ.  

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ Read More »

ಕರ್ನಾಟಕ

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 32 ವರ್ಷದ ಫಿಸಿಯೋಥೆರಪಿಸ್ಟ್ ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣ ಸಂಬಂಧ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೇಸ್ತ್ರಿ ವೀರ ಆಂಜನೇಯುಲು ಅಲಿಯಾಸ್ ಪುಲಿ (38), ಅನಂತಪುರದ ಗೋವರ್ಧನ್ ಅಲಿಯಾಸ್ ಡಿಜೆ (23) ಮತ್ತು ಬುಡ್ಡಪ್ಪ ಅಲಿಯಾಸ್ ಭಾಸ್ಕರ್ (46) ಆರೋಪಿಗಳು. ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಪೆನುಕೊಂಡದ ಶ್ರೀಧರ್ ಎಂಬಾತನನ್ನು ಕೊಲೆ ಮಾಡಿದ ಆರೋಪ ಇವರ ಮೇಲಿದೆ.  

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top