karnataka

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು    ➤  ಬಂಟ್ವಾಳದ ಐವರು NIA ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.06.  ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ತಂಡಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ […]

ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು    ➤  ಬಂಟ್ವಾಳದ ಐವರು NIA ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹರಿದು ಬಂದ ವಿದ್ಯಾರ್ಥಿ ಸಾಗರ 

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಮಾ.06. ಕನ್ನಡ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸಲು ಬಹುತೇಕ ಪೋಷಕರು ಹಿಂದೇಟು ಹಾಕುತ್ತಾರೆ. ಆದರೆ, ಅದಕ್ಕೆ ಅಪವಾದವೆಂಬಂತೆ ಇಲ್ಲಿನ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ 6ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆದ ಪ್ರವೇಶ ಪರೀಕ್ಷೆಗೆ ರಾಜ್ಯದಾದ್ಯಾಂತ ವಿದ್ಯಾರ್ಥಿ ಸಾಗರವೇ ಹರಿದುಬಂದಿದೆ. ಶಾಲೆಯಲ್ಲಿರುವ ಒಟ್ಟು 250 ಸೀಟುಗಳಿಗೆ ರಾಜ್ಯದಾದ್ಯಂತ 14,158 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 13,617 ಮಂದಿ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದಾರೆ.  

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹರಿದು ಬಂದ ವಿದ್ಯಾರ್ಥಿ ಸಾಗರ  Read More »

ಕರಾವಳಿ

SDPI ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ   ➤  530 ಯೂನಿಟ್ ರಕ್ತ ಸಂಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.06. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ ನಡೆದಿದ್ದು, 530 ಯೂನಿಟ್ ರಕ್ತ ಸಂಗ್ರಹವಾಗಿದೆ. ರಕ್ತ ಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ SDPI ವಿವಿಧ ಮೆಡಿಕಲ್ ಕಾಲೇಜು ಹಾಗೂ ಬ್ಲಡ್ ಬ್ಯಾಂಕ್‌ಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆಸುತ್ತಿರುವ ರಕ್ತದಾನ ಮಾಸಾಚರಣೆಯ ಎರಡನೇ ಬಾನುವಾರವಾದ ಮಾ.5ರಂದು ಜಿಲ್ಲೆಯ ಸುರತ್ಕಲ್, ಕಾನ, ಪಾಣೆಮಂಗಳೂರು, ಬೊಳಿಯಾರ್ ಸೇರಿದಂತೆ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ

SDPI ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ   ➤  530 ಯೂನಿಟ್ ರಕ್ತ ಸಂಗ್ರಹ Read More »

ಕರಾವಳಿ

ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !   

(ನ್ಯೂಸ್ ಕಡಬ)newskadaba.com ಉಡುಪಿ, ಮಾ.06. 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. 65 ವರ್ಷದ ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು ಈವರೆಗೆ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !    Read More »

ಕರಾವಳಿ

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ ! ➤ ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.06. ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ರವಿವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಸೇರಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ ! ➤ ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.04. ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರ: ಸೇತುವೆಯ ಮೇಲೆ ಮೊಸಳೆ ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com  ವಿಜಯಪುರ, ಮಾ.4.  ಕೃಷ್ಣಾನದಿಯ ಸೇತುವೆ ಮೇಲೆ ಇಂದು ಬೆಳಗ್ಗೆ ಬಾಯಿಯನ್ನು ಹಗ್ಗದಿಂದ ಕಟ್ಟಲ್ಪಟ್ಟ ಸ್ಥಿತಿಯಲ್ಲಿ ಮೊಸಳೆ (Crocodile) ಯೊಂದು ಪತ್ತೆಯಾಗಿದೆ. ಜನವಸತಿಗೆ ನುಗ್ಗಿರುವ ಮೊಸಳೆಯನ್ನು ಹಗ್ಗ ಕಟ್ಟಿ ಹಿಡಿಯುವ ವೇಳೆ ತಪ್ಪಿಸಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ರಸ್ತೆ ಮಧ್ಯೆ ಏಕಾಏಕಿ ಮೊಸಳೆಯನ್ನು ಕಂಡು ವಾಹನ ಸವಾರರು ಗಾಬರಿಗೊಂಡಿದ್ದಾರೆ.  

ವಿಜಯಪುರ: ಸೇತುವೆಯ ಮೇಲೆ ಮೊಸಳೆ ಪ್ರತ್ಯಕ್ಷ Read More »

ಕರ್ನಾಟಕ

ಉಡುಪಿ: ಸುಸ್ಥಿತಿಯಲ್ಲಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಕಾಮಗಾರಿ.!

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.04. ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು.  

ಉಡುಪಿ: ಸುಸ್ಥಿತಿಯಲ್ಲಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಕಾಮಗಾರಿ.! Read More »

ಕರಾವಳಿ

ಸುಳ್ಯ: ಮನೆಗೆ ನುಗ್ಗಿ ಮಹಿಳೆಯ ಹತ್ಯೆಗೆ ಯತ್ನ ➤ ಕೆಲಸಕ್ಕೆ ಬಂದ ಕಾರ್ಮಿಕರಿಂದ ಕೃತ್ಯ

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.04. ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಮನೆಯಲ್ಲಿದ್ದವರನ್ನು ಹತ್ಯೆಗೈಯಲು ಯತ್ನಿಸಿದ ಘಟನೆ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ವರದಿಯಾಗಿದೆ. ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ.    

ಸುಳ್ಯ: ಮನೆಗೆ ನುಗ್ಗಿ ಮಹಿಳೆಯ ಹತ್ಯೆಗೆ ಯತ್ನ ➤ ಕೆಲಸಕ್ಕೆ ಬಂದ ಕಾರ್ಮಿಕರಿಂದ ಕೃತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಅನಾರೋಗ್ಯ ಹಿನ್ನೆಲೆ..! ➤ ಮನೆನೊಂದು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.04. ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಶಿರೂರು ಕರಾವಳಿ ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದರು. ನರ ಹಾಗೂ ಚರ್ಮದ ಸಮಸ್ಯೆಯಿಂದ ಮನನೊಂದು 4-5 ತಿಂಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೀಗ ಮತ್ತೆ ಇದೇ ವಿಚಾರದಿಂದ ಮನನೊಂದು

ಕಾರ್ಕಳ: ಅನಾರೋಗ್ಯ ಹಿನ್ನೆಲೆ..! ➤ ಮನೆನೊಂದು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top