karnataka

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ ➤ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ.

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ ➤ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ

ಮಂಡ್ಯದಲ್ಲಿ 15 ವರ್ಷದ ಬಾಲಕನ ಮೇಲೆ ಚಿರತೆ ದಾಳಿ

(ನ್ಯೂಸ್ ಕಡಬ)newskadaba.com ಮಂಡ್ಯ, ಮಾ.03. ಮಂಡ್ಯ ಜಿಲ್ಲೆಯ ಚಿಕ್ಕ ಬೋರೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಚಿರತೆಯೊಂದು 15 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಬುಧವಾರ ಸಂಜೆ ಗೌತಮ್ (15) ಎಂಬ ಬಾಲಕ ತಮ್ಮ ಜಮೀನಿನ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಕಂಡು ಹೌಹಾರಿದ್ದಾನೆ.

ಮಂಡ್ಯದಲ್ಲಿ 15 ವರ್ಷದ ಬಾಲಕನ ಮೇಲೆ ಚಿರತೆ ದಾಳಿ Read More »

ಕರ್ನಾಟಕ

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಮನೆಯ ಆವರಣದಲ್ಲಿದ್ದ ವಿದ್ಯುತ್‌ ಕಂಬ ತೆರವುಗೊಳಿಸಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್‌ ಲೋಕಾ ಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆನ್ನಿಗಾನಹಳ್ಳಿ ಕಸ್ತೂರಿನಗರ ಬೆಸ್ಕಾಂ ಸಬ್‌ ಡಿವಿಷನ್‌ ಕಚೇರಿಯ ಸಹಾಯಕ ಎಂಜಿನಿಯರ್‌ ವಿದ್ಯಾ ಬಂಧಿತ ಆರೋಪಿ ಎನ್ನಲಾಗಿದೆ.  

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ Read More »

ಕರ್ನಾಟಕ

ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com  ಚಾಮರಾಜನಗರ, ಮಾ.03. ಸಿಹಿ ಎಂದು ಭಾವಿಸಿ ಇರುವೆಗೆ ಸಿಂಪಡಿಸುವ ಪೌಡರ್ ಸೇವಿಸಿ ಐದು ವರ್ಷದ ಬಾಲಕ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ‌ ಪುಟ್ಟಿರಮ್ಮನದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಎಂಬ ಬಾಲಕ ಎಂದು ತಿಳಿದುಬಂದಿದ್ದು, ಮನೆಯಲ್ಲಿ ಇರುವೆಗಳನ್ನು ನಾಶ ಪಡಿಸಲು ತಂದಿಟ್ಟಿದ್ದ ಇರುವೆ ನಾಶಕವನ್ನು ಸಿಹಿ ತಿಂಡಿ ಎಂದು ತಿಂದಿದ್ದರಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.  

ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಉಡುಪಿ, ಮಾ,03. ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಪೋಲಿಸರು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಸೇರಿಸಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಾತ್ರಿ 17:00 ಗಂಟೆಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10:00 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಕೃಷ್ಣ ಕೃಪಾ ಹೆಸರಿನ ಮನೆಗೆ ಯಾರೋ ಕಳ್ಳರು ಒಳ ಪ್ರವೇಶಿಸಿ ಮನೆಯ ಬೆಡ್ ರೂಂ ನಲ್ಲಿದ್ದ ಕಪಾಟಿನ ಒಳಗೆ ಇರಿಸಿದ

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬರೋಬ್ಬರಿ 6 ಕೋಟಿ ರೂ. ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್ ಅವರನ್ನು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ Read More »

ಕರ್ನಾಟಕ

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ನಿಕುಂಜ್ ಬಾಬಿಲ್ ಎಂಬಾತನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.  

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ..!

(ನ್ಯೂಸ್ ಕಡಬ)newskadaba.com ಉಡುಪಿ, ಮಾ.02. ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯಾ ( 16) ನೀರಿಗೆ ಬಿದ್ದ ಬಾಲಕಿ. ಈಕೆ ಸಮುದ್ರ ತೀರದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬೃಹದಾಕಾರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಳು.

ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ..! Read More »

ಕರಾವಳಿ
Scroll to Top