karnataka

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ಮುಂಬೈಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರವೀಂದ್ರ ಎಂ.ಶೆಟ್ಟಿ (74) ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ Read More »

ಕರಾವಳಿ

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು.

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ. ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಈ ಹಿಂದೆ ಪತ್ರ ಬರೆದು ಕಲಬುರಗಿ-ಬೀದರ್ ನಡುವೆ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ        Read More »

ಕರ್ನಾಟಕ

ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.28. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವು ಮಂಡ್ಯ ಜಿಲ್ಲೆಯಲ್ಲಿ ಆಗಬೇಕು ಎಂಬ ನಿರ್ಧಾರವನ್ನು ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ತೀರ್ಮಾನಿಸಲಾಗಿದೆ.  

ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರ್ನಾಟಕ

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ.  

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಖರ್ಚು     ➤ ಹಿಂದಿನ ಸಮ್ಮೇಳನಕ್ಕಿಂತ ದುಪ್ಪಟ್ಟಾದ ವೆಚ್ಚ

(ನ್ಯೂಸ್ ಕಡಬ)newskadaba.com ಹಾವೇರಿ, ಫೆ.28. ಹಾವೇರಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂಬ ಹಲವು ವರ್ಷಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದರು. ಸಿಎಂ ತವರು ಜಿಲ್ಲೆಯಲ್ಲಿ ಅಕ್ಷರ ಜಾತ್ರೆಗೆ 20 ಕೋಟಿರೂ. ಅನುದಾನ ಕೊಟ್ಟಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್‌ ಸಮ್ಮೇಳನ ನಡೆಸೋಕೆ 25 ಕೋಟಿ ಖರ್ಚಾಗಿದೆ ಎಂದು ಹೇಳಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ನೀಡಿದ್ದ ಅನುದಾನಕ್ಕಿಂತ 5 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಇದು ಸಾಹಿತ್ಯ

ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಖರ್ಚು     ➤ ಹಿಂದಿನ ಸಮ್ಮೇಳನಕ್ಕಿಂತ ದುಪ್ಪಟ್ಟಾದ ವೆಚ್ಚ Read More »

ಕರ್ನಾಟಕ

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಂದು ಉಪರಾಷ್ಟ್ರಪತಿ ಆಗಮನದಿಂದ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇಂದು ಸಂಜೆ 4 ರಿಂದ 6 ರವರೆಗೆ ಸಂಚಾರ ನಿಯಮ ಬದಲಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ನಗರ ಸಂಚಾರಿ ಪೊಲೀಸರು  ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ Read More »

ಕರ್ನಾಟಕ

7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ ➤ ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು ?

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಫೆ. 28. 7 ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 7 ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಕುರಿತು ಹುಬ್ಭಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್

7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ ➤ ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು ? Read More »

ಕರ್ನಾಟಕ

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ದೇಶದಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ನೈಜೀರಿಯಾ ಪ್ರಜೆಯನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿ ನೈಜೀರಿಯಾದ ನೋಕೊಚಾ ಕಾಸ್ಮೀರ್‌ ಇಕೆಂಬಾ ಎಂಬಾತನಿಂದ ಸಿಮ್‌ ಕಾರ್ಡ್‌ಗಳು, ಆರು ಮೊಬೈಲ್‌ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಎರಡು ಡೆಬಿಟ್‌ ಕಾರ್ಡ್‌ ಹಾಗೂ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.  

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ           

(ನ್ಯೂಸ್ ಕಡಬ)newskadaba.com ಬೀದರ್, ಫೆ.28. ಬ್ರಿಮ್ಸ್ ಹಾಸ್ಟೆಲ್ ಮೇಲಿಂದ ಹಾರಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶ್ರೀರಾಮ್(22) ಎಂದು ಗುರುತಿಸಲಾಗಿದೆ. ಎಂಬಿಬಿಎಸ್‌ ಪ್ರಾಕ್ಟಿಕಲ್ ಎಕ್ಸಾಂ ಭಯದಲ್ಲಿ ಶ್ರೀರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಹೇಳಲಾಗುತ್ತಿದೆ. ಆದರೆ, ಮತ್ತೊಂದೆಡೆ ತಂದೆ ಸಾವಿನಿಂದ ಶ್ರೀರಾಮ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು ಎಂದು ಹೇಳಲಾಗುತ್ತಿದೆ. ಶ್ರೀರಾಮ್ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.  

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top