karnataka

ಹುಚ್ಚು ನಾಯಿ ದಾಳಿ    ➤ ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಳ್ಳಾರಿ,ಫೆ.07. ಹುಚ್ಚು ನಾಯಿ ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವಟ್ಟಪ್ಪಗೇರಿ ಎಂಬಲ್ಲಿ ನಡೆದಿದೆ.   ಮನೆಯ ಹೊರಗೆ ಮಲಗಿದ್ದ ಮಹಿಳೆಯರು, ಮಕ್ಕಳು ಹಾಗೂ ಯುವಕರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು ತೀವ್ರ ಗಾಯಗೊಂಡಿರುವ 8 ಜನರನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.      

ಹುಚ್ಚು ನಾಯಿ ದಾಳಿ    ➤ ಹಲವರಿಗೆ ಗಾಯ Read More »

ಕರ್ನಾಟಕ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಧಾರವಾಡ, ಫೆ.07. ನಗ್ನ  ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿರೋ ಘಟನೆ ಕೃಷಿ  ವಿವಿ ಹಾಸ್ಟೇಲ್ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ರೋಹಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿಯನ್ನು ವಿಜಯನಗರ ನಿವಾಸಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ರೋಹಿತ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ. 07. ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ

ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು Read More »

ಕರ್ನಾಟಕ

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ವಿಶ್ವವಿದ್ಯಾಲಯ ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಿಗದಿ ಮಾಡಿದ್ದ ಪಿ.ಎಚ್‌.ಡಿ ಕಡ್ಡಾಯ ನಿಯಮವನ್ನು ತೆಗೆದುಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ ಮುಂದಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ಆಯಾ ರಾಜ್ಯದ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿದ್ದರೆ ಸಾಕಿತ್ತು. ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌.ಡಿ ಕಡ್ಡಾಯಗೊಳಿಸಿತ್ತು ಆದರೆ ಇನ್ಮೇಲೆ ಕಡ್ಡಾಯ ನಿಯಮವನ್ನು ತೆಗೆದುಹಾಕಲು

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..! Read More »

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ➤  ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ    

(ನ್ಯೂಸ್ ಕಡಬ)newskadaba. ಚಾಮರಾಜನಗರ,ಫೆ.06. ಜಿಲ್ಲೆಯ  ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ಶುರುವಾಗಿದೆ. ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುವ ಭಕ್ತರು ರಾತ್ರಿ ವಿಶ್ರಾಂತಿಗಾಗಿ ಮಲಗಿದ್ದಾಗ ಹಂದಿ ದಾಳಿ ನಡೆಸಿದೆ. ಆಹಾರಕ್ಕಾಗಿ ಮನುಷ್ಯರ ಮೇಲೆ ಹಂದಿಗಳು ದಾಳಿ ನಡೆಸಿದ್ದು ತಮಿಳುನಾಡು ಮೂಲದ ಭಕ್ತನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಭಕ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಹಂದಿ ದಾಳಿಗೆ ತಮಿಳಿನಾಡು ಮೂಲದ ಭಕ್ತರೊಬ್ಬರು ಗಾಯಗೊಂಡಿದ್ದು, ಕಳೆದ ವರ್ಷ ಕೂಡ ಇದೇ ರೀತಿ ಹಂದಿಗಳು ನಾಲ್ಕು

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ➤  ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ     Read More »

ಕರ್ನಾಟಕ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೇಡೀಸ್ ಬೀಚ್’ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು

(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಫೆ.03. ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್’ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ವರದಿಯಾಗಿದೆ. ಪ್ರಾಜೆಕ್ಟ್ ಸೀಬರ್ಡ್ ಬೇಸ್ ಎಂದೂ ಕರೆಯಲ್ಪಡುವ ಯೋಜನೆಯನ್ನು ಬೀಚ್ ಬಳಿ ಕೈಗೊಳ್ಳಲಾಗಿದ್ದು, ಗಡಿಯಾರ ಗೋಪುರಗಳನ್ನು ತಲುಪಲು ಕಡಲತೀರದ ಪಕ್ಕದ ಬೆಟ್ಟದ ಉದ್ದಕ್ಕೂ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯವನ್ನು ಭಾರತೀಯ ನೌಕಾಪಡೆ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬೀಚ್’ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ನಿರ್ಧಾರ ಕೈಗೊಳ್ಳಲಾಗಿದೆ

ಲೇಡೀಸ್ ಬೀಚ್’ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು Read More »

ಕರ್ನಾಟಕ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..!

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.02. ಕುಖ್ಯಾತ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲಿಗೆ ಪೊಲೀಸರು ಆರೋಪಿಗಳನ್ನು ಒಂದು ಪ್ರಕರಣದಲ್ಲಿ ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ತಮ್ಮ ಹಳೆಯ ಪ್ರಕರಣಗಳನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ಬರೋಬ್ಬರಿ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲಿಗೆ ಒಂಟಿ ಮನೆಗಳನ್ನು ಸರ್ವೇ ಮಾಡುತ್ತಿದ್ದ ಈ ಗ್ಯಾಂಗ್ ಸಂಚು ಹಾಕಿ ಕಳ್ಳತನ ಮಾಡಿತ್ತು. ಮಹಾರಾಷ್ಟ್ರದ ಥಾಣಾ ಮೂಲದ ಗ್ಯಾಂಗ್ ಇದಾಗಿದ್ದು, ಕಳ್ಳತನ ಮಾಡಲು ತಂಡದ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..!

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02. ಪಡಿತರ ಅಂಗಡಿ ಮೂಲಕ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಕಾಳು ಮಿಶ್ರಣವಾಗಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ವಾಸ್ತವವಾಗಿ ಅದು ಪ್ಲಾಸ್ಟಿಕ್‌ ಅಕ್ಕಿ ಅಲ್ಲ, ಸಾರವರ್ಧಿತ ಅಕ್ಕಿ ! ದ.ಕ.ಜಿಲ್ಲೆಯಲ್ಲಿ ಜನವರಿಯ ಅಕ್ಕಿ ವಿತರಣೆ ಆಗುತ್ತಿದ್ದಂತೆ ಅದರಲ್ಲಿ ಕಂಡು ಬಂದಿರುವ ದೊಡ್ಡ ಗಾತ್ರದ ಬಿಳಿ ಬಣ್ಣದ ಅಕ್ಕಿಯನ್ನು ಕಂಡು ಪಡಿತರ ಅಕ್ಕಿಗೆ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಆಹಾರ ಇಲಾಖೆ, ಗ್ರಾ.ಪಂ.ಗಳಿಗೆ ದೂರು ಹೇಳುತ್ತಿರುವ ಪ್ರಸಂಗ ಕಂಡು ಬರುತ್ತಿದೆ. ಕೇಂದ್ರ

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..! Read More »

ಕರಾವಳಿ
Scroll to Top