karnataka

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ […]

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಶೌಚಾಲಯಗಳಲ್ಲಿ ಮೂಲಸೌಕರ್ಯ ಇಲ್ಲದಿರುವುದು, ಅಸಮರ್ಪಕ ನೀರಿನ ಪೂರೈಕೆಯಿಂದಾಗಿ ವಿದ್ಯಾರ್ಥಿನಿಯರು ಪ್ರತೀ ತಿಂಗಲೂ 3-4 ದಿನಗಳ ಕಾಲ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿನಿಯರು ಋತು ಚಕ್ರ ಸಮಯದಲ್ಲಿ ಗೈರು ಹಾಜರಾಗುತ್ತಿದ್ದರು ಎಂಬುದನ್ನು ಅಧ್ಯಯನವೊಂದು ತಿಳಿಸಿತ್ತು. ಈ ಸಮಸ್ಯೆಯನ್ನ ಮನಗಂಡ ಎನ್ವಿರಾನ್ಮೆಂಟ್ ಅಸೋಸಿಯೇಷನ್ ​​ಆಫ್ ಬೆಂಗಳೂರು (ಇಎಬಿ), ಸರ್ಕಾರೇತರ ಸಂಸ್ಥೆಯು ಸೌಲಭ್ಯಗಳನ್ನು ಸ್ಥಾಪಿಸುವುದರ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು Read More »

ಕರ್ನಾಟಕ

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                              

(ನ್ಯೂಸ್ ಕಡಬ)newskadaba.com ಕೋಲಾರ, ಜ.28. ಏನಾದರೂ ಸಾಧಿಸಲೇಬೇಕು ಎಂಬ ಹಠವಿದ್ದರೆ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತೆ. ಆದ್ರೆ ಕಠಿಣ ಸವಾಲುಗಳಷ್ಟೇ ಅಲ್ಲ ಮನೆಯ ಆರ್ಥಿಕ ಪರಿಸ್ಥಿತಿ ಕಷ್ಟದಲ್ಲಿದ್ದರೂ ಸಹ ಆ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಈ ಯುವ ಕೃಷಿ ವಿಜ್ಞಾನಿ. ಕೋಲಾರ ತಾಲೂಕಿನ ಸುಗಟೂರು ಹೋಬಳಿಯ ಬೈಪನಹಳ್ಳಿ ಗ್ರಾಮದ ಪ್ರತಾಪ್ ವಿ. ಅವರು ನವದೆಹಲಿಯ ಭಾರತೀಯ ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯು ನಡೆಸಿದ ಕೃಷಿ ಸಂಶೋಧನಾ ಸೇವೆ (ಎಆರ್ ಎಸ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ

ದೆಹಲಿಯಲ್ಲಿ ಕೃಷಿ ವಿಜ್ಞಾನಿಯಾದ ಕನ್ನಡದ ಹಳ್ಳಿ ಹುಡುಗ                               Read More »

ಕರ್ನಾಟಕ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ)newskadaba.com ಲಕ್ಷ್ಮೇಶ್ವರ, ಜ.28. ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು Read More »

ಕರಾವಳಿ

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಜ. 30ರಿಂದ ಬೆಂಗಳೂರಿನ ಪ್ರದೇಶವೊಂದರಲ್ಲಿ ಮಾಂಸ ಮಾರಾಟವನ್ನು ನಿಷೇಧಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ ಕಾನೂನುಕ್ರಮ ಜರುಗಿಸಲಾಗುವುದು ಎಂಬುದಾಗಿಯೂ ಅದು ಎಚ್ಚರಿಕೆ ನೀಡಿದೆ. ಯಲಹಂಕ ವೈಮಾನಿಕ ನೆಲೆಯಲ್ಲಿ ಫೆ.13ರಿಂದ 17ರ ವರೆಗೆ ನಡೆಯಲಿರುವ ಏರೋ ಇಂಡಿಯಾ-2023 ಶೋ ಹಿನ್ನೆಲೆಯಲ್ಲಿ ಬಿಬಿಎಂಪಿ ಆದೇಶವನ್ನು ಹೊರಡಿಸಿದೆ. ಜ. 30ರಿಂದ ಫೆ. 20ರ ವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ಬಿಬಿಎಂಪಿ ಹೇಳಿದೆ. ಯಲಹಂಕ ವಲಯದ ವ್ಯಾಪ್ತಿಯಲ್ಲಿ ಅಂದರೆ

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್ Read More »

ಕರ್ನಾಟಕ

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜ.28. ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿ. ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ Read More »

ಕರ್ನಾಟಕ

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ.

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..! Read More »

ಕರ್ನಾಟಕ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ !

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.28. ಗಡಿಜಿಲ್ಲೆಯಲ್ಲಿ ರಕ್ಷಣೆ ನೀಡಬೇಕಾದ ಖಾಕಿ ವರ್ಗವು ಕೆಲ ಆರಕ್ಷಕರಿಂದ ಕೆಲ ಮಹಿಳೆಯರು ಲೈಂಗಿಕ ತೃಷೆಗೊಳಪಟ್ಟ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು ಇಲಾಖೆ ಮುಜುಗರಕ್ಕೊಳಪಡಬೇಕಾದ ಸ್ಥಿತಿ ಎದುರಾಗಿದೆ. ಜಿಲ್ಲೆಯ ಠಾಣೆಯೊಂದರ ಪೇದೆಯಿಂದ ನೊಂದು ಮಹಿಳೆ ಆತ್ಮಹತ್ಯ ಮಾಡಿಕೊಂಡು ಎಮ್.ಎಲ್.ಸಿ ಆಗಿ ಪ್ರಕರಣ ಏನೂ ನಡೆದೆ ಇಲ್ಲ ಎಂಬಂತೆ ಸುಮ್ಮನಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top