karnataka

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯಲ್ಲಿ ಇತ್ತೀಚೆಗೆ ಬಾಲಕ ಹಾಗೂ ವೃದ್ಧೆಯನ್ನು ಬಲಿ ಪಡೆದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬಲಿ ಪಡೆದ ಪ್ರದೇಶಗಳಲ್ಲಿ ಸುಮಾರು 19 ಬೋನ್ ಗಳನ್ನು ಇರಿಸಲಾಗಿತ್ತು. ಜತೆಗೆ ಇಪತ್ತಕ್ಕೂ ಹೆಚ್ಚು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಅಡಗು ತಾಣ ಪತ್ತೆ ಹಚ್ವಿದ್ದ ಇಲಾಖೆ, ಆ ಸ್ಥಳದಲ್ಲಿ ತುಮಕೂರಿನಿಂದ ತರಿಸಿದ್ದ ದೊಡ್ಡ ಬೋನ್ ಅಳವಡಿಸಲಾಗಿತ್ತು. ಚಿರತೆ ಸೆರೆ ಸಿಕ್ಕಿದೆ […]

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ Read More »

ಕರ್ನಾಟಕ

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.26. 74ನೇ ಗಣರಾಜ್ಯೋತ್ಸವದ ಮುನ್ನ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಪ್ಪ, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳಲ್ಲಿ ಒಟ್ಟಾರೆ 19 ಪ್ರಶಸ್ತಿ ಪುರಸ್ಕೃತರು ಮಹಿಳೆಯರಾಗಿದ್ದಾರೆ. ಈ ಪಟ್ಟಿಯಲ್ಲಿ ವಿದೇಶಿಯರು / ಎನ್‌ಆರ್‌ಐ / ಪಿಐಒ

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ Read More »

ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ರಸ್ತೆ ಅಪಘಾತ ! ➤ ಪಿಡಿಒಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹನೂರು, ಜ.26. ಗಣರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ವಾಪಾಸ್ಸಾಗುವಾಗ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಗಂಭೀರವಾಗಿ ಗಾಯಗೊಂಡ ಘಟನೆ ರಾಮಾಪುರ – ದಿನ್ನಳ್ಳಿ ಮಾರ್ಗ ಮಧ್ಯದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಪಿಡಿಒ ಸೋಮಶೇಖರ್ ಅವರು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ವಾಪಸ್ಸಾಗುವಾಗ ಗೂಡ್ಸ್ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೋಮಶೇಖರ್ ತಲೆಗೆ ತೀವ್ರವಾದ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ರಸ್ತೆ ಅಪಘಾತ ! ➤ ಪಿಡಿಒಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ. 25. ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ. ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ ಇಂದಿರಾಗಾಂಧಿ) ಮಹಿಳಾ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ವ್ಯಥೆ. ಮುಖ್ಯ ರಸ್ತೆಯಲ್ಲಿ ಬಸ್ಸಿನಿಂದ ಇಳಿಯುವ ವಿದ್ಯಾರ್ಥಿನಿಯರು 500

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ Read More »

ಕರಾವಳಿ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು

(ನ್ಯೂಸ್ ಕಡಬ)newskadaba.com ಮೈಸೂರು, ಜ.25. ಕಾಫಿ ಡೇ ಎಂಟರ್ ಪ್ರೈಸಸ್ ಗೆ ಮಾರುಕಟ್ಟೆ ನಿಗಾ ಸಂಸ್ಥೆ ಸೆಬಿ 26 ಕೋಟಿ ರೂ (3.2 ದಶಲಕ್ಷ ಡಾಲರ್) ದಂಡ ವಿಧಿಸಿದ್ದು, 45 ದಿನದೊಳಗೆ ಪಾವತಿಸುವಂತೆ ಗಡುವು ವಿಧಿಸಿದೆ. ಸೆಕ್ಯೂರೆಟಿಸ್ ಅಂಡ್ ಎಕ್ಸ್ ಚೆಂಜ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ತನ್ನ ಸೋದರ ಸಂಸ್ಥೆಗಳಿಂದ 35.35 ಶತಕೋಟಿ ರೂಪಾಯಿ ಹಣ ಬಾಕಿ ಇರಿಸಿಕೊಂಡಿದೆ. ಈ ಮೂಲಕ ಹಣಕಾಸು ವಹಿವಾಟಿನಲ್ಲಿ ಎಡವಿದೆ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು Read More »

ಕರ್ನಾಟಕ

ರಾಜ್ಯದ ಕೆಲವೆಡೆ ಬಿರುಸಿನ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ. ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಭಾಗಮಂಡಲದ ಕೆಲವೆಡೆ ಇನ್ನೂ ಭತ್ತದ ಕೊಯ್ಲು ಆಗಿಲ್ಲ. ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಜ.27ರಿಂದ ಫೆ.2ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ

ರಾಜ್ಯದ ಕೆಲವೆಡೆ ಬಿರುಸಿನ ಮಳೆ Read More »

ಕರ್ನಾಟಕ

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜ.25. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ, ಚಿತ್ರದುರ್ಗದ ಮುರುಘಾ ಸ್ವಾಮಿ ವಿರುದ್ದ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಮುರುಘಾ ಸ್ವಾಮಿ ಬಂಧನವಾಗಿ ಜೈಲು ಸೇರಿ ಬರೋಬ್ಬರಿ ಐದು ತಿಂಗಳು ತುಂಬುತ್ತಿದೆ. ಜೈಲಲ್ಲಿರುವ ಸ್ವಾಮಿ ಬೇಲ್ ಪಡೆದು ಹೊರ ಬರುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ‌. ಆದರೀಗ ಬೇಲ್ ನಿರೀಕ್ಷೆಯಲ್ಲಿದ್ದ ಮುರುಘಾ ಸ್ವಾಮಿಗೆ ಪೋಲೀಸರು ಎರಡನೇ ಫೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿ ಮತ್ತೆ ಶಾಕ್ ನೀಡಿದ್ದಾರೆ.

ಬೇಲ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಮುರುಘಾ ಸ್ವಾಮಿಗೆ ಶಾಕ್ ಕೊಟ್ಟ ಪೊಲೀಸರು..! Read More »

ಕರ್ನಾಟಕ

 ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!  ➤  ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಆದವರಿಗೆ 5 ಸಾವಿರ ಪ್ರೋತ್ಸಾಹ ಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ನೌಕರರಿಗೆ

 ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!  ➤  ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಆದವರಿಗೆ 5 ಸಾವಿರ ಪ್ರೋತ್ಸಾಹ ಧನ Read More »

ಕರ್ನಾಟಕ

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ..!

(ನ್ಯೂಸ್ ಕಡಬ)newskadaba.com ನವದೆಹಲಿ, ಜ.25. ಬಹುರಾಷ್ಟ್ರೀಯ ಕಂಪನಿಗಳು, ಸ್ಟಾರ್ಟಪ್‌ಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಆರಂಭದಲ್ಲಿ ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್ ಮತ್ತು ವಿಪ್ರೊದಂತಹ ದೊಡ್ಡ ಟೆಕ್ ಕಂಪನಿಗಳು ಅನೇಕ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಿವೆ. ಈ ಬೆಳವಣಿಗೆ ಜಗತ್ತಿನಾದ್ಯಂತ ಭಾರತೀಯ ವೃತ್ತಿಪರರಲ್ಲಿ ಅಪಾರ ಒತ್ತಡ ಮತ್ತು ಆತಂಕವನ್ನು ಉಂಟುಮಾಡಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಕಂಪನಿಗಳು ಇದೇ ರೀತಿ ತಮ್ಮ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ. ಜೀವನಕ್ಕಾಗಿ ಹಣ ಸಂಪಾದನೆ ಬಹಳ ಮುಖ್ಯ, ಅದರ ಜೊತೆ

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ..! Read More »

ರಾಷ್ಟ್ರೀಯ ನ್ಯೂಸ್

₹ 47,000 ದಾಟಿದ ಅಡಿಕೆ ಧಾರಣೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಜ.25. ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿದ್ದು, ಕ್ವಿಂಟಲ್‌ಗೆ ₹ 47,000 ಗಡಿ ದಾಟಿದೆ. ಅಕ್ಟೋಬರ್‌ನಲ್ಲಿ ಅಡಿಕೆ ಧಾರಣೆ ₹ 53,000 ದಾಟಿತ್ತು. ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ ಡಿಸೆಂಬರ್‌ನಲ್ಲಿ ₹ 39,000ಕ್ಕೆ ಕುಸಿದಿತ್ತು. ವಾರದಿಂದ ಅಡಿಕೆ ಧಾರಣೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಜನವರಿ 23ರಂದು ₹ 47,000ದ ಗಡಿ ದಾಟಿದೆ. ಹೀಗಾಗಿ ಬೆಳೆಗಾರರು ಅಡಿಕೆ ಮಾರಲು ಮುಂದಾಗುತ್ತಿದ್ದಾರೆ. ‘ಡಿಸೆಂಬರ್‌ನಲ್ಲಿ ಅಡಿಕೆ ಧಾರಣೆ ಕುಸಿದಾಗ, ಜನವರಿಯಲ್ಲಿ ಏರಿಕೆಯಾಗಬಹುದು ಎಂದು ಧೈರ್ಯ

₹ 47,000 ದಾಟಿದ ಅಡಿಕೆ ಧಾರಣೆ Read More »

ಕರ್ನಾಟಕ
Scroll to Top