karnataka

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com  ಪಣಜಿ, ಜ. 21. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ […]

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿಡಲಾಗಿದ್ದ ಶೇಷಾದ್ರಿಪುರ ಠಾಣೆ ಮೇಲೆ ರಾಜ್ಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಶೇಷಾದ್ರಿಪುರ ಠಾಣೆ ಇನ್‌ಸ್ಪೆಕ್ಟರ್ ಹೇಮಂತ್‌ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ (ಎಸ್‌ಎಚ್‌ಆರ್‌ಸಿ) ದಾಖಲಾಗಿದ್ದ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಕೇಶವ್ ನೇತೃತ್ವದ ತಂಡ ಈ ದಾಳಿ ಮಾಡಿದೆ. ‘ಸ್ಥಳೀಯ ನಿವಾಸಿ ಆರ್. ಶ್ರೀಧರ್ ಎಂಬುವರನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು. ಯಾವುದೇ ದೂರು ಹಾಗೂ ಎಫ್‌ಐಆರ್ ಇಲ್ಲದಿದ್ದರೂ ಠಾಣೆಯಲ್ಲಿ

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಶಾಸಕರ ನಿವೇಶನಗಳನ್ನು ಕಬಳಿಸಲಾಗಿದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮಗೆ ಮಂಜೂರಾಗಿದ್ದ ಬಿಡಿಎ ನಿವೇಶನ ಕಬಳಿಸಿದ್ದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ನೀಡಿದ ದೂರಿನ ಮೇರೆಗೆ ಹಲಸೂರು ನಿವಾಸಿ ರಾಮಮೂರ್ತಿ, ಅನುರಾಧ, ದೀಪಿಕಾ, ನಿವೇದಿತಾ, ಸಾಚ್ಯಮಾಟೆ ಡೆವಲಪರ್ಸ್, ಜೆಪಿ ನಗರದ ಜೆಮ್ಮಿ ರಾಹೂರ್, ಮಲ್ಲೇಶ್ವರಂ ನ ಶ್ರೀಕೃಷ್ಣ ಕನ್ಸ್ಟ್ರಕ್ಷನ್ ಇಂಡಿಯಾ ಕಂಪನಿ, ಮಂಜೇಗೌಡ,

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ,

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.21. ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ಇ-ಪಾಸ್‌ಬುಕ್‌ ಸೇವೆಯು ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಸಂಘಟನೆಯು ಟ್ವಿಟರ್‌ ಮೂಲಕ ಪ್ರತಿಕ್ರಿಯೆ ನೀಡಿದೆ. ಕಳೆದ 10 ದಿನಗಳಿಂದ ಇ-ಪಾಸ್‌ಬುಕ್‌ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ಟ್ವಿಟರ್‌ನಲ್ಲಿ ಇಪಿಎಫ್‌ಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸಂಘಟನೆಯು ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ‘ಪಾಸ್‌ಬುಕ್‌ ತಾಂತ್ರಿಕ ಕಾರಣಗಳಿಂದಾಗಿ ಬಳಕೆಗೆ ಅಲಭ್ಯವಾಗಿತ್ತು. ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದೆ.

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್ Read More »

ಕರ್ನಾಟಕ

ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚಿಕ್ಕಬಳ್ಳಾಪುರ, ಜ.20. ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, 2000 ರೂಪಾಯಿ ಮುಖಬೆಲೆಯ 1.29 ಕೋಟಿ ಮೌಲ್ಯದ ನಕಲಿ ನೋಟುಗಳನ್ನ ಚಿಂತಾಮಣಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಚಿಂತಾಮಣಿ ತಾಲೂಕು ಊಲವಾಡಿ ಗ್ರಾಮದ ಬಾರ್ನ್ ಫೌಂಡೇಶನ್ ಕಟ್ಟಡದಲ್ಲಿ ನಡೆಯುತ್ತದ್ದ ನಕಲಿ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶೇಖ್ ಹಿದಾಯತ್, ದಾವೂದ್ ವಾಸಿಮ್ ಹಾಗೂ ಶಿವಣ್ಣ ಬಂಧಿತ ಆರೋಪಿಗಳು. ಕಟ್ಟಡದ ಕೋಣೆಯೊಂದರಲ್ಲೇ ನಕಲಿ ನೋಟುಗಳನ್ನು ಪ್ರಿಂಟ್​ ಮಾಡುತ್ತಿದ್ದರು.    

ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com  ದಾವಣಗೆರೆ, ಜ.20. ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ  ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸುತ್ತಿದ್ದು, ಇದರಂತೆ ಪ್ರತಿ ಮಹಿಳೆಗೆ ಮಾಸಿಕ 2,000 ರೂಪಾಯಿ ನಗದು ಸಹಾಯವನ್ನು ನೀಡಲಾಗುತ್ತದೆ. ಇನ್ನು ಕೆಲವೇ ತಿಂಗಳುಗಳಿರುವ ರಾಜ್ಯ

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್ Read More »

ಕರ್ನಾಟಕ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.20. ಈ ಬಾರಿ ಕರ್ನಾಟಕದಲ್ಲಿ ಚುನಾವಣೆ ವರ್ಷ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ, ಕುತೂಹಲ ಬಜೆಟ್ ಮೇಲೆ ಹೆಚ್ಚಾಗಿದೆ. ರಾಜ್ಯ ಬಜೆಟ್‌ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಜನವರಿ 23 ಸೋಮವಾರದಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಬಜೆಟ್ ಪೂರ್ವಭಾವಿ ಸಭೆ: ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ Read More »

ಕರ್ನಾಟಕ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಬಂಧಿತ ಆರೋಪಿ. ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು  ಕಗ್ಗಲೀಪುರ ಠಾಣೆಗೆ ತೆರಳಿದ್ದರು. ಇದೇ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿಯಾಗಿ ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top