karnataka

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ […]

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಝೂಗಳಿಂದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಮೃಗಾಲಯಗಳಿಂದ 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ”ಕೋವಿಡ್‌ ಬಳಿಕ ಮೃಗಾಲಯಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಾಗುತ್ತಿರುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ,” ಎಂದು ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಎಲ್ಲಾ ಮೃಗಾಲಯಗಳಿಗೆ 52,77,013 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಡಿಸೆಂಬರ್‌ ತಿಂಗಳೊಂದರಲ್ಲೇ 5.24 ಲಕ್ಷ ಮಂದಿ ಭೇಟಿ ನೀಡಿರುವುದು ದಾಖಲೆಯಾಗಿದೆ,” ಎಂದರು.  

ರಾಜ್ಯದ ಝೂಗಳಿಂದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ Read More »

ಕರ್ನಾಟಕ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದುಡಿದು ಜೀವನ ಮಾಡಲು ಸಾವಿರಾರು ದಾರಿಗಳಿವೆ. ಆದರೂ, ದುಡಿದು ತಿನ್ನುವುದನ್ನು ಬಿಟ್ಟು ಇಲ್ಲೊಬ್ಬ ಖತರ್ನಾಕ್‌ ಮಹಿಳೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯರ ವೇಷವನ್ನು ಧರಿಸಿಕೊಂಡು ಹೋಗಿ ರೋಗಿಗೆ ಚಿಕಿತ್ಸೆ ನೀಡುವುದಾಗಿ ಚಿಕಿತ್ಸಾ ಕೊಠಡಿಗೆ ತೆರಳಿ ಎಚ್ಚರವಿಲ್ಲದೆ ಮಲಗಿದ್ದ  ರೋಗಿಯ ಚಿನ್ನದ ಸರ ಮತ್ತು ಉಂಗುರವನ್ನು ಕದ್ದು ಪರಾರಿ ಆಗಿದ್ದಾಳೆ. ನಾನಾ ವೇಷ ಧರಿಸಿ ಕಳ್ಳತನ ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಹಲವು ಆರೋಪಗಳಿಗೆ ಶಿಕ್ಷೆ ಆಗುವುದನ್ನು ನಾವು ಪ್ರತಿನಿತ್ಯ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ಹೇಳಿದ್ದಾರೆ.    

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..! Read More »

ಕರಾವಳಿ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ನನ್ನ ಗ್ರಹಚಾರವೊ, ಏನೋ, ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನನ್ನ ಜೀವನದಲ್ಲಿ ನಾನೆಂದೂ ನೋಡಿಲ್ಲ. ನನ್ನ ಪರಿಸ್ಥಿತಿ ಬೇರೆ ಯಾರಿಗೂ ಬರಬಾರದು. ಘಟನೆ ಬಳಿಕ ಸರ್ಕಾರದಿಂದ ನನ್ನ ಕುಟುಂಬಕ್ಕೆ ಪರಿಹಾರ ತೆಗೆಸಿಕೊಡುವುದಾಗಿ ಜನಪ್ರತಿನಿಧಿಗಳು, ಸಚಿವರು ಭರವಸೆ ನೀಡಿ ಹೋಗಿದ್ದಾರೆ.  ಹೊಸ ರಿಕ್ಷಾ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ. ಆದರೆ, ಇದುವರೆಗೂ ಯಾವ ಪರಿಹಾರವೂ ಸಿಕ್ಕಿಲ್ಲ. ತುಂಬ ಕಷ್ಟದಿಂದ ಬದುಕು ಸಾಗಿಸುತ್ತಿದ್ದೇವೆ ಇದು ಮಂಗಳೂರಿನ ನಾಗುರಿಯಲ್ಲಿ  ಚಲಿಸುತ್ತಿದ್ದ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಆಟೋ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಭಾರತೀಯರು ಬಂಗಾರ ಪ್ರೀಯರು. ಮದುವೆಯಿಂದ ಹಿಡಿದು ಎಲ್ಲಾ  ಶುಭ ಸಮಾರಂಭಗಳಿಗೆ ಬಂಗಾರದ ಪಾತ್ರ ಇದ್ದೇ ಇರುತ್ತದೆ. ಹೀಗೆ ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಮನೆಯಲ್ಲಿ ಆದಾಯ ಮೀರಿದ ಚಿನ್ನ ಇದ್ದರೆ ತೆರಿಗೆ ಬೀಳಲಿದೆ. ಗೃಹಿಣಿಯರು 500 ಗ್ರಾಂ ಚಿನ್ನ ಇಟ್ಟುಕೊಳ್ಳಬಹುದು ಅವಿವಾಹಿತ ಯುವತಿಯರು 250 ಗ್ರಾಂ ಗಂಡಸರು 100 ಗ್ರಾಂ ಹಣಕಾಸು ಸಚಿವಾಲಯದಿಂದ ಚಿನ್ನಾಭರಣಕ್ಕೆ ತೆರಿಗೆ ಆದಾಯದಲ್ಲಿ ಖರೀದಿಸಿದ ಚಿನ್ನಕ್ಕೆ ತೆರಿಗೆ ಇಲ್ಲ ಐಟಿ ದಾಳಿಯಲ್ಲಿ

ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ Read More »

ಕರ್ನಾಟಕ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. 15- 12 ನೇ ಶತಮಾನದಲ್ಲೇ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಶ್ರೀ ಗುರು ಸಿದ್ದರಾಮೇಶ್ವರರು ಹೆಚ್ಚು ಒತ್ತು ನೀಡಿದ್ದರು. ಇದೇ ಹಾದಿಯಲ್ಲಿ ನಡೆದಿರುವ ನಮ್ಮ ಸರ್ಕಾರ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಿಪಟೂರು ನಗರದ ಶ್ರೀ ಸಿದ್ದರಾಮೇಶ್ವರ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನೊಳಂಬ ಲಿಂಗಾಯತ ಸಂಘ ಆಯೋಜಿಸಿದ್ದ ಶ್ರೀ ಗುರುಸಿದ್ದಾರಾಮೇಶ್ವರರ 850 ನೇ ಜಯಂತಿ ಕಾರ್ಯಕ್ರಮದ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನವಜಾತ ಹೆಣ್ಣು ಶಿಶು ಪತ್ತೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.16. ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಗೊಲ್ಲನರಸಪ್ಪ ಕಾಲೋನಿಯ ಕೃಷ್ಣ ಗುಡಿ ಹತ್ತಿರ ರೈಲ್ವೇ ಗೇಟ್ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ವಾರಸುದಾರರು ತಿಳಿದಿರುವುದಿಲ್ಲ.  ಚಹರೆ: ಎಣ್ಣೆಗೆಂಪು, ದುಂಡುಮುಖ ಹೊಂದಿದ್ದು, ಕಪ್ಪು ಕೂದಲು ಇರುತ್ತವೆ. ನವಜಾತ ಹೆಣ್ಣು ಶಿಶುವಿನ ಪೋಷಕರ ಬಗ್ಗೆ ಮಾಹಿತಿ ದೊರೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅವರ ಮೊ.9480803088 ಅಥವಾ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.  

ನವಜಾತ ಹೆಣ್ಣು ಶಿಶು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top