karnataka

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ […]

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಈ ನಡುವೆ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅಪಘಾತ ಸಂಭವಿಸಿದ ಎಚ್ಬಿಆರ್ ಲೇಔಟ್ನ ಸ್ಥಳಕ್ಕೆ ಭೇಟಿ

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ Read More »

ಕರ್ನಾಟಕ
Crime

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ತಿಂಗಳು ಕನಿಷ್ಠ ಐದು ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಮಕ್ಕಳ ಕಲ್ಯಾಣ ಸಮಿತಿಯ ಮಾಹಿತಿಯ ಪ್ರಕಾರ 2022ರಲ್ಲಿ 33 ಹುಡುಗಿಯರು ಸೇರಿದಂತೆ ಒಟ್ಟು 62 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 60 ಮಂದಿಯನ್ನು ಪೊಲೀಸರು ಗುರುತಿಸಿದ್ದು, ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಮಾಹಿತಿ ಸಂಗ್ರಹಿಸಲಾಗಿದೆ.   ಬಾಲಾಪರಾಧಿ ನ್ಯಾಯ ಮಂಡಳಿ ಮತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!!

(ನ್ಯೂಸ್ ಕಡಬ)newskadaba.com  ಬೀದರ್, ಜ.11. ಬೀದರ್ ಮೂಲದ ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 38 ಲಕ್ಷದ 76 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ ಘಟನೆ ಬೆಳಕಿಗೆ ಬಂದಿದೆ. ಲಿಂಗಸೂಗೂರು ಪಟ್ಟಣದ ನಿವಾಸಿಯಾಗಿರುವ ಸರಳಾಕ್ಷ ಎನ್ನುವವರಿಗೆ ಸಂಬಂಧಿಕರೆಂದು ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಪರಿಚಯವಾಗಿದೆ. ಸರಳಾಕ್ಷ ಎನ್ನುವವರ ಪತ್ನಿಗೆ ಪ್ರೇರಣಾ ದೂರು ಸಂಬಂಧಿಯಾಗಿದ್ದರು. ಪ್ರೇರಣಾ ಮೂಲಕ ಆತನ ಪತಿ ಸಂಜಯ್ ಶಂಭು ಪರಿಚಯವಾಗಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.11.  ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವರದಿ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು  ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.    

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..!

(ನ್ಯೂಸ್ ಕಡಬ)newskadaba.com  ಹೈದರಾಬಾದ್, ಜ.11. ದೇಶದಲ್ಲಿ ಐಟಿ-ಬಿಟಿ, ಸ್ಟಾರ್ಟ್‌ ಅಪ್‌, ಶ್ರೀಮಂತಿಕೆ, ಉದ್ಯಮಗಳ ಬೆಳವಣಿಗೆ, ಜಿಎಸ್‌ಟಿ ಪಾವತಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ವೇಶ್ಯಾವಾಟಿಕೆಯಲ್ಲಿಯೂ ಮುಂಚೂಣಿಯಲ್ಲಿದೆ ಎನ್ನುವುದು ಆತಂಕಕಾರಿ ವಿಚಾರವಾಗಿದೆ. ಆಧುನಿಕ ಸಮಾಜ ಬೆಳೆದಂತೆ ಅಪರಾಧ ಕೃತ್ಯ, ವೇಶ್ಯಾವಾಟಿಕೆ ಮತ್ತು ಮೋಸದ ಪ್ರಕರಣಗಳೂ ಹೆಚ್ಚಾಗುತ್ತಿವೆ. ದೇಶದಲ್ಲಿ ವಿವಿಧ ಕ್ಷೇತ್ರಗಳ ಬೆಳವಣಿಗೆಯನ್ನು ಅಧ್ಯಯನ ಮಾಡುವ ಸಂಸ್ಥೆಗಳು, ಈಗ ವೇಶ್ಯಾವಾಟಿಕೆ ನಡೆಯುವ ಬಗ್ಗೆಯೂ ಸಮೀಕ್ಷೆಯನ್ನು ಮಾಡಿ ಬಹರಂಗಪಡಿಸಿವೆ. ಈ ವೇಳೆ ವೇಶ್ಯಾವಾಟಿಕೆ ನಡೆದ ಘಟನೆಗಳು, ಪೊಲೀಸರು ದಾಳಿ

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.11. ರಾಜ್ಯದ ಸ್ಮಶಾನಗಳ ಕಾರ್ಮಿಕರನ್ನು ಖಾಯಂಗೊಳಿಸುವ ತೀರ್ಮಾನ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸುವ ಆದೇಶವನ್ನು ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿಂದು ಸ್ಮಶಾನ ಕಾರ್ಮಿಕರ ಜತೆ ಉಪಾಹಾರ ಸೇವಿಸಿ ಮಾತನಾಡಿದ ಅವರು ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವರಿಗೆ ಎಲ್ಲ ಸೌಲಭ್ಯ ಕೊಡುವ ನಿರ್ಧಾರ ಮಾಡಿದ್ದೇನೆ. ಬೆಂಗಳೂರಿನಲ್ಲಿ 112 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದವರಿಗೂ ಖಾಯಂ ನೇಮಕಾತಿ ಪತ್ರವನ್ನು ಶೀಘ್ರ ನೀಡಲಾಗುವುದು

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                 

(ನ್ಯೂಸ್ ಕಡಬ)newskadaba.com ನವದೆಹಲಿ, ಜ.11. 9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ 7 ನ್ಯಾಯಾಧೀಶರು ಮತ್ತು ಇಬ್ಬರು ನ್ಯಾಯವಾದಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                  Read More »

ಕರ್ನಾಟಕ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!       

(ನ್ಯೂಸ್ ಕಡಬ)newskadaba.com  ಮೈಸೂರು, ಜ.11. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ ವಿ.ಶೋಭಾ ನೇತೃತ್ವದ ಸಂಶೋಧನಾ ತಂಡವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ಬೆಟ್ಟಗಳಲ್ಲಿ ಇತಿಹಾಸ ಪೂರ್ವ ಸ್ಮಶಾನಗಳನ್ನು ಪತ್ತೆ ಹಚ್ಚಿದೆ ಎನ್ನಲಾಗಿದೆ. ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಚಾಮರಾಜನಗರ ತಾಲೂಕಿನ ಭೂದಿಪಡಗ ಗ್ರಾಮದಲ್ಲಿ ಸಂಶೋಧನಾ ತಂಡವು ಮೂರು ಸ್ಮಶಾನಗಳನ್ನು ಪತ್ತೆ ಮಾಡಿದೆ. ಇವು ಕ್ರಿಸ್ತ ಪೂರ್ವ 15ನೇ ಶತಮಾನದವೆಂದು ನಂಬಲಾಗಿದೆ. ಪುರಾತತ್ವ ತಜ್ಞರು ಗತಕಾಲದ ಹೆಚ್ಚಿನ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!        Read More »

ಕರ್ನಾಟಕ
Scroll to Top