karnataka

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.      

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

(ನ್ಯೂಸ್ ಕಡಬ) newskadaba.com ವಿಜಯನಗರ, ಜ.11.  ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟ, ಹಾಗೂ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರದಂದು ವರದಿಯಾಗಿದೆ. ಮೃತ ಮಹಿಳೆಯನ್ನುರಾಣಿಪೇಟೆ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಚಲವಾದಿ ಕೇರಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                       

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದು, ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಮಂಗಳೂರು

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                        Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು    

(ನ್ಯೂಸ್ ಕಡಬ)newskadaba.com  ಹೆಬ್ರಿ, ಜ.11. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.      

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ      

(ನ್ಯೂಸ್ ಕಡಬ)newskadaba.com  ವಿಟ್ಲ, ಜ.11. ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಅಪಘಾತದಿಂದ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದಲ್ಲಿ ವರದಿ ತಿಳಿಸಿದೆ. ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ  ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ವೈದ್ಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸಹಸವಾರ  ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ne  

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು  

(ನ್ಯೂಸ್ ಕಡಬ) newskadaba.com  ಹಾಸನ, ಜ.11. ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ವಾಸದ ಮನೆಯ ಹೊರಗೆ ಮತ್ತು ಒಳಗೆ ಇದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು ಕೆಲವೇ ನಿಮಿಷಗಳ ಅಂತರದಲ್ಲಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಮೂವರು ವಾಸವಾಗಿದ್ದು ಅದೃಷ್ಟವಶಾತ್‌ ಕೂದಲೆಳೆ

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ             

(ನ್ಯೂಸ್ ಕಡಬ) newskadaba.com  ವಿಜಯನಗರ, ಜ.11. ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಅಸ್ವಸ್ಥರಾದ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ಮೃತರನ್ನು ನಗರದ ರಾಣಿಪೇಟೆಯ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಅಂತ ಸ್ಥಳೀಯರು ಹೇಳಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆಂದು ತಿಳಿದು ಬಂದಿದೆ.  ಕಲುಷಿತ ನೀರು ಸೇವಿಸಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ              Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top