karnataka

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಡಿ. 27. ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ. ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದಿಂದ ಅಭಿಮನ್ಯ, ಭೀಮ ಆನೆಗಳು ಈಗಾಗಲೇ ಕರಡಿಗೋಡು ಗ್ರಾಮಕ್ಕೆ ಬಂದಿದ್ದು, ಕರಡಿಗೋಡು ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ತೋಟದಲ್ಲಿ ಬೀಡುಬಿಟ್ಟು, ಕೃಷಿ ಫಸಲು ನಾಶ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿಗೆ ಮುಂದಾಗುತ್ತಿದ್ದ ಕಾಡಾನೆಗಳನ್ನು ಸೆರೆ ಹಿಡಿಯಲು ಸಾಕಾನೆಗಳ ಜೊತೆ ಅರಣ್ಯಧಿಕಾರಿಗಳು ಸಜ್ಜಾಗಿದ್ದಾರೆ. […]

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ Read More »

ಕರ್ನಾಟಕ
Death, deadbody, Waterfall

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಯುವಕಯೋರ್ವ ಊಟ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕನಕಪುರದ ಪ್ರೈಡ್ ಹೋಟೆಲ್‌ವೊಂದರಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಪ್ರೀತಂ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ವರದಿಯಾಗಿದೆ. ಗಾಯಾಳುಗಳನ್ನು ಬಾಲಕಿ ನೂರಿನ್ ಫಲಕ್ ಮತ್ತು ಈಕೆ ತಂದೆ ಫಕ್ರುದ್ದೀನ್‌ ಎಂದು ಗುರುತಿಸಲಾಗಿದೆ. ಬಿಬಿಎಂಪಿಯ ಆರಂಭಿಕ ವರದಿಗಳ ಪ್ರಕಾರ, ನೂರಿನ್ ಫಲಕ್ ಎಂಬ ಬಾಲಕಿಯು ತನ್ನ ತಂದೆಯ ಜೊತೆ ಹೊರಗೆ ಹೋಗುತ್ತಿದ್ದಾಗ ನಾಯಿಯು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದ್ದು, ಇದನ್ನು ತಪ್ಪಿಸಲು

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು           

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.26. ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.  ಮೃತಪಟ್ಟವರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top