karnataka

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                   

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.   ಬಂಧಿತ ಶಿಕ್ಷಕನನ್ನು ಬಿ.ಆರ್. ಬಾಡಕರ ಹಾಗೂ ಆತನಿಗೆ ಸಹಾಯ ಮಾಡಿದ್ದ ಮತ್ತೊಬ್ಬ ಶಿಕ್ಷಕ ಕೆ.ಎಂ. ಕೋಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯು ಶಾಲಾ ಆವರಣದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು. ಈ ಸಂಬಂಧ ಬಾಲಕಿಯು  ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ತಮ್ಮ […]

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ

ಅಡಕೆಗೆ ಎಲೆ ಚುಕ್ಕಿ, ಹಳದಿ ರೋಗ ಬಾಧೆ- ಪರಿಹಾರ ➤ ಕೇರಳಕ್ಕೆ ಮಾದರಿಯಾದ ಕರ್ನಾಟಕ                           

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಕಾಸರಗೋಡು ಜಿಲ್ಲೆಯಲ್ಲಿ ಎಲೆ ಚುಕ್ಕಿ ಮತ್ತು ಹಳದಿ ರೋಗಗಳಿಂದ ಸಂಕಷ್ಟದಲ್ಲಿರುವ ಅಡಕೆ ಕೃಷಿಕರ ನೆರವಿಗೆ ಯೋಜನೆ ಸಿದ್ಧವಾಗಿದೆ. ಅಡಕೆ ಬೆಳೆಗಾರರಿಗೆ ಕೀಟನಾಶಕ ಸಿಂಪಡಿಸಲು ನೆರವು ನೀಡುವಂತೆ ಪ್ರಿನ್ಸಿಪಲ್‌ ಕೃಷಿ ಅಧಿಕಾರಿ ಮಿನಿ ಜೋನ್‌ ಕೃಷಿ ನಿರ್ದೇಶಕರಿಗೆ ಶೀಘ್ರ ನಿರ್ದೇಶನ ನೀಡಲಿದ್ದಾರೆ. ಮೊದಲ ಹಂತವಾಗಿ ಕೀಟನಾಶಕ ಸಿಂಪಡನೆಗೆ 30 ಲಕ್ಷ ರೂ. ಬೇಕಾಗಲಿದೆ ಎಂದು ಅಂದಾಜಿಸಲಾಗಿದೆ. ಅಡಕೆ ಬೆಳೆಗಾರರ ಸಂಕಷ್ಟವನ್ನು ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕ್ಕುನ್ನು ಕೇರಳದ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದರು.

ಅಡಕೆಗೆ ಎಲೆ ಚುಕ್ಕಿ, ಹಳದಿ ರೋಗ ಬಾಧೆ- ಪರಿಹಾರ ➤ ಕೇರಳಕ್ಕೆ ಮಾದರಿಯಾದ ಕರ್ನಾಟಕ                            Read More »

ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                              

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ತಾಲೂಕಿನ ಕಟ್ನವಾಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಕಬ್ಬು ಬೆಳೆಗಾರ ಗುರು ಎಂಬವರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಮರಿಗಳು ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ ಗುರು, ಚಿರತೆ ಮರಿಗಳನ್ನು ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ತನ್ನ ಮರಿಗಳನ್ನು ಹುಡುಕಿಕೊಂಡು ತಾಯಿ ಚಿರತೆ ಎರಡು-ಮೂರು ದಿನಗಳಲ್ಲಿ ಕಬ್ಬಿನ ಗದ್ದೆಗೆ ವಾಪಸ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಲಾಖೆಯು ಕ್ಯಾಮರಾ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                               Read More »

ಕರ್ನಾಟಕ

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!! 

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 26. ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಉಲ್ಬಣವಾಗಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣನಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಎಂದು‌ ವಿಮಾನ‌ ನಿಲ್ದಾಣದ‌ ಎ.ಎ.ಐ. ನಿರ್ದೇಶಕ ಚಿಲ್ಕಾ ಮಹೇಶ ತಿಳಿಸಿದ್ದಾರೆ. ‌ಪ್ರಯಾಣಿಕರು ಪ್ರಯಾಣ‌ ಸಮಯಕ್ಕಿಂತ 45 ನಿಮಿಷದಿಂದ 1 ಗಂಟೆ‌ ಮುಂಚಿತವಾಗಿ ನಿಲ್ದಾಣಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.  

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!!  Read More »

ಕರಾವಳಿ

ಪೆರ್ನೆ: ಡಿ. 28, 29ರಂದು ತಾಜುಲ್ ಉಲಮಾ ಅನುಸ್ಮರಣೆ, ಬುರ್ದಾ ಮಜ್ಲಿಸ್ ಹಾಗೂ ಮದನೀಯಂ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 26. ಇಲ್ಲಿನ ಸುನ್ನೀ ಸೆಂಟರ್ ಪೆರ್ನೆ ಇದರ ವತಿಯಿಂದ ಡಿ. 28 ಹಾಗೂ ಡಿ. 29 ದಂದು ಮಗ್ರಿಬ್ ಬಳಿಕ ಪೆರ್ನೆ ಜಂಕ್ಷನ್ ಸಮೀಪ ಇರುವ ಎ ಎಂ ಗಾರ್ಡನ್ ನಲ್ಲಿ ಬೃಹತ್ ತಾಜುಲ್ ಉಲಮಾ ಅನುಸ್ಮರಣೆ ಬುರ್ದಾ ಮಜ್ಲಿಸ್ ಮತ್ತು ಮದನೀಯಂ ಮಜ್ಲಿಸ್ ನಡೆಯಲಿದೆ. ಬುಧವಾರದಂದು ತಾಜುಲ್ ಉಲಮಾ ಅನುಸ್ಮರಣೆ ಮತ್ತು ಬುರ್ದಾ ಮಜ್ಲಿಸ್ ಹಾಗೂ ಗುರುವಾರದಂದು ಅಬ್ಲಲ್ ಲತೀಫ್ ಸಖಾಫಿ ಕಾಂತಪುರಂರವರು ನಡೆಸಿಕೊಂಡು ಬರುತ್ತಿರುವ ಪ್ರಸಿದ್ಧ ಮದನೀಯಂ

ಪೆರ್ನೆ: ಡಿ. 28, 29ರಂದು ತಾಜುಲ್ ಉಲಮಾ ಅನುಸ್ಮರಣೆ, ಬುರ್ದಾ ಮಜ್ಲಿಸ್ ಹಾಗೂ ಮದನೀಯಂ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಬೈಕ್ ಮತ್ತು ಕಾರಿನ ನಡುವೆ ಅಪಘಾತ  ➤ ಓರ್ವ ಮೃತ್ಯು                               

(ನ್ಯೂಸ್ ಕಡಬ) newskadaba.com ಕುಣಿಗಲ್, ಡಿ. 26. ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಣಿಗಲ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಶಿವಪುರದ ಸುರೇಶ್ ಎಂದು ಗುರುತಿಸಲಾಗಿದೆ. ಬೋನಹಳ್ಳಗೆ ಬೈಕ್ ನಲ್ಲಿ ತೆರಳುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.    

ಬೈಕ್ ಮತ್ತು ಕಾರಿನ ನಡುವೆ ಅಪಘಾತ  ➤ ಓರ್ವ ಮೃತ್ಯು                                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್
section 144

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸುರತ್ಕಲ್ ಜಂಕ್ಷನ್‌ನಲ್ಲಿ ಪೊಲೀಸರು ಸೆಕ್ಷನ್ ಹಾಕಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ವಾಹನ ನಿಲುಗಡೆ, ಓಡಾಟ ಹಾಗೂ ಭಾನುವಾರದಂದು ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ಪೊಲೀಸರು ವಾಹನ ಸಂಚಾರ ನಿಷೇಧಿಸಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಿಲ್ಲ, ಪೊಲೀಸರ ಉಪಸ್ಥಿತಿಯೂ ಇಲ್ಲದೇ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ವಾಹನ ದಟ್ಟಣೆ ಹೆಚ್ಚಾಗಿದ್ದು,

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ Read More »

ಕರಾವಳಿ, ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top