karnataka

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 21. ಹತ್ತಿ ಬಿಡಿಸುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಸಂಭವಿಸಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಯವರಿಂದ ವಿತರಿಸಿರುವ ಗುರುತಿನ ಚೀಟಿಯನ್ನು ಸಮುದಾಯದ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ದುರುಪಯೋಗ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಹಿನ್ನಲೆ ಸಮಾಜದ ಹಿತದೃಷ್ಟಿಯಿಂದ ಆ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಂತೆ ಹಾಗೂ ಮುಂದಿನ ದಿನಗಳಲ್ಲಿ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಗುರುತು ಚೀಟಿಯನ್ನು ರದ್ದುಪಡಿಸಲಾಗುವುದು. ಮಂಗಳೂರು ತಾಲೂಕಿನ ಸುತ್ತಮುತ್ತಲು ಮತ್ತು ವಿಶೇಷವಾಗಿ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವರ್ತಿಸಿ ಜನರಿಂದ ಹಣ ಹಾಗೂ ಇತರೆ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ರಸ್ತೆ ದುರಸ್ತಿಗೆ ರೂ.2.69 ಕೋಟಿ ಅನುದಾನ ಬಿಡುಗಡೆ  ➤ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್  

(ನ್ಯೂಸ್ ಕಡಬ) newskadaba.com ದೊಡ್ಡ ಬಳ್ಳಾಪುರ, ಡಿ. 21. ಗುಂಡಿ ಬಿದ್ದ ರಸ್ತೆಗಳ ದುರಸ್ತಿಗೆ ಸರ್ಕಾರದಿಂದ 2.69 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಮಳೆಯಿಂದ ತಾಲ್ಲೂಕಿನಲ್ಲಿ 35 ಕಿ.ಮೀ. ಉದ್ದದ 23 ರಸ್ತೆಗಳು ಹಾಳಾಗಿದೆ, ಮಾಕಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದ ಕಾರಣ ಗ್ರಾಮಸ್ಥರಿಗೆ ಸಂಪರ್ಕ ಇಲ್ಲವಾಗಿದೆ. ತ್ವರಿತವಾಗಿ ದುರಸ್ತಿ ಮಾಡಬೇಕು ಎಂದು ಸರ್ಕಾರದ ಗಮನ ಸೆಳೆದರು. ಕ್ಷೇತ್ರದಲ್ಲಿ 844 ಕಿ.ಮೀ. ಉದ್ದದಷ್ಟು ಜಿಲ್ಲಾ

ರಸ್ತೆ ದುರಸ್ತಿಗೆ ರೂ.2.69 ಕೋಟಿ ಅನುದಾನ ಬಿಡುಗಡೆ  ➤ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್   Read More »

ಕರ್ನಾಟಕ

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ಕಟ್ಟಡದ 7 ನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಪಿಇಎಸ್ ಕಾಲೇಜು ಆವರಣದಲ್ಲಿ ಸಂಭವಿಸಿದೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮೂಲದ ಎಸ್.ಕೆ.ಜಿಯಾರುಲ್ (24) ಎಂದು ಗುರುತಿಸಲಾಗಿದೆ. ಮಗನ ಸಾವಿನ ಕುರಿತು ತಾಯಿ ನೀಡಿರುವ ದೂರಿನನ್ವಯ, ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದಿದ್ದ ಎವಿಎಸ್ ಕಂಪನಿಯ ಜವಾಹರ್, ಎಂಜಿನಿಯರ್ ನಂಬಿರಾಜನ್, ಉಸ್ತುವಾರಿ ಕುಮಾರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಕುರಿತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ

ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್ Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ    

(ನ್ಯೂಸ್ ಕಡಬ) newskadaba.com  ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಂತೆಬೆನ್ನೂರು, ಡಿ. 21. ಗೂಡ್ಸ್ ವಾಹನಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂತೇಬೆನ್ನೂರು ಸಮೀಪದ ಕಾಕನೂರು ವಿನಾಯಕ ಪ್ರೌಢಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ದಾವಣಗೆರೆ ತಾಲ್ಲೂಕಿನ ಗೋಪನಾಳು ಗ್ರಾಮದ ನಿವಾಸಿ ಪರಮೇಶ್ (33) ಎಂದು ಗುರುತಿಸಲಾಗಿದೆ. ಇವರು ಪಾಂಡೋಮಟ್ಟಿ ಗ್ರಾಮಕ್ಕೆ ಸಂಬಂಧಿಕರ ಶವ ಸಂಸ್ಕಾರಕ್ಕೆಂದು ತೆರಳುವಾಗ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

2 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ ➤ ಸಿಎಂ ಬೊಮ್ಮಾಯಿ       

(ನ್ಯೂಸ್ ಕಡಬ) newskadaba.com ವಿಧಾನಸಭೆ, ಡಿ. 21. ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ. ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಿಗೆ ಸೌಲಭ್ಯ ಒದಗಿಸಲು 2018-19 ರಲ್ಲಿ 500 ಕೋಟಿ ರೂ., 2019-20 ರಲ್ಲಿ 500 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ನೀಡಲಾಗಿತ್ತು. ಆದರೆ ಕೊರೋನಾ ಕಾರಣಗಳಿಂದ

2 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ ➤ ಸಿಎಂ ಬೊಮ್ಮಾಯಿ        Read More »

ಕರ್ನಾಟಕ
Scroll to Top