karnataka

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಕೊಳೆತ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ವರದಿಯಾಗಿದೆ. ಎಂದಿನಂತೆ ಸೊಪ್ಪು ತರಲು ಗುಡ್ಡಕ್ಕೆ ತೆರಳಿದ ಸ್ಥಳೀಯರಿಗೆ ಮೊದಲು ಮೊಬೈಲ್ ಹಾಗೂ ಟ್ರಾವೆಲ್ ಬ್ಯಾಗ್ ಕಾಣಿಸಿದ್ದು, ಅಕ್ಕಪಕ್ಕ ಪರಿಶೀಲನೆ ನಡೆಸಿದಾಗ ಪಕ್ಕದಲ್ಲಿ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಪರಿಚಿತ ಮೃತದೇಹ ನೆಲದಲ್ಲಿ ಬಿದ್ದುಕೊಂಡಿತ್ತು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಕ್ತದಲ್ಲಿ ಪತ್ರ ಬರೆದು ಅಸಮಾಧಾನ ಹೊರ ಹಾಕಿದ ರೈಲ್ವೇ ಕಾರ್ಮಿಕರು…!!!     

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 21. ರೈಲ್ವೇ ನಿಲ್ದಾಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಚ್ಚತಾ ಕಾರ್ಮಿಕರನ್ನು ಕಾನೂನುಬಾಹಿರ ತೆಗೆದುಹಾಕಿದನ್ನು ಖಂಡಿಸಿ ಕಾರ್ಮಿಕರು ರಕ್ತದಲ್ಲಿ ಪತ್ರಬರೆಯುವ ಚಳುವಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಇದು ರೈಲ್ವೇ ಇಲಾಖೆಯು ದಲಿತರ ಮೇಲೆ ಮಾಡಿರುವಂತಹ ಅಮಾನವೀಯ ಶೋಷಣೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.  ಸ್ವಚ್ಚತಾ ಕಾರ್ಮಿಕರ ಕುರಿತು ರೈಲ್ವೇ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕ ಇಲಾಖೆಯು ಯಾವುದೇ ಸ್ಪಂದನೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ರಕ್ತದಲ್ಲಿ ಪತ್ರ ಬರೆದು ಅಸಮಾಧಾನ ಹೊರ ಹಾಕಿದ ರೈಲ್ವೇ ಕಾರ್ಮಿಕರು…!!!      Read More »

ಕರ್ನಾಟಕ

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ರಾಜ್ಯದಲ್ಲಿ  ಚರ್ಮಗಂಟು ರೋಗದಿಂದ ಸುಮಾರು 21,305 ಜಾನುವಾರುಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಸುಮಾರು 230 ತಾಲೂಕುಗಳಲ್ಲಿ ಈವರೆಗೆ 2,37,194 ಜಾನುವಾರುಗಳಿಗೆ ಚರ್ಮಗಂಟು ರೋಗ ಬಾಧಿಸಿವೆ. ಇದರ ಪೈಕಿ 1.64 ಲಕ್ಷ ಜಾನುವಾರುಗಳು ಚೇತರಿಸಿಕೊಂಡಿವೆ ಎನ್ನಲಾಗಿದೆ. ಇನ್ನುಳಿದ ಜಾನುವಾರುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಜಾನುವಾರುಗಳ ಮಾಲಕರಿಗೆ ಈಗಾಗಲೇ ಮುಖ್ಯಮಂತ್ರಿಗಳು 37 ಕೋಟಿ ರೂ ಪರಿಹಾರ ಧನ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                       Read More »

ಕರ್ನಾಟಕ, ಕ್ರೈಮ್ ನ್ಯೂಸ್

1 ನೇ ತರಗತಿಗೆ 6 ವರ್ಷ ಕಡ್ಡಾಯ – ರಾಜ್ಯ ಸರ್ಕಾರ ಆದೇಶ                          

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ರಾಜ್ಯ  ಸರ್ಕಾರವು  1ನೇ ತರಗತಿಗೆ  ಮಕ್ಕಳನ್ನು  ಶಾಲೆಗೆ  ಸೇರಿಸುವ  ಸಂಬಂಧ  ಮಹತ್ವದ  ಆದೇಶವನ್ನು ಹೊರಡಿಸಿದ್ದು, 1ನೇ ತರಗತಿ ದಾಖಲಾತಿಗೆ 6  ವರ್ಷ ಪೂರ್ಣ  ಕಡ್ಡಾಯ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರವು  ಶೈಕ್ಷಣಿಕ  ಸಾಲಿನಿಂದ  ಅನ್ವಯವಾಗುವಂತೆ  ಜೂನ್  1 ನೇ  ತಾರೀಖಿಗೆ  ಕಡ್ಡಾಯವಾಗಿ 6  ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ  ತರಗತಿಗೆ  ದಾಖಲಿಸಲು  ವಯೋಮಿತಿಯನ್ನು ನಿಗದಿಪಡಿಸಿ  ಆದೇಶ  ಹೊರಡಿಸಿದೆ ಎನ್ನಲಾಗಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6  ವರ್ಷಗಳು

1 ನೇ ತರಗತಿಗೆ 6 ವರ್ಷ ಕಡ್ಡಾಯ – ರಾಜ್ಯ ಸರ್ಕಾರ ಆದೇಶ                           Read More »

ಕರ್ನಾಟಕ

ತಟ್ಟೆಯಲ್ಲಿ ಅನ್ನ ಕೊಟ್ಟಾಗ ತಿನ್ನಲಿಲ್ಲ, ಕೈತುತ್ತು ಕೊಟ್ಟಾಗ ಹೊಟ್ಟೆ ತುಂಬಾ ಊಟ ಮಾಡಿದ ಕೋತಿ

(ನ್ಯೂಸ್ ಕಡಬ) newskadaba.com  ಕೊಪ್ಪಳ , ಡಿ 20 :  ಜಬ್ಬಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ಕೋತಿಗೆ ತಾಯಿಯ ರೀತಿಯಲ್ಲಿ ಊಟ ಮಾಡಿಸಿರುವ ಘಟನೆಯೊಂದು ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೆಲ್ಲ ಮಧ್ಯಾಹ್ನ ಬಿಸಿಯೂಟವನ್ನು ಸೇವಿಸಿತ್ತಿರುವುದನ್ನು ಕೋತಿಯೊಂದು ಕುಳಿತು ಕೊಂಡು ನೋಡುತ್ತಿತ್ತು. ಇದನ್ನು ಗಮನಿಸಿದ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ತಟ್ಟೆಯಲ್ಲಿ ಊಟ ವನ್ನು ಕೋತಿಯ ಬಳಿ ಇಟ್ಟರು. ಆಗ ಬರಿ ಅನ್ನವನ್ನು ನೋಡಿದ ಕೋತಿ  ಊಟವನ್ನು ಸೇವಿಸಲಿಲ್ಲ. ಮತ್ತೆ ಅನ್ನವಿದ್ದ ತಟ್ಟೆಗೆ

ತಟ್ಟೆಯಲ್ಲಿ ಅನ್ನ ಕೊಟ್ಟಾಗ ತಿನ್ನಲಿಲ್ಲ, ಕೈತುತ್ತು ಕೊಟ್ಟಾಗ ಹೊಟ್ಟೆ ತುಂಬಾ ಊಟ ಮಾಡಿದ ಕೋತಿ Read More »

ಕರ್ನಾಟಕ

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!  

(ನ್ಯೂಸ್ ಕಡಬ) newskadaba.com  ವಿಜಯಪುರ, ಡಿ.20 ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾದ ಘಟನೆ ವಿಜಯಪುರ ನಗರದ ದೇವಗಿರಿ ಎಂಬಲ್ಲಿ ಸಂಭವಿಸಿದೆ. ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಯಾರು ಬಾವಿಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.20  ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ. ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ. ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ. ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ Read More »

ಕರಾವಳಿ, ಕರ್ನಾಟಕ
Scroll to Top