karnataka

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                       

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು ಎನ್ನಲಾಗಿದೆ. ಸುರೇಂದ್ರ ಕುಮಾರ್ ಹಾಗೂ ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಅನ್ನು ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                        Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಸರಾ ಅಂಬಾರಿ ಹೊತ್ತಿದ್ದ ಆನೆಗೆ ಗುಂಡು ಹೊಡೆದವನ ಬಂಧನ!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ವಿಶ್ವವಿಖ್ಯಾತ ಜಂಜೂ ಸವಾರಿಯಲ್ಲಿ 14 ಭಾರಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತಿದ್ದ ಬಲರಾಮನಿಗೆ ಗುಂಡು ಹಾಕಿದ್ದ ಜಮೀನಿನ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿನ ಮಾಲೀಕನಾಗಿರುವ ಸುರೇಶ್, ತನ್ನ ಜಮೀನಿಗೆ ಅನೆ ಬಂದಿದೆ ಎಂದು ಸಿಟ್ಟಿನಿಂದ ಗುಂಡು ಹಾರಿಸಿದ್ದಾನೆ. ಆತನಿಗೆ ಅದು ಮೈಸೂರಿನ ದಸರಾ ಆನೆ ಎಂದು ತಿಳಿದಿರಲಿಲ್ಲ. ಬಲರಾಮನ ತೊಡೆಗೆ

ದಸರಾ ಅಂಬಾರಿ ಹೊತ್ತಿದ್ದ ಆನೆಗೆ ಗುಂಡು ಹೊಡೆದವನ ಬಂಧನ! Read More »

ಕರ್ನಾಟಕ

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                        

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 16. ಚಿಕ್ಕಮಕ್ಕಳಿಂದ 18ನೇ ವಯೋಮಾನದವರೆಗಿನ ಮಕ್ಕಳನ್ನು ಕಾಡುವ ದಡಾರ –ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಸಕಾಲದಲ್ಲಿ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು. ಅವರು ದಡಾರ-ರುಬೆಲ್ಲಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಲಸಿಕಾ ಅಭಿಯಾನ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಸಿಕೆಯನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿಗಳಲ್ಲಿ, ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಸಾರ್ವಜನಿಕರು

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                         Read More »

ಕರ್ನಾಟಕ

ರಂಗಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ರವರಿಗೆ ರಾಜ್ಯೋತ್ಸವ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೀದರ್, ಡಿ. 16. ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರ ಬೀದರ್ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 3 ದಶಕಗಳ ರಂಗಭೂಮಿ ಸೇವೆಯಲ್ಲಿ ಪರಿಗಣಿಸಲಾದ ಶೇಷಪ್ಪ ಚಿಟ್ಟಾರವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಕರ್ನಾಟಕ ಪರಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ.ವಿಶ್ವನಾಥ ಜಿ.ಪಿ, ಮಹೇಶ್ವರ ತಾತಾ, ಚಿತ್ರನಟಿ ಲಕ್ಷಿತಾ, ಪುಷ್ಪಾ ಹಿರೇಮಠ, ಹಿರಿಯ ಸಾಹಿತಿಗಳಾದ ಡಾ.ಎಂ.ಜಿ. ದೇಶಪಾಂಡೆ, ಸಮಾಜ ಸೇವಕರಾದ ಶಶಿಕುಮಾರ್ ಪೊಲೀಸ್ ಪಾಟೀಲ್,

ರಂಗಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ರವರಿಗೆ ರಾಜ್ಯೋತ್ಸವ ರತ್ನ ಪ್ರಶಸ್ತಿ Read More »

ಕರ್ನಾಟಕ

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ        

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಖೋಖೋ ಪಂದ್ಯಾಟದಲ್ಲಿ ರಾಷ್ಡ್ರಮಟ್ಟಕ್ಕೆ ಆಯ್ಕೆಯಾದ ಕೋಡಿಂಬಾಳದ ನಿತಿನ್ ಕುಮಾರ್ ಅವರನ್ನು ಕಡಬ ಠಾಣೆಯಲ್ಲಿ ಸನ್ಮಾನಿಸಲಾಯಿತು. ಎಸ್.ಐ ಆಂಜನೇಯ ರೆಡ್ಡಿಯವರು ನಿತಿನ್ ಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿ, ಪೊಲೀಸರು ತಪ್ಪು ಮಾಡಿದವರನ್ನು ಶಿಕ್ಷಿಸಲು ಮಾತ್ರ ಇರುವವರಲ್ಲ, ಉತ್ತಮ ಸಾಧನೆ ಮಾಡಿದವರನ್ನು ಗುರುತಿಸುವುದು ಸಹ ನಮ್ಮ ಕರ್ತವ್ಯ. ಯಾವುದೇ ಪ್ರತಿಭೆಗಳನ್ನು ನಾವು ಪ್ರೋತ್ಸಾಹಿಸಿದಾಗ ಅವರಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಣೆ ನೀಡಿದಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಿತಿನ್ ಕುಮಾರ್ ತಂದೆ ರಮೇಶ್,

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ         Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ- ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 16. ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ಮಂಗಳೂರು –ಮಿಲ್ಲುಪುರಂ ರಸ್ತೆಯ ರಾಷ್ಟ್ರೀಯ 73ರ ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ನಡೆದಿದೆ. ಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ನಿಗದಿತ ಭಾರದ ಗ್ಲಾಸ್ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಅಂಬಡ್ತ್ಯಾರು ಸಮೀಪಿಸುತ್ತಿದಂತೆಯೇ ಲಾರಿಯ ಹಿಂಬದಿ ಕಬ್ಬಿಣದ ಟ್ರಾಲಿ ಬಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ರಸ್ತೆಯ ಅಂಚಿನಲ್ಲಿದ್ದ ಕ್ಯಾಂಟೀನ್ ಸಮೀಪ ಹೋಗಿ ನಿಂತಿದೆ. ಲಾರಿಯ ಟ್ರಾಲಿ

ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ- ತಪ್ಪಿದ ಅನಾಹುತ Read More »

ಕರ್ನಾಟಕ

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.16   ಈ ವರ್ಷ ಹೊಂಡ-ಗುಂಡಿ ಬಿದ್ದ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು  ಒಂದೆರಡಲ್ಲ. ಈ ಸಂಧರ್ಭಗಳಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ.ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ. ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ ಎಂದು ತಿಳಿದುಬಂದಿದೆ. ಗುಂಡಿಗಳು ಮತ್ತು ರಸ್ತೆಗಳ ದುಸ್ಥಿತಿಯಿಂದಾಗಿ ಜನರು ಗಂಭೀರ ಗಾಯಗೊಂಡರೆ ಅಥವಾ ಸಾವು ಸಂಭವಿಸುವುದನ್ನು ಗಂಭೀರವಾಗಿ ಪರಿಗಣಿಸುವ ಹೈಕೋರ್ಟ್, ಈ ಕುರಿತು ಯಾವುದೇ ನಾಗರಿಕರು ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಲು

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ      Read More »

ಕರ್ನಾಟಕ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ರಾಜ್ಯದಲ್ಲಿ ಡೆಂಗೀ ಹಾಗೂ ಝಿಕಾ ವೈರಸ್ ಕುರಿತು ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವ ಹಾಗೂ ಹರಡುವಿಕೆ ನಿಯಂತ್ರಿಸಲು ರಾಜ್ಯ ಆರೋಗ್ಯ ಇಲಾಖೆ ಕೆಲವು ಕ್ರಮಗಳನ್ನು ಬಿಡುಗಡೆ ಮಾಡಿದೆ. ಸೊಳ್ಳೆ ಪರದೆಯ ಕೆಳಗೆ ಮಲಗುವುದು, ಸೊಳ್ಳೆ ನಿವಾರಕಗಳನ್ನು ಬಳಸುವುದು ಮತ್ತು ಆದಷ್ಟು ಮುಚ್ಚುವ ಬಟ್ಟೆಗಳನ್ನು ಧರಿಸುವುದು ಹಾಗೂ ಹೆಚ್ಚು ಸೋಂಕಿರುವ ಪ್ರದೇಶಗಳಿಗೆ ಪ್ರಯಾಣವನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ      Read More »

ಕರ್ನಾಟಕ

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…!

(ನ್ಯೂಸ್ ಕಡಬ) newskadaba.com ಶ್ರೀನಿವಾಸಪುರ,  ಡಿ. 16. ಕಾಡಿನಲ್ಲಿ ಸ್ಫೋಟಕ ಸಿಡಿದು ಸಾಕು ನಾಯಿಯೊಂದು ಮೃತಪಟ್ಟ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕುರಿಗಾಹಿಗಳು ಎಂದಿನಂತೆ ಬೆಳಿಗ್ಗೆ ಕುರಿಗಳೊಂದಿಗೆ ಕಾಡಿಗೆ ಹೋಗಿದ್ದು, ಅವರೊಂದಿಗೆ ನಾಯಿಗಳು ಇದ್ದವು. ಸ್ವಲ್ಪ ಹೊತ್ತಿನ ಬಳಿಕ ಭಾರಿ ಶಬ್ದ ಕೇಳಿಸಿ, ಕುರಿಗಾಹಿಗಳು ಶಬ್ದ ಬಂದ ಕಡೆ ಹೋಗಿ ನೋಡಿದಾಗ ನಾಯಿಯೊಂದು ಸತ್ತು ಬಿದ್ದಿತ್ತು. ಬೇಟೆಗಾರರು ಕಾಡು ಹಂದಿಯನ್ನು ಕೊಲ್ಲಲು ಇಟ್ಟಿದ್ದ ಸ್ಫೋಟಕವನ್ನು ನಾಯಿ ಕಚ್ಚಿದೆ ಹಾಗಾಗಿ ನಾಯಿಯ

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top