karnataka

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ 

 (ನ್ಯೂಸ್ ಕಡಬ) newskadaba.com   ಮೂಡಿಗೆರೆ, ಡಿ.14  ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ಎಂಬಲ್ಲಿ ಸಂಭವಿಸಿದೆ. ನರೇಂದ್ರ ಗೌಡ ರವರ ಮನೆಗೆ ರಾತ್ರೋರಾತ್ರಿ 12.30 ರ ಸಮಯಕ್ಕೆ ಮರವೊಂದು ಉರುಳಿಬಿದ್ದ ಪರಿಣಾಮ ಮನೆ ಸಂಪುರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರು ಕಂಗಾಲಾಗಿದ್ದಾರೆ.  ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಫಿ, ಭತ್ತ, ಹಾಗೂ ಮೊದಾಲಾದ […]

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

 (ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಡಿ.14 ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಬಳಿ ಗಾಂಧಿಪಾರ್ಕ್ ಎಂಬಲ್ಲಿ ಸಂಭವಿಸಿದೆ. ಪರಿಣಾಮವಾಗಿ ಟ್ರಾಕ್ಟರ್ ಹಿಂಬದಿಯ ಟ್ರಾಲಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.   ನೆಲ್ಯಾಡಿ ಕಡೆಯಿಂದ ಬಿ,ಸಿ ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಗಾಂಧಿಪಾರ್ಕ್ ಬಳಿ ಓವರ್ ಟೇಕ್ ಮಾಡಿದ್ದು, ಆಗ ಟ್ರಾಕ್ಟರ್ ಗೆ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 13. ಹಳ್ಳಬಿದ್ದ ರಸ್ತೆಗಳಲ್ಲಿ ಸಂಚರಿಸುವಾಗ ಗೂಡ್ಸ್ ಲಾರಿ ಪಲ್ಟಿಯಾದ ಘಟನೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.   ಕಾಟನ್ ತುಂಬಿದ್ದ ಲಾರಿಯು ಮಾಲೂರಿನಿಂದ ಬೆಂಗಳೂರಿಗೆ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                            

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 13. ವಿಶ್ವವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದು ರಾಜ್ಯಾದಾದ್ಯಂತ ಪದವಿ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಭಾರತಿಯ ರಾಷ್ಟ್ರೀಯ ಒಕ್ಕೂಟ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ತೆಕ್ಕಲಕೋಟೆ ಹೇಳಿದ್ದಾರೆ. ಅಲ್ಲದೇ ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಮತ್ತು ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ, ಸರಿಯಾಗಿ ಸ್ಕಾಲರ್ ಶಿಪ್ ನೀಡಬೇಕು, ಸಾರಿಗೆ ಸೌಲಭ್ಯ ಪರಿಹಾರ ನೀಡಬೇಕು,

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                             Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ   

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13.  ಬೆಂಗಳೂರಿನಲ್ಲಿ ರೌಡಿಗಳ ಸಾಮ್ರಾಜ್ಯ ಶುರುವಾಗಿದ್ದು, ರೌಡಿಗಳು ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ಸುತ್ತುತ್ತಿದ್ದಾರೆಂದು ವರದಿ ತಿಳಿಸಿದೆ. ಮಚ್ಚು ಹಿಡಿದುಕೊಂಡು ಕಿರಾತಕರಿಬ್ಬರು ಸುತ್ತುತ್ತಿದ್ದು, ಕೂಲಾಗಿದ್ದ ಏರಿಯಾದಲ್ಲಿ ಲಾಂಗ್ ಹಿಡಿದು ಜನರನ್ನು ಭಯಪಡಿಸುವ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. .  

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ .13. ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಬೆಂಗಳೂರು , ದಕ್ಷಿಣ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ.16 ರವರೆಗೆ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಚಾಮರಾಜನಗರ ,ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ,ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ Read More »

ಕರ್ನಾಟಕ

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ. 13. ಕೈದಿಯೋರ್ವ ಕಾರಾಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಎಂದು ಗುರುತಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.     .  

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು      

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಫಿಶ್ ಮಿಲ್ ನ ತಲಾ 50 ಕೆ.ಜಿ ತೂಕದ 400 ಚೀಲಗಳು ಕಳವಾದ ಘಟನೆ ಬೈಕಂಪಾಡಿಯ ಗೋದಾಮಿನಲ್ಲಿ ಸಂಭವಿಸಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮಿಲ್  ಚೀಲಗಳನ್ನು ಕದ್ದೊಯ್ದಿರುವುದಾಗಿ ಅದರ ವ್ಯವಸ್ಥಾಪಕ ಪಣಂಬೂರು ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉಳ್ಳಾಲದ ಕೋಟೆಪುರದ ಮಹಮ್ಮದ್ ಸಮೀರ್ ಎಂಬವರ ಮಾಲಕತ್ವದ “ಯುನೈಟೆಡ್ ಮೆರೈನ್ ಪ್ರಾಡಕ್ಟ್ಸ್” ಕಾರ್ಖಾನೆಯಲ್ಲಿ ಫಿಶ್ ಮಿಲ್ ಅನ್ನು ತಯಾರಿಸಿ 50 ಕೆ.ಜಿ. ತೂಕದ ಚೀಲಗಳಲ್ಲಿ ತುಂಬಿಸಿಡುತ್ತಿದ್ದು, ಗೋದಾಮಿಗೆ

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top