karnataka

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09: ಕೊರೋನಾ ನಿಯಂತ್ರಣಕ್ಕೆ ಜೂ 14ರವರೆಗೆ ಲಾಕ್​ಡೌನ್​ ವಿಸ್ತರಿಸಿ ಈಗಾಗಲೇ ಸಿಎಂ ಆದೇಶ ನೀಡಿದ್ದರು. ಜೂ. 14 ಬಳಿಕ ರಾಜ್ಯದಲ್ಲಿ ನಿರ್ಬಂಧವನ್ನು ಸಡಿಲಗೊಳಿಸಿ, ಹಂತ ಹಂತವಾಗಿ ಅನ್​ಲಾಕ್​ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ.   ಈಗಾಗಲೇ ಮೂರು ಬಾರಿ ಲಾಕ್​ಡೌನ್​ ವಿಸ್ತರಿಸಿರುವ ಮುಖ್ಯಮಂತ್ರಿಗಳು ಜೂ 14 ರಬಳಿಕ ಮತ್ತೊಮ್ಮೆ ಲಾಕ್​ಡೌನ್​ ಹೇರುವ ಸಂಭಾವ್ಯ ಕಡಿಮೆ ಇದೆ. ಇದೇ ಹಿನ್ನಲೆ ಯಾವ ರೀತಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಸೋಂಕು ನಿಯಂತ್ರಿಸಬೇಕು ಎಂಬ ಕುರಿತು […]

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ Read More »

ಕರ್ನಾಟಕ

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1 

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು.!

(ನ್ಯೂಸ್ ಕಡಬ) newskadaba,ನವದೆಹಲಿ ಜೂ.09: ಲಸಿಕೆ ಹಾಕಿಸಿಕೊಂಡ ವರ ಬೇಕಾಗಿದ್ದಾನೆ ಎಂಬ ವಧುವಿನ ಡಿಮ್ಯಾಂಡ್ ನೋಡಿ ಕಾಂಗ್ರೆಸ್ ಸಂಸದ ಶಶಿ ತರೂರ್ ತಬ್ಬಿಬ್ಬಾಗಿ ಟ್ವೀಟ್ ಮಾಡಿದ್ದಾರೆ.   ಮ್ಯಾಟ್ರಿಮೋನಿಯಲ್ ಜಾಹೀರಾತಿನಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡೂ ಡೋಸ್ ಅನ್ನು ಹಾಕಿಸಿಕೊಂಡಿರುವ ವರನನ್ನು ಯುವತಿ ಹುಡುಕುತ್ತಿದ್ದಾಳಂತೆ. ಜೂನ್ 4, 2021 ರಂದು ಪತ್ರಿಕೆಯೊಂದರ ವೈವಾಹಿಕ ಅಂಕಣದಲ್ಲಿ ಕಾಣಿಸಿಕೊಂಡಂತೆ ಇರುವ ಈ ಜಾಹೀರಾತಿನಲ್ಲಿ ಸ್ವಯಂ ಉದ್ಯೋಗಿ ರೋಮನ್ ಕ್ಯಾಥೊಲಿಕ್ ಮಹಿಳೆ ತನ್ನ ಧರ್ಮದ ವ್ಯಕ್ತಿಯೊಂದಿಗೆ ವಿವಾಹವಾಗಲು ಬಯಸಿದ್ದಾಳೆ. ಆದರೆ, ಷರತ್ತು ಮಾತ್ರ ವಿಭಿನ್ನವಾಗಿದೆ.

ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು.! Read More »

ರಾಷ್ಟ್ರೀಯ ನ್ಯೂಸ್

28 ಪತ್ನಿಯರ ಎದುರು 37ನೇ ಮದುವೆಯಾದ ಭೂಪ..!

(ನ್ಯೂಸ್ ಕಡಬ) newskadaba,ನವದೆಹಲಿ ಜೂ.09: 21ನೇ ಶತಮಾನದಲ್ಲೂ ವ್ಯಕ್ತಿಯೊಬ್ಬ ಬರೋಬ್ಬರಿ 37 ಮದುವೆಯಾಗಿದ್ದಾನೆ. ಅದೂ, ಉಳಿದ ಪತ್ನಿಯರ ಎದುರಿಗೇ 37ನೇ ಪತ್ನಿಯನ್ನು ವರಿಸಿದ್ದಾನೆ. ಮದುವೆಯಾಗುತ್ತಿರುವ ವೀಡಿಯೋ ವೈರಲ್ ಆಗಿದೆ. ಇದು ಅವರ 37ನೇ ಮದುವೆ ಎಂದು ಹೇಳಲಾಗಿದ್ದು, ಈ ವಿವಾಹಕ್ಕೆ ಅವರ ಉಳಿದ 28 ಪತ್ನಿಯರು, 35 ಮಕ್ಕಳು ಮತ್ತು 126 ಮರಿಮೊಮ್ಮಕ್ಕಳು ಸಾಕ್ಷಿಯಾಗಿದ್ದಾರೆ. ಈ ವೀಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

28 ಪತ್ನಿಯರ ಎದುರು 37ನೇ ಮದುವೆಯಾದ ಭೂಪ..! Read More »

ಕರಾವಳಿ

ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ ಸೋಂಕು ಹೆಚ್ಚಾಗುತ್ತಿದೆ. ಬ್ಲಾಕ್ ಫಂಗಸ್ ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 2,490 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ರಾಜ್ಯಕ್ಕೆ ಕೇಂದ್ರದಿಂದ ಪೂರೈಕೆ ಮಾಡಲಾಗಿದೆ.   ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ಮತ್ತೆ 2,490 ವಯಲ್ಸ್ ಆಂಫೊಟೆರಿಸಿನ್- ಬಿ ಔಷಧಿ ಪೂರೈಕೆ ಮಾಡಲಾಗಿದೆ ಕೇಂದ್ರ ಸಚಿವ ಡಿವಿಎಸ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್ Read More »

ಕರಾವಳಿ

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

(ನ್ಯೂಸ್ ಕಡಬ) newskadaba,ಕನ್ಯಾನ ಜೂ.08: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಂಕದಬಳಿ ಸಂಭವಿಸಿದೆ.     ಕನ್ಯಾನ ದಿಲ್ ದಾರ್ ಹೊಟೇಲ್ ಮಾಲಕ ಇಬ್ರಾಹಿಂ ಅವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ Read More »

ಕರಾವಳಿ

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಸೋಮವಾರ 11,958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,07,481ಕ್ಕೆ ತಲುಪಿದೆ. ರಾಜ್ಯದಲ್ಲಿ 0-9 ವರ್ಷದ 81,520 ಮಕ್ಕಳಿಕೆ ಸೋಂಕು ತಗುಲಿದ್ದು, 10-19 ವರ್ಷದ 2,03,526 ಮಕ್ಕಳಿಗೆ ಸೋಂಕು ತಗುಲಿರುವುದು

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ Read More »

ಕರ್ನಾಟಕ

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08:29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.   ಇದುವರೆಗೆ ರಾಜಧಾನಿ ಬೆಂಗಳೂರಿಗೆ 29 ರೈಲುಗಳ ಮೂಲಕ 3,340.69 ಟನ್ ದ್ರವ ವೈದ್ಯಕೀಯ ಆಮ್ಲಜನಕ ತರಲಾಗಿದೆ. ಈ ಮೂಲಕ ಕೋವಿಡ್-19 ರೋಗಿಗಳಿಗೆ ಅತ್ಯವಶ್ಯಕವಾದ ಪ್ರಾಣವಾಯು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್ Read More »

ಕರಾವಳಿ

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06:’ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕನಾಗಿಯೂ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ರಕ್ಷಿತ್ ಶೆಟ್ಟಿ ಬರ್ತ್​ಡೇಗೆ ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘777 ಚಾರ್ಲಿ. ಚಿತ್ರತಂಡ ಸರ್​ಪ್ರೈಸ್ ಒಂದನ್ನು ನೀಡಿದೆ. ರಕ್ಷಿತ್ ಶೆಟ್ಟಿ ನಾಯಕನಾಗಿರುವ 777 ಚಾರ್ಲಿ ಎಂಬ ಮುದ್ದಾದ ನಾಯಿಯ ಕತೆಯಿರುವ ‘777 ಚಾರ್ಲಿ’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ.ಕನ್ನಡ, ತಮಿಳು, ತೆಲುಗು,

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್ Read More »

ಸಿನಿಮಾ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್
Scroll to Top