karnataka

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 100 ಅಡಿ ಆಳಕ್ಕೆ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ ನೂರು ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದ್ದು, ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಚಾಲಕರಾದ […]

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.24: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.   ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು.  

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಇಂದು ‘ರಾಷ್ಟ್ರೀಯ ದಂತ ವೈದ್ಯರ ದಿನ’ದ ಅಂಗವಾಗಿ ಪೂರ್ವಾಹ್ನ 10 ರಿಂದ ಸಾಯಂಕಾಲ 6 ರವರೆಗೆ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಹೊಸಂಗಡಿಯ ಖ್ಯಾತ ಉದ್ಯಮಿ ಶ್ರೀ ಪೇಮ್‍ಕುಮಾರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ಡಾ|| ಮುರಲೀಮೋಹನ್ ಚೂಂತಾರು ಇವರು ಭಾರತ ಕಂಡ ಶ್ರೇಷ್ಠ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಮಧುಗಿರಿ , ಡಿ.24: ಕುಟುಂಬಸ್ಥರ ವಿರೋಧದ ನಡುವೆಯೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಕೊಲೆ ಮಾಡಿ ಮನೆಯಲ್ಲೇ ಹೂತುಹಾಕಿರುವ ಘಟನೆ ನಡೆದಿದ್ದು, ಆರೋಪಿ ಗಂಡ ತಲೆಮರೆಸಿಕೊಂಡಿದ್ದಾನೆ. ಮಧುಗಿರಿ ತಾಲೂಕಿನ ಹೊಸಇಟಕಲೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ತಪಾಸಣೆಯ ವೇಳೆ ಮನೆಯಲ್ಲೇ 16 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಮೃತ ಬಾಲಕಿಯ ಅಕ್ಕ ಶ್ವೇತಾಳಿಂದ ಪ್ರಕರಣ ಬೆಳಕಿಗೆ ಬಂದಿದೆ.   ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹಿತೆಯೂ ಆಗಿದ್ದಳು. 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಾಲಕಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ Read More »

ಕರ್ನಾಟಕ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕಳೆದ ದಿನ ತಡರಾತ್ರಿ ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.ಘಟನೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಂದು (ಗುರುವಾರ) ಮುಂಜಾನೆ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು. ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ಇಂದಿನಿಂದ

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆ ➤ ಐವರ್ನಾಡು ಮತ್ತು ಅರಂಬೂರಿನಲ್ಲಿ ಬಿಜೆ.ಪಿ.ಜಿಲ್ಲಾಧ್ಯಕ್ಷರಿಂದ ಮತ ಯಾಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಐವರ್ನಾಡು ಮತ್ತು ಆಲೆಟ್ಟಿ ಗ್ರಾಮದ ಅರಂಬೂರು ವಾರ್ಡುಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಕಾರ್ಯಕರ್ತರ ಸಭೆ ನಡೆಸಿ ಮತಯಾಚನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬೂಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ , ಪಕ್ಷದ

ಗ್ರಾಮ ಪಂಚಾಯಿತಿ ಚುನಾವಣೆ ➤ ಐವರ್ನಾಡು ಮತ್ತು ಅರಂಬೂರಿನಲ್ಲಿ ಬಿಜೆ.ಪಿ.ಜಿಲ್ಲಾಧ್ಯಕ್ಷರಿಂದ ಮತ ಯಾಚನೆ Read More »

ಕರಾವಳಿ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ Read More »

ಕರಾವಳಿ
Scroll to Top