karnataka

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.22: ತಾಲೂಕಿನ 57 ಗ್ರಾಪಂಗಳಿಗೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.ಸಾಲಿನಲ್ಲಿ ನಿಂತುಕೊಂಡು ಮಾಸ್ಕ್ ಧರಿಸಿದ ಮತದಾರರು, ಓಟು ಹಾಕಲು ಆಗಮಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, 822 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, 1925 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ […]

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಡಿ.22: ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ ಪಂಜ ಲಯನ್ಸ್ ಕ್ಲಬ್ ನ್ನು ಪ್ರತಿನಿಧಿಸಿ ಲಯನ್ಸ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಸುಮಾರು ದೇಶಾದ್ಯಂತ 80ಕ್ಕಿಂತ ಹೆಚ್ಚಿನ ಲಯನ್ಸ್ ಜಿಲ್ಲೆಯ ಪ್ರತಿನಿಧಿಸಿ ವಿಶ್ವಶಾಂತಿಯ ಕಲಾಕೃತಿ ಗಳಲ್ಲಿ ಜಸ್ವಿತ್ ತೋಟ ಇವರ ಕಲಾಕೃತಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.22: ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಲಾರಿಯೊಂದು ನದಿಗೆ ಉರುಳಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಂದು ಮುಂಜಾನೆ ಡಾಮಾರು ಸಾಗಾಟದ ಲಾರಿ, ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಸಮೀಪದ ಬೆದ್ರೋಡಿ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಇನ್ನು ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ.  

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ Read More »

ಕರಾವಳಿ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಪುತ್ತೂರಿನ ನರಿಮೊಗರು ಸಮೀಪದ ಸೇರಾಜೆ ಎಂಬಲ್ಲಿ ಕೋಳಿ ಫಾರ್ಮ್ ಕಳ್ಳರ ತಂಡವೊಂದು ನುಗ್ಗಿ ಕೋಳಿಗಳನ್ನೆ ಕಳ್ಳತನ ಮಾಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾರ್ಮ್‍ಗೆ ಅಳವಡಿಸಿದ್ದ ಪ್ಲಾಸ್ಟೀಕ್ ಕೋಟೆಡ್ ನೆಟ್ ತುಂಡರಿಸಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಇದು ಕಳ್ಳರ ಕೃತ್ಯವೆಂಬುವ ಶಂಕೆ ವ್ಯಕ್ತವಾಗಿದೆ. ನರಿಮೊಗರು ಸೇರಾಜೆ ಮಾಮರ ಪೌಲ್ಟ್ರೀ ಫಾರ್ಮ್‍ನ ಮಾಲಕ ರವಿರಾಜ್ ಅವರು ಸಂಜೆ ಫಾರ್ಮ್‍ನಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದ್ದರು. ಬೆಳಿಗ್ಗೆ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.! Read More »

ಕರಾವಳಿ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು. ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸಖಿ (ಒಎಸ್‍ಸಿ) ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್  Read More »

ಕರಾವಳಿ, ಕರ್ನಾಟಕ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳದಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ರಾಷ್ರ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಮತ್ತು ಊರ್ವಸ್ಟೋರ್ ಪೊಲೀಸ್ ಠಾಣೆ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳ ನಗರದಲ್ಲಿ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾಧಿಕಾರಿ ರಾಜು, ಸಿಪಿಸಿ ಬಸವರಾಜು, ಜಿಲ್ಲಾ ಸಲಹೆಗಾರ ಡಾ.ಹನುಮಂತರಾಯಪ್ಪ, ಆಪ್ತ ಸಮಾಲೋಚಕ ವಿಜಯ್ ಕುಮಾರ್, ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.  

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳದಿಂದ ಕಾರ್ಯಾಚರಣೆ Read More »

ಕರಾವಳಿ

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಎರಡೂವರೆ ವರ್ಷಗಳ ಹಿಂದೆ ಬಂಟ್ವಾಳದ ಮಣಿಹಳ್ಳದಲ್ಲಿ ಮಧ್ಯರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದು ಹಾಗೂ ಹಲ್ಲೆ ನಡೆಸಲು ಬಂದ ಪ್ರಕರಣಕ್ಕೆ ಸಂಬಂಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೋಮವಾರ ತೀರ್ಪು ನೀಡಿದ್ದು, ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 3 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಾರಿಪಳ್ಳ ನಿವಾಸಿ ಸದ್ದಾಂ ಹುಸೈನ್, ಕುಪ್ಪೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಶಿಕ್ಷೆಗೊಳಪಟ್ಟವರು. ಮತ್ತೋರ್ವ ಆರೋಪಿ ಮಹಮ್ಮದ್

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ

ಸುರತ್ಕಲ್: ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:  ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ. ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ಸುರಕ್ಷತೆಯ ರಬ್ಬರ್ ಟ್ಯೂಬ್ ಹಾಕಿ ಈಜಿ ಬಲೆ ಬಿಡುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್‌ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ

ಸುರತ್ಕಲ್: ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಮೃತ್ಯು Read More »

ಕರಾವಳಿ

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಯುವ ಸಬಲೀಕರಣ ನಿಗಮ ಸ್ಥಾಪನೆ, ಯುವಜನ ಹಕ್ಕು ಹಾಗೂ ಯುವಜನ ಆಯೋಗ ಜಾರಿಗೊಳಿಸುವಂತೆ ನಗರದ ಯುವ ಮುನ್ನಡೆಯ ಯುವಿಗಳು ಜಿಲ್ಲಾಧಿಕಾರಿ ಸೇರಿದಂತೆ ಸಂಸದ, ಸಚಿವ ಹಾಗೂ ಶಾಸಕರಿಗೆ ಮನವಿ‌ ಸಲ್ಲಿಸಿದರು. ಯುವ ಮುನ್ನಡೆ ತಂಡವು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿಯವರ ಕಚೇರಿಗಳಿಗೆ ಭೇಟಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ,

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ Read More »

ಕರಾವಳಿ

ಕಡಬ :ಬಲ್ಯ-ದೇರಾಜೆ 2ನೇ ವಾರ್ಡ್ ಸಂಪಡ್ಕ ಕಾಲೊನಿ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.21: ಇಲ್ಲಿನ ಬಲ್ಯ ಗ್ರಾಮದ ದೇರಾಜೆ 2ನೇ ವಾರ್ಡಿನ ಸಂಪಡ್ಕ ಪ.ಜಾತಿ ಕಾಲೊನಿ ನಿವಾಸಿಗಳು ತಮ್ಮೂರಿನ ನಾನಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಪಂಚಾಯತ್ ಚುನಾವಣೆ ಬಹಿಸ್ಕರಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಕಾಲೊನಿಯ ಸುಮಾರು 15 ಕುಟುಂಬಗಳು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ತಮ್ಮ ಕಾಲೊನಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದಿರುವುದು, ಸಾರ್ವಜನಿಕ ರಸ್ತೆ ಹದಗೆಟ್ಟಿರುವುದು, ಶೌಚಾಲಯ ಪಾಳು ಬಿದ್ದರೂ ಸರಿಪಡಿಸದೆ ಇರುವುದು, ಪರಿಶಿಷ್ಟ ಜಾತಿಯವರ ರುದ್ರಭೂಮಿ ಅಭಿವೃದ್ದಿ ಮಾಡದಿರುವುದು, ಕಾಲೊನಿ ಹೆಸರಿನಲ್ಲಿ ಬೇರೆಡೆ ಸೌಲಭ್ಯಗಳನ್ನು ಒದಗಿಸುವುದು

ಕಡಬ :ಬಲ್ಯ-ದೇರಾಜೆ 2ನೇ ವಾರ್ಡ್ ಸಂಪಡ್ಕ ಕಾಲೊನಿ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರ Read More »

ಕರಾವಳಿ
Scroll to Top