karnataka

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.     ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ […]

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ Read More »

ಕರ್ನಾಟಕ, ಸಿನಿಮಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 04: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಸುದರ್ಶನ ಹೋಮ ನಡೆಸಲಾಯಿತು.     ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಪಾಲರಾದ ಉದಯಕುಮಾರ್ ದಂಪತಿಗಳು ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಮ್ ವೆಂಕಪ್ಪ ಗೌಡ, ಕಾಲೇಜಿನ ಪ್ರಾಧ್ಯಪಕರಾದ ಉಷಾ ಅಂಕೋಲೇಖರ್,ಡಾ.ತಾರಕೇಶ್ವರಿ ಯು.ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗೀತಾ ಕಲ್ಲೆಮಠ, ಬಿಂದು ಹರಿಹರಪಲ್ಲತಡ್ಕ ಸೇರಿದಂತೆ ಮತ್ತಿತರರಸು ಪೂಜೆಯಲ್ಲಿ ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ Read More »

ಕರಾವಳಿ

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 04: ಉಪ್ಪಿನಂಗಡಿಯಲ್ಲಿ ಮಂಗಳವಾರ(ನ.03) ರಾತ್ರಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.   ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪರಿಯಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ಭೀಕಾರವಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಬಜತ್ತೂರು ಗ್ರಾಮದ ನಿವಾಸಿ ನಾಗೋಜಿಯ ನಾರಯಣ ಗೌಡ (44)ಎಂಬುವರು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾಋಇ ಠಾಣೆ ಎಸ್ ಐ ರಾಮ ನಾಯ್ಕರವರು

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.  ಶ್ರೀನಗರದಲ್ಲಿ ಇಂದು  ( ನ. 03) ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾದರು. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ರವೀ ನಿರ್ದೇಶನದ “ಮಿಥಿಲೆಯ ಸೀತೆಯರು” ಸೋಮಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಅಲ್ಲದೆ ರವೀ ನಿರ್ದೇಶನದ “ಹರಕೆಯ ಕುರಿ”, ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ Read More »

ಕರ್ನಾಟಕ

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು  ನ. 03: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಾವಣೆಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡವು ತನಿಖೆ ನಡೆಸಿದಾಗ ಬರೋಬ್ಬರಿ 5. 50 ಲಕ್ಷ ನಕಲಿ ನೋಟು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರವಾಗಿ ವಿಚಾರಣೆ ನಡೆಸಿದಾಗ ಅಂತರ್ ರಾಜ್ಯ ಖೋಟಾನೋಟು ಜಾಲವು ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ Read More »

ಕರಾವಳಿ

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.     ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ.

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ Read More »

ಕರಾವಳಿ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ.   ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 03: ಪೆರುವಾಜೆಯಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯ ಉದ್ಘಾಟನೆಯನ್ನು  ನೆರವೇರಿಸಿದರು. ಪೆರುವಾಜೆ ಗ್ರಾಮದ ಅರ್ನಾಡಿ ಕುಕ್ಕುಮೂಲೆ, ವೈಪಾಲ, ಕೊಟ್ಟೆಕಾಯಿ, ರಾಮತ್ತಿ ಕುಮೇರಿ ರಸ್ತೆಗೆ ಶಾಸಕರ ವಿಶೇಷ ಅನುದಾನದಲ್ಲಿ ಬಿಡುಗಡೆಯಾದ ಸುಮಾರು 10 ಲಕ್ಷದ ಯೋಜನೆಯ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಶಾಸಕ ಎಸ್. ಅಂಗಾರರವರು ನವೆಂಬರ್ 01 ರಂದು ಉದ್ಘಾಟಿಸಿದರು. ಲೋಕಯ್ಯ ಗೌಡ ಕೊಟ್ಟೆಕಾಯಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರರವರನ್ನು ಸದಾನಂದ ಭಟ್ ಅರ್ನಾಡಿ ಶಾಲು ಹೊದಿಸಿ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು Read More »

ಕರಾವಳಿ

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 03: ಮಂಗಳೂರು ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟದ ಜಾಲ ಪತ್ತೆಯಾಗುತ್ತಲೇಯಿದೆ. ಅದರಂತೆ ಮಂಜನಾಡಿ ಗ್ರಾಮದ ವಿಜಯನಗರದದಲ್ಲಿ ಸುಮಾರು 23 ಕೆಜಿ ಗಾಂಜಾವನ್ನು ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಓರ್ವ ಆರೋಪಿಯನ್ನು ಬಂದಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ತೌಡುಗೋಳಿಯ ಅಬ್ದುಲ್ ಖಾದರ್ ತನ್ಸಿ(23) ಎಂದು ಗುರುತಿಸಲಾಗಿದೆ. ಆರೋಪಿ ಮಂಜನಾಡಿಯ ವಿಜಯನಗರದಿಂದ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪೊಲೀಸರು 23 ಕೆ,ಜಿ 480 ಗ್ರಾಂ ತೂಕದ ಗಾಂಜಾ, ಬೈಕ್ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top