karnataka

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣದಲ್ಲಿ ಹಣವನ್ನು ಅವರು ವಶಪಡಿಸಿಕೊಂಡರು, ಆದರೆ ಅವರು ಅದನ್ನು ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತೆ ಕೇಸ್ ದಾಖಲಿಸಿದ್ದರು. ನನ್ನ ವಿರುದ್ಧ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಶಂಕರ […]

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ Read More »

ಕರ್ನಾಟಕ

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್‌ನಲ್ಲಿನ (PNB) ಎಲ್ಲಾ ಠೇವಣಿ ಮತ್ತು ಹೂಡಿಕೆಗಳನ್ನು ಹಿಂಪಡೆಯಲು ಮತ್ತು ಬ್ಯಾಂಕ್ ಜೊತೆ ಯಾವುದೇ ವ್ಯವಹಾರವನ್ನು ನಿಲ್ಲಿಸುವಂತೆ ಆದೇಶಿಸಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!              Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ           Read More »

ಕರ್ನಾಟಕ

ಶಿರೂರು: ‘ಭಾರತೀಯ ನೌಕಾಪಡೆ ಕಾರ್ಯಾಚರಣೆ’ ಪುನರಾರಂಭ      ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ..!              

(ನ್ಯೂಸ್ ಕಡಬ) newskadaba.c0m ಶಿರೂರು, ಆ. 15.  ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ಎರಡನೇ ದಿನದಲ್ಲಿ ಭಾರತೀಯ ನೌಕಾಪಡೆಯು ಗಂಗವಳ್ಳಿ ನದಿಯಲ್ಲಿ ಲಾರಿಯ ಹೆಚ್ಚಿನ ಭಾಗಗಳನ್ನು ಪತ್ತೆಯಾಗಿದ್ದು ಹೂಳೆತ್ತುವ ಅಗತ್ಯವಿದೆ ಎಂದು ಹೇಳಲಾಗಿದೆ. ಭಾರತೀಯ ಸೇನೆಯ ಡೈವರ್‌ಗಳು ಮತ್ತು ಈಶ್ವರ್ ಮಲ್ಪೆ ಇಬ್ಬರೂ, ನಾಪತ್ತೆಯಾದ ಅರ್ಜುನ್ ಮತ್ತು ಇತರ ಇಬ್ಬರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಟ್ರಕ್‌ನ ಒಂದು ಭಾಗ ಮಾತ್ರ ಕಂಡುಬಂದಿದ್ದರಿಂದ ಸ್ವಲ್ಪ ಭರವಸೆ ಕಂಡು ಬಂದಿದ್ದು, ನೌಕಾಪಡೆಯು ನದಿಯನ್ನು ಶೋಧಿಸಲು

ಶಿರೂರು: ‘ಭಾರತೀಯ ನೌಕಾಪಡೆ ಕಾರ್ಯಾಚರಣೆ’ ಪುನರಾರಂಭ      ಅಪಾರ ಪ್ರಮಾಣದ ಭಗ್ನಾವಶೇಷ ಪತ್ತೆ..!               Read More »

ಕರ್ನಾಟಕ

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ಇಂದಿನಿಂದ “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕದಲ್ಲಿ ಮಾತ್ರವಲ್ಲದೇ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದ್ದು, ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಗ್ಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್ ರಮ್‌ಗಳಿವೆ. ಆದರೆ ಅದೆಲ್ಲಾ ವಿದೇಶದ್ದು. ಇದೀಗ ಭಾರತವು ತನ್ನದೇ ಆದ ವಿಶೇಷ ರಮ್ ನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಇದು ಕರ್ನಾಟಕದ ಮೈಸೂರಿನ ನಂಜನಗೂಡಿನಲ್ಲಿ ಉತ್ಪಾದನೆಯಾಗಿದೆ ಅನ್ನೋದೇ ಮತ್ತೊಂದು ವಿಶೇಷ. ಬರೋಬ್ಬರಿ 8

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

50 ಕೋಟಿ ರೂ. ಮಾನನಷ್ಟ ಮೊಕದಮ್ಮೆ..!         ವಿಧಾನ ಪರಿಷತ್‌ ಸದಸ್ಯ- ಹೆಚ್.ವಿಶ್ವನಾಥ್‌ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನನ್ನ ವಿರುದ್ಧ 50 ಕೋಟಿ ರೂ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದಾರೆ. ಈ ಕುರಿತು ನನಗೆ ನೋಟಿಸ್ ಬಂದಿದೆ. ನಾನೂ ಲಾಯರ್ ಆಗಿದ್ದವನು. ಇದಕ್ಕೆಲ್ಲ ಉತ್ತರ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಹೇಳಿದರು. ಮುಡಾ ಹಗರಣ ತನಿಖೆ ಮಾಡುತ್ತೇವೆ ಮತ್ತು ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

50 ಕೋಟಿ ರೂ. ಮಾನನಷ್ಟ ಮೊಕದಮ್ಮೆ..!         ವಿಧಾನ ಪರಿಷತ್‌ ಸದಸ್ಯ- ಹೆಚ್.ವಿಶ್ವನಾಥ್‌ ಹೇಳಿಕೆ Read More »

ಕರ್ನಾಟಕ

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು. ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದು, ಕಾಂಗ್ರೆಸ್‌ ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್ Read More »

ಕರ್ನಾಟಕ

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರದ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ Read More »

ಕರ್ನಾಟಕ

78ನೇ ಸ್ವಾತಂತ್ರ್ಯೋತ್ಸವದ ಸಡಗರ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  78ನೇ ಸ್ವಾತಂತ್ರ್ಯೋತ್ಸವದ ಸಡಗರ ದೇಶದೆಲ್ಲೆಡೆ ಭಾರತೀಯರು ದೇಶಪ್ರೇಮ ಮೆರೆದಿದ್ದಾರೆ. ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು.   ಸಿಎಂ ಸಿದ್ದರಾಮಯ್ಯ ಅವರು ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.  

78ನೇ ಸ್ವಾತಂತ್ರ್ಯೋತ್ಸವದ ಸಡಗರ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top