karnataka

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ➤ ಎಂಟು ರೋಗಿಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಕಡಬ, ಆ.06:  ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್‌ನ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.   ಗುರುವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಕೋವಿಡ್-19 ರೋಗಿಗಳನ್ನು […]

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ➤ ಎಂಟು ರೋಗಿಗಳು ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು

 (ನ್ಯೂಸ್ ಕಡಬ) newskadaba.com ಕಡಬ, ಆ.05: ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡಲು ಕೊನೆಗೂ ಸಮಯ ಕೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು. ಕಡಬ ವಲಯದ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನ ನೆರವೇರಿಸಿದ್ದಾರೆ.   ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.  ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಯುವಕರ ತಂಡವೊಂದು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು

(ನ್ಯೂಸ್ ಕಡಬ) newskadaba.com ಕಡಬ, ಆ.05:  ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ.   ಕಡಬ ತಾಲೂಕಿನ ಕೊಂಬಾರಿನಲ್ಲಿ ‘ಅಯೋಧ್ಯೆದಾರ್’ ಎಂದೇ ಗೌರವಪೂರ್ವಕವಾಗಿ ಎಲ್ಲರಿಂದಲೂ ಕರೆಯಲ್ಪಡುತ್ತಿದ್ದವರು ಶ್ರೀಯುತ ಮಾಯಿಲಪ್ಪ. 1990 ರಲ್ಲಿ ಆಯೋಧ್ಯೆಗೆ ತೆರಳಿ ರಾಮ ಮಂದಿರ ಕನಸು ಕಂಡ ರಾಮ ಭಕ್ತ ಕೊಂಬಾರು ಗದ್ದೆ ಶ್ರೀ ಮಾಯಿಲಪ್ಪ ಗೌಡರು. ಇವರು ಈಗ ರಾಮ

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು Read More »

ಕರಾವಳಿ, ಕರ್ನಾಟಕ

ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com.ಕಡಬ,ಆ.5: 33 ಕೆ.ವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ನಡೆಯುತ್ತಿರುವುದರಿಂದಾಗಿ ನಾಳೆ ಬೆಳಗ್ಗೆ  10 ರಿಂದ  ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಹಾಗಾಗಿ 33/11 ಕೆವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.

ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ

ಪತ್ನಿಯನ್ನು ಕೊಲೆಮಾಡಿ ಪತಿ ಪರಾರಿ➤ ಅನಾಥವಾದ ಕಂದಮ್ಮಗಳು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಆ.5: ತಡರಾತ್ರಿ ಪತ್ನಿಯನ್ನು ಕೊಂದು ಪತಿಯೊಬ್ಬ ಪರಾರಿಯಾಗಿದ್ದು. ಅವರ ಇಬ್ಬರು ಮಕ್ಕಳು ಅಮ್ಮನ ಶವದ ಜತೆಯೇ ರಾತ್ರಿಯಿಡೀ ಕಳೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರತಹಳ್ಳಿಯ ಮುನೇಕೊಳಲು ಸಮೀಪದ 26 ವರ್ಷದ ಸಂಧ್ಯಾ ಎನ್ನುವವರು ಕೊಲೆಯಾದವರು. ತಡರಾತ್ರಿ ಸಂಧ್ಯಾ ಅವರು ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ನಾಗೇಶ್‌ ಅವರನ್ನು ಕೊಲೆ ಮಾಡಿದ್ದ. ತಮ್ಮ ತಾಯಿ ಸತ್ತಿದ್ದಾಳೆ ಎಂಬ ಅರಿವೂ ಇಲ್ಲದ ಇಬ್ಬರು ಮಕ್ಕಳು ಅಲ್ಲಿಯೇ ರಾತ್ರಿಯಿಡೀ ಕಳೆದಿದ್ದಾರೆ. ಬೆಳಗ್ಗೆ ಮೂರು ವರ್ಷದ ಮಗು ಎದ್ದಾಗ ತಾಯಿ ರಕ್ತದ

ಪತ್ನಿಯನ್ನು ಕೊಲೆಮಾಡಿ ಪತಿ ಪರಾರಿ➤ ಅನಾಥವಾದ ಕಂದಮ್ಮಗಳು Read More »

ಕರ್ನಾಟಕ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆ ➤ ಅಭಯ ಆಂಜನೇಯ ಸನ್ನಿಧಾನದಲ್ಲಿ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ.05:  ಅಯೋಧ್ಯೆಯಲ್ಲಿ ಇಂದು ಶ್ರೀ ರಾಮ ಮಂದಿರದ ಭೂಮಿ ಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಭ್ರಹ್ಮಣ್ಯದಲ್ಲಿನ ಅಭಯ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ 108 ಬಾರಿ ಶ್ರೀ ರಾಮ ಜೈ ರಾಮ್ ಮಂತ್ರ ಹೇಳುವ ಮೂಲಕ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು.

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆ ➤ ಅಭಯ ಆಂಜನೇಯ ಸನ್ನಿಧಾನದಲ್ಲಿ ವಿಶೇಷ ಪೂಜೆ Read More »

ಕರಾವಳಿ

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ ,ಆ.5: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ನೆರವೇರಿಸಲಿದ್ದು. ಈ ಕಾರ್ಯಕ್ರಮ ಯಶಸ್ವಿಯಾಗಲಿ ಮುಂದೆ ಮಂದಿರ ನಿರ್ಮಾಣ ಕಾರ್ಯವು ಕೂಡ ಸೂಸುತ್ರವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ Read More »

ಕರಾವಳಿ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ , ಆ.05:  ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.   ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05:  ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ರವರು ರಕ್ತ ದಾನ ಮಾಡಿದರು. ಪ್ರತೀ 3 ತಿಂಗಳಿಗೊಂದು ಬಾರಿ ರಕ್ತದಾನ ಮಾಡುವ ಶೋಭಾ ಕರಂದ್ಲಾಜೆ, ಕಳೆದ ದಿನ ರಾಷ್ಟ್ರೋತ್ತಾನ ರಕ್ತ ನಿಧಿಯ ಮೂಲಕ ಥಲಸ್ಸೆಮಿಯಾ ಎಂಬ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ರಕ್ತದಾನ ಮಾಡಿದರು.   ಬೆಂಗಳೂರಿನ ರಾಷ್ಟ್ರೋತ್ತಾನ ರಕ್ತ ನಿಧಿಯ ವಿಶೇಷ ರೀತಿಯ ಸೇವೆ ಮಾಡುತ್ತಿದೆ. ಪ್ರತೀ ತಿಂಗಳು 700ಕ್ಕೂ ಅಧಿಕ ಥಲಸ್ಸೆಮಿಯಾ ಹಾಗೂ ಇತರ ವಿಶಿಷ್ಟ ಕಾಲಯಿಲೆಗಳಿಂದ

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04:  ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.   ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ
Scroll to Top